ತುಮಕೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಶನಿವಾರ ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ಅವರು ನಗರದ ಬನಶಂಕರಿ ಬಡಾವಣೆಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶನಿವಾರ ಬೆಳಿಗ್ಗೆ ಪ್ರಚಾರಕ್ಕೆ ಬ್ರೇಕ್ ಹಾಕಿ ಕುಟುಂಬ ಸಮೇತ ಬಂದು ಪೂಜೆಯಲ್ಲಿ ಪಾಲ್ಗೊಂಡರು. ಜಿದ್ದಾಜಿದ್ದಿನ ಕಣದಲ್ಲಿ ಬಸವರಾಜ್ ಅವರು ಚುನಾವಣಾ ಕಾರ್ಯ ತಂತ್ರ ರಚನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣಕ್ಕೆ ಇಳಿದಿದ್ದಾರೆ.