ತುಮಕೂರು: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಅವರು ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಟೌನ್ಹಾಲ್ ಮುಂದೆ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಸಚಿವರಿಗೆ ಎಳ್ಳು-ಬೆಲ್ಲವನ್ನು ಕಳುಹಿಸಿ 'ಒಳ್ಳೆಯ ಮಾತನಾಡಿ' ಎಂದು ಘೋಷಣೆ ಕೂಗಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಎಳ್ಳು- ಬೆಲ್ಲದ ಪ್ಯಾಕೆಟ್ಗಳನ್ನು ಕೈಯಲ್ಲಿ ಹಿಡಿದು ಧಿಕ್ಕಾರ ಕೂಗಿದ್ದು, ಬಿಜೆಪಿ ಮುಖಂಡರು ಸಂಸ್ಕೃತಿಯನ್ನು ಕಲಿಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ಬಳಿಕ ಎಳ್ಳು-ಬೆಲ್ಲವನ್ನು ಸಚಿವ ಡಾ.ಅಶ್ವತ್ಥ್ ನಾರಾಯಣ ಅವರ ಕಚೇರಿಗೆ ಕಳುಹಿಸಿ ಭವಿಷ್ಯದಲ್ಲಿ ಒಳ್ಳೆಯ ಮಾತನ್ನಾಡಿ ಎಂದು ಮನವಿ ಮಾಡದ್ದಾರೆ.
ರಾಜ್ಯದ ಮುಖ್ಯಮಂತ್ರಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರೊಬ್ಬರು ಅನುಚಿತವಾಗಿ ನಡೆದುಕೊಂಡಿರುವುದು ನಾಚಿಕೆಗೇಡು. ಬಿಜೆಪಿಯಲ್ಲಿದ್ದುಕೊಂಡು ಇಂತಹ ಸಂಸ್ಕೃತಿ ಕಲಿತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಸಚಿವ ಸಂಪುಟ ಸಭೆ: ಖ್ಯಾತ ಹಿರಿಯ ನಟ ದಿ. ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ