ETV Bharat / city

650 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ​​: DHO ನಾಗೇಂದ್ರಪ್ಪ - ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಬಿ. ನಾಗೇಂದ್ರಪ್ಪ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ ಬಿ ನಾಗೇಂದ್ರಪ್ಪ ಪ್ರತಿಕ್ರಿಯಿಸಿ, 650 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್​​ ಪರೀಕ್ಷೆ ನಡೆಸಲಾಗಿದೆ. 40 ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ..

DHO Nagendrappa
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ
author img

By

Published : Dec 8, 2021, 7:45 PM IST

ತುಮಕೂರು : ನಗರದ ಅರುಣ ನರ್ಸಿಂಗ್ ಕಾಲೇಜಿನಲ್ಲಿ ಮತ್ತೆ 3 ಕೋವಿಡ್ ಪ್ರಕರಣ ದೃಢಪಟ್ಟಿವೆ. ಜಿಲ್ಲೆಯಲ್ಲಿನ ಕ್ಲಸ್ಟರ್​​ಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಕೇರಳದಿಂದ ಬಂದಿದ್ದ ಮೂವರು ವಿದ್ಯಾರ್ಥಿನಿಯರಲ್ಲಿ ಕೋವಿಡ್ ಸೋಂಕು ದೃಢಪಡುವುದರೊಂದಿಗೆ 3 ನರ್ಸಿಂಗ್ ಕಾಲೇಜಿಗಳಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಮಾಹಿತಿ ನೀಡಿರುವುದು..

ಈ ಹಿಂದೆ ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8, ವರದರಾಜ ಕಾಲೇಜಿನಲ್ಲಿ 7 ಪ್ರಕರಣ ವರದಿಯಾಗಿದ್ದವು. ಇದರಿಂದ ಕಾಲೇಜು ಮತ್ತು ಹಾಸ್ಟೆಲ್‌ಗಳು ಮುಚ್ಚಲ್ಪಟ್ಟಿದ್ದವು. ಅಲ್ಲದೇ, ಕಂಟೇನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ ಬಿ ನಾಗೇಂದ್ರಪ್ಪ ಪ್ರತಿಕ್ರಿಯಿಸಿ, 650 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್​​ ಪರೀಕ್ಷೆ ನಡೆಸಲಾಗಿದೆ. 40 ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.

ಪೆರುಮನಹಳ್ಳಿಯಲ್ಲಿ 11 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಆ ಹಳ್ಳಿಯನ್ನು ಕಂಟೇನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Omicron fear.. 2ನೇ ಡೋಸ್​ ಹಾಕಿಕೊಳ್ಳದ ಜನರಿಗೆ ಮನವರಿಕೆ ಮಾಡ್ತಿರುವ ತುಮಕೂರು ಜಿಲ್ಲಾಧಿಕಾರಿ..

ತುಮಕೂರು : ನಗರದ ಅರುಣ ನರ್ಸಿಂಗ್ ಕಾಲೇಜಿನಲ್ಲಿ ಮತ್ತೆ 3 ಕೋವಿಡ್ ಪ್ರಕರಣ ದೃಢಪಟ್ಟಿವೆ. ಜಿಲ್ಲೆಯಲ್ಲಿನ ಕ್ಲಸ್ಟರ್​​ಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಕೇರಳದಿಂದ ಬಂದಿದ್ದ ಮೂವರು ವಿದ್ಯಾರ್ಥಿನಿಯರಲ್ಲಿ ಕೋವಿಡ್ ಸೋಂಕು ದೃಢಪಡುವುದರೊಂದಿಗೆ 3 ನರ್ಸಿಂಗ್ ಕಾಲೇಜಿಗಳಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಮಾಹಿತಿ ನೀಡಿರುವುದು..

ಈ ಹಿಂದೆ ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8, ವರದರಾಜ ಕಾಲೇಜಿನಲ್ಲಿ 7 ಪ್ರಕರಣ ವರದಿಯಾಗಿದ್ದವು. ಇದರಿಂದ ಕಾಲೇಜು ಮತ್ತು ಹಾಸ್ಟೆಲ್‌ಗಳು ಮುಚ್ಚಲ್ಪಟ್ಟಿದ್ದವು. ಅಲ್ಲದೇ, ಕಂಟೇನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ ಬಿ ನಾಗೇಂದ್ರಪ್ಪ ಪ್ರತಿಕ್ರಿಯಿಸಿ, 650 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್​​ ಪರೀಕ್ಷೆ ನಡೆಸಲಾಗಿದೆ. 40 ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.

ಪೆರುಮನಹಳ್ಳಿಯಲ್ಲಿ 11 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಆ ಹಳ್ಳಿಯನ್ನು ಕಂಟೇನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Omicron fear.. 2ನೇ ಡೋಸ್​ ಹಾಕಿಕೊಳ್ಳದ ಜನರಿಗೆ ಮನವರಿಕೆ ಮಾಡ್ತಿರುವ ತುಮಕೂರು ಜಿಲ್ಲಾಧಿಕಾರಿ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.