ETV Bharat / city

ಜೆಎನ್​​​​ಯು ವಿದ್ಯಾರ್ಥಿಗಳನ್ನು ರಾಷ್ಟ್ರೀಯರನ್ನಾಗಿ ಮಾಡಬೇಕಿದೆ: ಕಲ್ಲಡ್ಕ ಪ್ರಭಾಕರ್​​​ ಭಟ್

ನಾಗರಿಕ ವೇದಿಕೆ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ತುಮಕೂರಿನಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್​ ಭಟ್​ ಅವರು, ಹಿಂದೂ ದೇಶದಲ್ಲಿರುವ ಎಲ್ಲರೂ ಹಿಂದೂಗಳೇ ಎಂದರು.

author img

By

Published : Jan 7, 2020, 4:07 PM IST

Updated : Jan 7, 2020, 4:24 PM IST

awareness about the citizen amendment act
ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಜಾಥಾ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಜಾಥಾ

ತುಮಕೂರು: ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ರಾಷ್ಟ್ರೀಯರನ್ನಾಗಿ ಮಾಡುವಂತಹ ಮಹತ್ಕಾರ್ಯ ಆಗಬೇಕಿದೆ ಎಂದು ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟರು.

ನಾಗರಿಕ ವೇದಿಕೆಯಿಂದ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಜೆಎನ್​​ಯು ಅನ್ನು ದೇಶದ್ರೋಹಿಗಳನ್ನು ತಯಾರಿಸುವಂತಹ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯವನ್ನಾಗಿ ಮಾರ್ಪಾಟು ಮಾಡಲಾಗಿದೆ ಎಂದು ಆರೋಪಿಸಿದರು.

ಕಲ್ಲಡ್ಕ ಪ್ರಭಾಕರ್​​​ ಭಟ್

ವಿಶ್ವವಿದ್ಯಾಲಯಗಳಲ್ಲಿ ಅಕ್ಬರ್ ದಿ ಗ್ರೇಟ್ ಎಂಬಂತೆ ಬೋಧನೆ ಮಾಡಲಾಗಿದೆ. ಇಂತಹ ತಪ್ಪುಗಳನ್ನು ಸರಿ ಮಾಡಬೇಕಾದ ಅಗತ್ಯವೂ ಇದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಸಂಬಂಧ ಇಂತಹ ಗಲಾಟೆಗಳಿಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೆದರುವುದಿಲ್ಲ ಎಂದರು.

ಇನ್ನು, ದೇಶದ ಶಿಕ್ಷಣ ವ್ಯವಸ್ಥೆ ಕುರಿತು ಮಾತ್ರ ರಾಜ್ಯಗಳು ಪ್ರತ್ಯೇಕವಾಗಿ ನಿರ್ಧಾರ ಮಾಡಬಹುದು. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆ ದೇಶಕ್ಕೆ ಸಂಬಂಧಪಟ್ಟ ವಿಷಯ ಎಂದು ಕಲ್ಲಡ್ಕ ಪ್ರಭಾಕರ್​ ಭಟ್​ ಹೇಳಿದ್ರು.

ತುಮಕೂರು: ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ರಾಷ್ಟ್ರೀಯರನ್ನಾಗಿ ಮಾಡುವಂತಹ ಮಹತ್ಕಾರ್ಯ ಆಗಬೇಕಿದೆ ಎಂದು ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟರು.

ನಾಗರಿಕ ವೇದಿಕೆಯಿಂದ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಜೆಎನ್​​ಯು ಅನ್ನು ದೇಶದ್ರೋಹಿಗಳನ್ನು ತಯಾರಿಸುವಂತಹ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯವನ್ನಾಗಿ ಮಾರ್ಪಾಟು ಮಾಡಲಾಗಿದೆ ಎಂದು ಆರೋಪಿಸಿದರು.

ಕಲ್ಲಡ್ಕ ಪ್ರಭಾಕರ್​​​ ಭಟ್

ವಿಶ್ವವಿದ್ಯಾಲಯಗಳಲ್ಲಿ ಅಕ್ಬರ್ ದಿ ಗ್ರೇಟ್ ಎಂಬಂತೆ ಬೋಧನೆ ಮಾಡಲಾಗಿದೆ. ಇಂತಹ ತಪ್ಪುಗಳನ್ನು ಸರಿ ಮಾಡಬೇಕಾದ ಅಗತ್ಯವೂ ಇದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಸಂಬಂಧ ಇಂತಹ ಗಲಾಟೆಗಳಿಗೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೆದರುವುದಿಲ್ಲ ಎಂದರು.

ಇನ್ನು, ದೇಶದ ಶಿಕ್ಷಣ ವ್ಯವಸ್ಥೆ ಕುರಿತು ಮಾತ್ರ ರಾಜ್ಯಗಳು ಪ್ರತ್ಯೇಕವಾಗಿ ನಿರ್ಧಾರ ಮಾಡಬಹುದು. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆ ದೇಶಕ್ಕೆ ಸಂಬಂಧಪಟ್ಟ ವಿಷಯ ಎಂದು ಕಲ್ಲಡ್ಕ ಪ್ರಭಾಕರ್​ ಭಟ್​ ಹೇಳಿದ್ರು.

Intro:ಜೆ ಎನ್ ಯು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ರಾಷ್ಟ್ರೀಯರನ್ನಾಗಿ ಮಾಡಬೇಕಿದೆ..... ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ.....

ತುಮಕೂರು
ದೆಹಲಿಯ ಜವರಲಾಲ್ ನೆಹರು ಯೂನಿವರ್ಸಿಟಿಯಲ್ಲಿ ಇರುವಂತಹ ವಿದ್ಯಾರ್ಥಿಗಳನ್ನು ರಾಷ್ಟ್ರೀಯರನ್ನಾಗಿ ಮಾಡುವಂತಹ ಮಹತ್ಕಾರ್ಯ ಆಗಬೇಕಿದೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ನಾಗರಿಕ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಸಲ್ಮಾನರು ಮತ್ತು ಎಡಪಂಥೀಯರು ಸೇರಿ ಜೆಎನ್ ಯು ಅನ್ನು ದೇಶದ್ರೋಹಿಗಳನ್ನು ತಯಾರಿಸುವಂತಹ ಅರಾಷ್ಟ್ರೀಯ ವಿಶ್ವವಿದ್ಯಾಲಯವನ್ನಾಗಿ ಇದುವರೆಗೂ ಮಾಡಿದ್ದಾರೆ ಎಂದರು.
ಇದುವರೆಗೂ ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ಕಮಿಸ್ಟರೇ ನುಗ್ಗಿದ್ದಾರೆ. ಈಗ ನಾವು ಬರುತ್ತಿದ್ದೇವೆ. ಇದುವರೆಗೂ ದೇಶದ್ರೋಹಿ ಶಿಕ್ಷಣವನ್ನು ನೀಡಲಾಗಿದೆ. ದೇಶದ್ರೋಹಿ ಶಿಕ್ಷಣವನ್ನು ಬೋಧನೆ ಮಾಡಲಾಗಿದೆ. ದೇಶಾಭಿಮಾನದ ಶಿಕ್ಷಣವನ್ನು ಬೋಧಿಸಿಲ್ಲ ಎಂದರು.

ವಿಶ್ವವಿದ್ಯಾಲಯಗಳಲ್ಲಿ ಅಕ್ಬರ್ ದಿ ಗ್ರೇಟ್ ಎಂಬಂತೆ ಬೋಧನೆ ಮಾಡಲಾಗಿದೆ ಇಂತಹ ತಪ್ಪುಗಳನ್ನು ಸರಿ ಮಾಡಬೇಕಾದ ಅಗತ್ಯವಿದೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿಗೆ ತರುವ ಸಂಬಂಧ ಇಂತಹ ಚಿಲ್ಲರೆ ಗಲಾಟೆಗಳಿಗೆ ಮೋದಿ ಹಾಗೂ ಅಮಿತ್ ಶಾ ಹೆದರುವುದಿಲ್ಲ ಎಂದು ಇದೇ ವೇಳೆ ತಿಳಿಸಿದರು.

ಶಿಕ್ಷಣ ವ್ಯವಸ್ಥೆ ಬಗ್ಗೆ ಮಾತ್ರ ರಾಜ್ಯಗಳು ಪ್ರತ್ಯೇಕವಾಗಿ ನಿರ್ಧಾರ ಮಾಡಬಹುದು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆಯು ದೇಶಕ್ಕೆ ಸಂಬಂಧ ಪಟ್ಟ ವಿಷಯವಾಗಿದೆ ಎಂದು ಹೇಳಿದರು.


Body:ತುಮಕೂರು


Conclusion:
Last Updated : Jan 7, 2020, 4:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.