ETV Bharat / city

ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಪಾಲಿಸಬೇಕು: ಡಾ. ವೀರಭದ್ರಯ್ಯ ಅಭಿಪ್ರಾಯ

author img

By

Published : Oct 14, 2019, 10:43 PM IST

ರಾಷ್ಟ್ರೀಯ ಆರೋಗ್ಯ ಅಭಿಯಾನ ಮಿಷಿನ್ ಅಡಿಯಲ್ಲಿ ತಾಯಂದಿರ ಮತ್ತು ಶಿಶುಗಳ ಮರಣ ತಡೆಯುವ ನಿಟ್ಟಿನಲ್ಲಿ ಎನ್ಜೆಂಡರ್ ಹೆಲ್ತ್ ಸಂಸ್ಥೆಯು ತುಮಕೂರು ನಗರದಲ್ಲಿ ಕಾರ್ಯಗಾರ ಆಯೋಜಿಸಿತ್ತು.

ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಪಾಲಿಸಬೇಕು: ಡಾ. ವೀರಭದ್ರಯ್ಯ ಅಭಿಪ್ರಾಯ

ತುಮಕೂರು: ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತು ಅದನ್ನು ಪಾಲಿಸಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ. ವೀರಭದ್ರಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಪಾಲಿಸಬೇಕು: ಡಾ. ವೀರಭದ್ರಯ್ಯ ಅಭಿಪ್ರಾಯ
ರಾಷ್ಟ್ರೀಯ ಆರೋಗ್ಯ ಅಭಿಯಾನ ಮಿಷಿನ್ ಅಡಿಯಲ್ಲಿ ತಾಯಂದಿರ ಮತ್ತು ಶಿಶುಗಳ ಮರಣ ತಡೆಯುವ ನಿಟ್ಟಿನಲ್ಲಿ ಎನ್ಜೆಂಡರ್ ಹೆಲ್ತ್ ಸಂಸ್ಥೆಯ ಕಾರ್ಯಗಾರ ಮತ್ತು ಕುಟುಂಬ ಕಲ್ಯಾಣ ಸೇವೆಯ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರ ಆರೋಗ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಪ್ತಸಮಾಲೋಚನೆ ಕೊಠಡಿಗಳನ್ನು ತೆರೆಯಲಾಗಿದ್ದು, ಕೌನ್ಸಿಲಿಂಗ್ ಮೂಲಕ ಮಹಿಳೆಯರಲ್ಲಿನ ಸಮಸ್ಯೆಗಳನ್ನು ಹೋಗಲಾಡಿಸಲು ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಹಾಗೂ ಹುಟ್ಟುತ್ತಿರುವ ಮಕ್ಕಳಲ್ಲಿನ ಅಂತರದ ಬಗ್ಗೆ ಅರಿವು ಮೂಡಿಸುವ ಮೂಲಕ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರಿಗೆ ತಿಳಿಹೇಳುವ ಕಾರ್ಯ ಪ್ರಮುಖ ಪಾತ್ರ ವಹಿಸುತ್ತದೆ, ಇಲ್ಲವಾದಲ್ಲಿ ಹುಟ್ಟುವ ಮಕ್ಕಳನ್ನು ಸರಿಯಾಗಿ ಪೋಷಿಸಲಾಗದೆ, ಮಕ್ಕಳಲ್ಲಿನ ಬೆಳವಣಿಗೆ ಕುಂಠಿತವಾಗುವುದರಿಂದ ಸಮಾಜಕ್ಕೆ ತೊಂದರೆಯಾಗುತ್ತದೆ. ಇದನ್ನು ಅರಿತ ಭಾರತ ಸರ್ಕಾರ, ಅನೇಕ ಯೋಜನೆಗಳನ್ನು ರೂಪಿಸಿದೆ ಈ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಹಾಗೂ ಮುಂದಿನ ಪೀಳಿಗೆಯ ಮಕ್ಕಳು ಆರೋಗ್ಯಯುಕ್ತರಾಗುತ್ತಾರೆ ಎಂದು ಡಾ. ವೀರಭದ್ರಯ್ಯ ತಿಳಿಸಿದರು.

ಇದೇ ವೇಳೆ ಹೆಚ್ಚಿನದಾಗಿ ಸೇವೆಸಲ್ಲಿಸಿದ ವೈದ್ಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗುರುತಿಸಿ ಬಹುಮಾನ ನೀಡುವ ಮೂಲಕ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಚಂದ್ರಿಕಾ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ, ಎನ್ಜೆಂಡರ್ ಹೆಲ್ತ್ ಸಂಸ್ಥೆಯ ರಾಜ್ಯ ಯೋಜನಾ ಸಂಯೋಜನಾಧಿಕಾರಿ ಡಾ. ಧನ್ಯಕುಮಾರ್ ಇತರರು ಹಾಜರಿದ್ದರು.

ತುಮಕೂರು: ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತು ಅದನ್ನು ಪಾಲಿಸಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ. ವೀರಭದ್ರಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಪಾಲಿಸಬೇಕು: ಡಾ. ವೀರಭದ್ರಯ್ಯ ಅಭಿಪ್ರಾಯ
ರಾಷ್ಟ್ರೀಯ ಆರೋಗ್ಯ ಅಭಿಯಾನ ಮಿಷಿನ್ ಅಡಿಯಲ್ಲಿ ತಾಯಂದಿರ ಮತ್ತು ಶಿಶುಗಳ ಮರಣ ತಡೆಯುವ ನಿಟ್ಟಿನಲ್ಲಿ ಎನ್ಜೆಂಡರ್ ಹೆಲ್ತ್ ಸಂಸ್ಥೆಯ ಕಾರ್ಯಗಾರ ಮತ್ತು ಕುಟುಂಬ ಕಲ್ಯಾಣ ಸೇವೆಯ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರ ಆರೋಗ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಪ್ತಸಮಾಲೋಚನೆ ಕೊಠಡಿಗಳನ್ನು ತೆರೆಯಲಾಗಿದ್ದು, ಕೌನ್ಸಿಲಿಂಗ್ ಮೂಲಕ ಮಹಿಳೆಯರಲ್ಲಿನ ಸಮಸ್ಯೆಗಳನ್ನು ಹೋಗಲಾಡಿಸಲು ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಹಾಗೂ ಹುಟ್ಟುತ್ತಿರುವ ಮಕ್ಕಳಲ್ಲಿನ ಅಂತರದ ಬಗ್ಗೆ ಅರಿವು ಮೂಡಿಸುವ ಮೂಲಕ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರಿಗೆ ತಿಳಿಹೇಳುವ ಕಾರ್ಯ ಪ್ರಮುಖ ಪಾತ್ರ ವಹಿಸುತ್ತದೆ, ಇಲ್ಲವಾದಲ್ಲಿ ಹುಟ್ಟುವ ಮಕ್ಕಳನ್ನು ಸರಿಯಾಗಿ ಪೋಷಿಸಲಾಗದೆ, ಮಕ್ಕಳಲ್ಲಿನ ಬೆಳವಣಿಗೆ ಕುಂಠಿತವಾಗುವುದರಿಂದ ಸಮಾಜಕ್ಕೆ ತೊಂದರೆಯಾಗುತ್ತದೆ. ಇದನ್ನು ಅರಿತ ಭಾರತ ಸರ್ಕಾರ, ಅನೇಕ ಯೋಜನೆಗಳನ್ನು ರೂಪಿಸಿದೆ ಈ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಹಾಗೂ ಮುಂದಿನ ಪೀಳಿಗೆಯ ಮಕ್ಕಳು ಆರೋಗ್ಯಯುಕ್ತರಾಗುತ್ತಾರೆ ಎಂದು ಡಾ. ವೀರಭದ್ರಯ್ಯ ತಿಳಿಸಿದರು.

ಇದೇ ವೇಳೆ ಹೆಚ್ಚಿನದಾಗಿ ಸೇವೆಸಲ್ಲಿಸಿದ ವೈದ್ಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗುರುತಿಸಿ ಬಹುಮಾನ ನೀಡುವ ಮೂಲಕ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಚಂದ್ರಿಕಾ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ, ಎನ್ಜೆಂಡರ್ ಹೆಲ್ತ್ ಸಂಸ್ಥೆಯ ರಾಜ್ಯ ಯೋಜನಾ ಸಂಯೋಜನಾಧಿಕಾರಿ ಡಾ. ಧನ್ಯಕುಮಾರ್ ಇತರರು ಹಾಜರಿದ್ದರು.

Intro:ತುಮಕೂರು: ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತು ಅದನ್ನು ಪಾಲಿಸಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ಅಭಿಪ್ರಾಯ ಪಟ್ಟರು.


Body: ರಾಷ್ಟ್ರೀಯ ಆರೋಗ್ಯ ಅಭಿಯಾನ ಮಿಷಿನ್ ಅಡಿಯಲ್ಲಿ ತಾಯಂದಿರ ಮರಣ ಮತ್ತು ಶಿಶುಗಳ ಮರಣ ತಡೆಯುವ ನಿಟ್ಟಿನಲ್ಲಿ ಎನ್ಜೆಂಡರ್ ಹೆಲ್ತ್ ಸಂಸ್ಥೆಯ ಸಹಯೋಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯಗಾರ ಮತ್ತು ಕುಟುಂಬ ಕಲ್ಯಾಣ ಸೇವೆಯ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಆರೋಗ್ಯವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಪ್ತಸಮಾಲೋಚನೆ ಕೊಠಡಿಗಳನ್ನು ತೆರೆಯಲಾಗಿದ್ದು, ಕೌನ್ಸಿಲಿಂಗ್ ಮೂಲಕ ಮಹಿಳೆಯರಲ್ಲಿನ ಸಮಸ್ಯೆಗಳನ್ನು ಹೋಗಲಾಡಿಸಲು ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಹಾಗೂ ಹುಟ್ಟುತ್ತಿರುವ ಮಕ್ಕಳಲ್ಲಿನ ಅಂತರದ ಬಗ್ಗೆ ಅರಿವು ಮೂಡಿಸುವ ಮೂಲಕ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರಿಗೆ ತಿಳಿಹೇಳುವ ಕಾರ್ಯ ಪ್ರಮುಖ ಪಾತ್ರ ವಹಿಸುತ್ತದೆ, ಇಲ್ಲವಾದಲ್ಲಿ ಹುಟ್ಟುವ ಮಕ್ಕಳನ್ನು ಸರಿಯಾಗಿ ಘೋಷಿಸಲಾಗದೆ, ಮಕ್ಕಳಲ್ಲಿನ ಬೆಳವಣಿಗೆ ಕುಂಠಿತವಾಗುವುದರಿಂದ ಸಮಾಜಕ್ಕೆ ತೊಂದರೆಯಾಗುತ್ತದೆ. ಇದನ್ನು ಅರಿತ ಭಾರತ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ ಈ ಯೋಜನೆಗಳನ್ನು ಪ್ರತಿಯೊಬ್ಬ ನಾಗರೀಕರು ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಹಾಗೂ ಮುಂದಿನ ಪೀಳಿಗೆಯ ಮಕ್ಕಳು ಆರೋಗ್ಯಯುಕ್ತರಾಗುತ್ತಾರೆ ಎಂದು ಡಾ. ವೀರಭದ್ರಯ್ಯ ತಿಳಿಸಿದರು.
ಬೈಟ್: ಡಾ. ವೀರಭದ್ರಯ್ಯ, ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ .


Conclusion:ಇದೇ ವೇಳೆ ಹೆಚ್ಚಿನದಾಗಿ ಸೇವೆಸಲ್ಲಿಸಿದ ವೈದ್ಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನು ಗುರುತಿಸಿ ಬಹುಮಾನ ನೀಡುವ ಮೂಲಕ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಚಂದ್ರಿಕಾ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ, ಎನ್ಜೆಂಡರ್ ಹೆಲ್ತ್ ಸಂಸ್ಥೆಯ ರಾಜ್ಯ ಯೋಜನಾ ಸಂಯೋಜನಾಧಿಕಾರಿ ಡಾ. ಧನ್ಯಕುಮಾರ್ ಇತರರು ಹಾಜರಿದ್ದರು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.