ETV Bharat / city

ಗ್ರಾಮೀಣ ಪ್ರದೇಶಕ್ಕೆ ಬಂದಿರೋ ಕಾರ್ಮಿಕರಿಗೆ ಸ್ಥಳದಲ್ಲೇ ಕೆಲಸ: ತುಮಕೂರು ಜಿಪಂ ಪ್ರಕಟಣೆ - ಗ್ರಾಮೀಣ ಪ್ರದೇಶಕ್ಕೆ ಬಂದಿರೋ ಕಾರ್ಮಿಕರಿಗೆ ಸ್ಥಳದಲ್ಲೇ ಕೆಲಸ

ಬಹುತೇಕ ಕಾರ್ಮಿಕರು ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಗಳಿಗೆ ವಾಪಸ್ ಬಂದಿದ್ದು, ಅಂತಹ ಕಾರ್ಮಿಕರಿಗೆ ಅವರ ವಾಸ ಸ್ಥಳದಲ್ಲಿಯೇ ಮಹಾತ್ಮ ಗಾಂಧಿ ನರೇಗಾ ಯೋಜನೆಗಳಡಿ ಕೂಲಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

corona effect Workers on the spot come to rural areas
ಕೊರೊನ ಭೀತಿ : ಗ್ರಾಮೀಣ ಪ್ರದೇಶಕ್ಕೆ ಬಂದಿರೋ ಕಾರ್ಮಿಕರಿಗೆ ಸ್ಥಳದಲ್ಲೇ ಕೆಲಸ
author img

By

Published : May 14, 2020, 11:25 PM IST

ತುಮಕೂರು: ಬಹುತೇಕ ಕಾರ್ಮಿಕರು ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಗಳಿಗೆ ವಾಪಸ್ ಬಂದಿದ್ದು, ಅಂತಹ ಕಾರ್ಮಿಕರಿಗೆ ಅವರ ವಾಸ ಸ್ಥಳದಲ್ಲಿಯೇ ಮಹಾತ್ಮ ಗಾಂಧಿ ನರೇಗಾ ಯೋಜನೆಗಳಡಿ ಕೂಲಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಕೂಲಿಕಾರ್ಮಿಕರಿಗೆ ದಿನವೊಂದಕ್ಕೆ 275 ರೂ. ಕೂಲಿ ನಿಗದಿಪಡಿಸಿದ್ದು, ನೇರವಾಗಿ ಅವರ ಖಾತೆಗಳಿಗೆ 15 ದಿನಗಳಲ್ಲಿ ಕೂಲಿ ಹಣ ಜಮೆ ಮಾಡಲಾಗುವುದು. ಒಂದು ಕುಟುಂಬಕ್ಕೆ 100 ದಿನಗಳ ಕಾಲ ಕೂಲಿಯನ್ನು ನೀಡಲಾಗುತ್ತಿದೆ.

ಅರ್ಹ ಕುಟುಂಬಗಳು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ, ಎರೆಹುಳು ಗೊಬ್ಬರ ತಯಾರಿಕೆ ಘಟಕ, ದನ, ಕುರಿ, ಕೋಳಿ ಶೆಡ್ ನಿರ್ಮಾಣ, ಕೃಷಿ ಹೊಂಡ, ಜಮೀನು ಅಭಿವೃದ್ಧಿ ಕಾಮಗಾರಿ, ಇಂಗು ಗುಂಡಿ ಕಾಮಗಾರಿ ಮಾಡುವ ಮೂಲಕ ಸರ್ಕಾರದ ಹಣವನ್ನು ಪಂಚಾಯಿತಿ ಮೂಲಕ ಕೂಲಿ ಕಾರ್ಮಿಕರ ಖಾತೆಗೆ ಜಮೆ ಮಾಡಲಾಗುವುದು ಎಂದು ಜಿಪಂ ಪ್ರಕಟಣೆಯಲ್ಲಿ ತಿಳಿಸಿದೆ.

ತುಮಕೂರು: ಬಹುತೇಕ ಕಾರ್ಮಿಕರು ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಗಳಿಗೆ ವಾಪಸ್ ಬಂದಿದ್ದು, ಅಂತಹ ಕಾರ್ಮಿಕರಿಗೆ ಅವರ ವಾಸ ಸ್ಥಳದಲ್ಲಿಯೇ ಮಹಾತ್ಮ ಗಾಂಧಿ ನರೇಗಾ ಯೋಜನೆಗಳಡಿ ಕೂಲಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಕೂಲಿಕಾರ್ಮಿಕರಿಗೆ ದಿನವೊಂದಕ್ಕೆ 275 ರೂ. ಕೂಲಿ ನಿಗದಿಪಡಿಸಿದ್ದು, ನೇರವಾಗಿ ಅವರ ಖಾತೆಗಳಿಗೆ 15 ದಿನಗಳಲ್ಲಿ ಕೂಲಿ ಹಣ ಜಮೆ ಮಾಡಲಾಗುವುದು. ಒಂದು ಕುಟುಂಬಕ್ಕೆ 100 ದಿನಗಳ ಕಾಲ ಕೂಲಿಯನ್ನು ನೀಡಲಾಗುತ್ತಿದೆ.

ಅರ್ಹ ಕುಟುಂಬಗಳು ತಮ್ಮ ಜಮೀನಿನಲ್ಲಿ ಬದು ನಿರ್ಮಾಣ, ಎರೆಹುಳು ಗೊಬ್ಬರ ತಯಾರಿಕೆ ಘಟಕ, ದನ, ಕುರಿ, ಕೋಳಿ ಶೆಡ್ ನಿರ್ಮಾಣ, ಕೃಷಿ ಹೊಂಡ, ಜಮೀನು ಅಭಿವೃದ್ಧಿ ಕಾಮಗಾರಿ, ಇಂಗು ಗುಂಡಿ ಕಾಮಗಾರಿ ಮಾಡುವ ಮೂಲಕ ಸರ್ಕಾರದ ಹಣವನ್ನು ಪಂಚಾಯಿತಿ ಮೂಲಕ ಕೂಲಿ ಕಾರ್ಮಿಕರ ಖಾತೆಗೆ ಜಮೆ ಮಾಡಲಾಗುವುದು ಎಂದು ಜಿಪಂ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.