ETV Bharat / city

ನೆರೆ ಪರಿಹಾರ ವಿತರಿಸುವಲ್ಲಿ ಸರ್ಕಾರ ವಿಫಲ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ

author img

By

Published : Dec 3, 2019, 7:48 PM IST

ನೆರೆ ಪರಿಹಾರ ವಿತರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದರು.

congress press meet
ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್

ಶಿವಮೊಗ್ಗ: ನೆರೆ ಹಾವಳಿಯಿಂದ ಉಂಟಾದ ನಷ್ಟದ ಪರಿಹಾರವನ್ನು ಸಮರ್ಪಕವಾಗಿ ವಿತರಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಸಂಪೂರ್ಣ ವಿಫಲಗೊಂಡಿದೆ ಎಂದು ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ನೆರೆಯಿಂದ ಸಂಭವಿಸಿದ ಅನಾಹುತಗಳಿಗೆ, ಮನೆ ಕಳೆದುಕೊಂಡವರಿಗೆ ಪರಿಹಾರ ಸರಿಯಾಗಿ ನೀಡಿಲ್ಲ ಎಂದು ಜಿಲ್ಲಾಡಳಿತಕ್ಕೆ ವರದಿ ನೀಡಲಾಗಿತ್ತು. ಆದರೆ, ವರದಿ ನೀಡಿದ ನಂತರವೂ ಪರಿಹಾರ ಒದಗಿಸಿಲ್ಲ ಎಂದು ದೂರಿದರು.

ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಅನಾಹುತಕ್ಕೆ ತಕ್ಕಂತೆ ₹ 10 ಸಾವಿರ, ₹ 25 ಸಾವಿರ ಹಾಗೂ‌ ₹ 1 ಲಕ್ಷ ನೀಡಲು ₹ 50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದರು. ಆದ್ರೆ ಇದರಂತೆ ಪರಿಹಾರ ನೀಡಿಲ್ಲ. ಗ್ರಾಮಾಂತರ ಭಾಗದಲ್ಲಿ ಕೇವಲ ₹ 2.60 ಕೋಟಿ ಪರಿಹಾರ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಳೆ, ಪ್ರವಾಹದಿಂದ 1,127 ಮನೆಗಳು ಹಾನಿಯಾಗಿದ್ದವು. ಅಧಿಕಾರಿಗಳೂ ಸರ್ವೆ ನಡೆಸಿದ್ದರು. ಮಳೆ ನಿಂತ ಬಳಿಕ 700ಕ್ಕೂ ಹೆಚ್ಚು ಮನೆಗಳು ಉರುಳಿವೆ. ಇದರ ಸರ್ವೆ ಮಾಡಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಉಪ ಚುನಾವಣಾ ಪ್ರಚಾರ ಮುಗಿದ ಬಳಿಕ ಜಿಲ್ಲೆಯಲ್ಲಿ ಮನೆಗಳ ನಿರ್ಮಿಸಲು ಹಣ ಬಿಡುಗಡೆ ಮಾಡಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ: ನೆರೆ ಹಾವಳಿಯಿಂದ ಉಂಟಾದ ನಷ್ಟದ ಪರಿಹಾರವನ್ನು ಸಮರ್ಪಕವಾಗಿ ವಿತರಿಸಲು ಸರ್ಕಾರ ಹಾಗೂ ಜಿಲ್ಲಾಡಳಿತ ಸಂಪೂರ್ಣ ವಿಫಲಗೊಂಡಿದೆ ಎಂದು ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ನೆರೆಯಿಂದ ಸಂಭವಿಸಿದ ಅನಾಹುತಗಳಿಗೆ, ಮನೆ ಕಳೆದುಕೊಂಡವರಿಗೆ ಪರಿಹಾರ ಸರಿಯಾಗಿ ನೀಡಿಲ್ಲ ಎಂದು ಜಿಲ್ಲಾಡಳಿತಕ್ಕೆ ವರದಿ ನೀಡಲಾಗಿತ್ತು. ಆದರೆ, ವರದಿ ನೀಡಿದ ನಂತರವೂ ಪರಿಹಾರ ಒದಗಿಸಿಲ್ಲ ಎಂದು ದೂರಿದರು.

ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಅನಾಹುತಕ್ಕೆ ತಕ್ಕಂತೆ ₹ 10 ಸಾವಿರ, ₹ 25 ಸಾವಿರ ಹಾಗೂ‌ ₹ 1 ಲಕ್ಷ ನೀಡಲು ₹ 50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದರು. ಆದ್ರೆ ಇದರಂತೆ ಪರಿಹಾರ ನೀಡಿಲ್ಲ. ಗ್ರಾಮಾಂತರ ಭಾಗದಲ್ಲಿ ಕೇವಲ ₹ 2.60 ಕೋಟಿ ಪರಿಹಾರ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಳೆ, ಪ್ರವಾಹದಿಂದ 1,127 ಮನೆಗಳು ಹಾನಿಯಾಗಿದ್ದವು. ಅಧಿಕಾರಿಗಳೂ ಸರ್ವೆ ನಡೆಸಿದ್ದರು. ಮಳೆ ನಿಂತ ಬಳಿಕ 700ಕ್ಕೂ ಹೆಚ್ಚು ಮನೆಗಳು ಉರುಳಿವೆ. ಇದರ ಸರ್ವೆ ಮಾಡಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಉಪ ಚುನಾವಣಾ ಪ್ರಚಾರ ಮುಗಿದ ಬಳಿಕ ಜಿಲ್ಲೆಯಲ್ಲಿ ಮನೆಗಳ ನಿರ್ಮಿಸಲು ಹಣ ಬಿಡುಗಡೆ ಮಾಡಿಸಬೇಕು ಎಂದು ಆಗ್ರಹಿಸಿದರು.

Intro:ಮಳೆ,‌ನೆರೆ ಪರಿಹಾರ ವಿತರಿಸುವಲ್ಲಿ ಸರ್ಕಾರ, ಜಿಲ್ಲಾಡಳಿತ ವಿಫಲ: ಹೆಚ್.ಎಸ್. ಸುಂದರೇಶ್.

ಶಿವಮೊಗ್ಗ: ಆಗಸ್ಟ್ ನಂತರದಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಉಂಟಾದ ನಷ್ಟದ ಪರಿಹಾರವನ್ನು ಸಮರ್ಪಕವಾಗಿ ವಿತರಿಸುವಲ್ಲಿ‌ ಸರ್ಕಾರ ಹಾಗೂ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಶಿವಮೊಗ್ಗ ನಗರದಲ್ಲಿ ಮಳೆ ಹಾನಿಯ ಅನಾಹುತಗಳು, ಮನೆಗಳನ್ನು ಕಳೆದು ಕೊಂಡವರಿಗೆ ಪರಿಹಾರ ಸರಿಯಾಗಿ ನೀಡಿಲ್ಲ ಎಂದು ಜಿಲ್ಲಾಡಳಿತಕ್ಕೆ ವರದಿ ನೀಡಲಾಗಿತ್ತು. ವರದಿ ನೀಡಿದ ನಂತ್ರ ಪರಿಹಾರ ತಲುಪದೆ ಇರುವವರಿಗೆ ಪರಿಹಾರವನ್ನು ಸ್ವಲ್ಪ ಪ್ರಮಾಣದಲ್ಲಿ ನೀಡಲಾಗಿದೆ.Body:ಆದ್ರೆ ಸರ್ಕಾರ ನೀಡಿದ ಭರವಸೆಯಂತೆ ಪರಿಹಾರ ನೀಡಿಲ್ಲ. ಸಿಎಂ ಪರಿಹಾರವನ್ನು ಅನಾಹುತಕ್ಕೆ ತಕ್ಕಂತೆ 10 ಸಾವಿರ, 25 ಸಾವಿರ ಹಾಗೂ‌ 1 ಲಕ್ಷ ನೀಡಲು 50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಆದ್ರೆ ಇದರಂತೆ ಪರಿಹಾರ ನೀಡಿಲ್ಲ. ಗ್ರಾಮಾಂತರ ಭಾಗದಲ್ಲಿ 2 ಕೋಟಿ 60 ಲಕ್ಷ ರೂಗಳನ್ನು ಪರಿಹಾರವಾಗಿ ನೀಡಲಾಗಿದೆ. ಮಳೆ, ಪ್ರವಾಹದಿಂದ 1.127 ಮನೆಗಳು ಹಾನಿಗೆ ಒಳಗಾಗಿದ್ದವು.Conclusion:ಇದನ್ನು ಅಧಿಕಾರಿಗಳು‌ ಸರ್ವೆ ನಡೆಸಿದ್ದರು. ಮಳೆ ನಿಂತ ಮೇಲೆ 700 ಕ್ಕೂ ಹೆಚ್ಚು ಮನೆಗಳು ಬಿದ್ದಿವೆ. ಇದರ ಸರ್ವೆಯನ್ನು ಮಾಡಿಸಿಲ್ಲ. ಜಿಲ್ಲೆಯಲ್ಲಿ ಸರಿಯಾಗಿ ಪರಿಹಾರ ಒದಗಿಸಿಲ್ಲ ಎಂದು‌ ಆರೋಪಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ಪ್ರಚಾರ ಮುಗಿದ ನಂತ್ರ ಜಿಲ್ಲೆಗೆ ಬಂದು ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾಜಿ ಶಾಸಕ ಚಂದ್ರಶೇಖರಪ್ಪ, ಇಸ್ಮಾಯಿಲ್ ಖಾನ್, ರೇಖಾ ರಂಗನಾಥ್ ಸೇರಿದಂತೆ ಇತರರು ಹಾಜರಿದ್ದರು.

ಬೈಟ್: ಹೆಚ್. ಎಸ್. ಸುಂದರೇಶ್. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.