ETV Bharat / city

ಪೂಜೆಗಾಗಿ ಹೋದವರು ಮಸಣ ಸೇರಿದರು: ಟ್ರ್ಯಾಕ್ಟರ್​​​​ ಪಲ್ಟಿ, ಐವರ ಸಾವು - undefined

ತಿಪಟೂರು ತಾಲೂಕಿನ ಹತ್ಯಾಳು ನರಸಿಂಹಸ್ವಾಮಿ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿ ವಾಪಸ್​ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ ಐವರು ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ.

ಹತ್ಯಾಳು ಬೆಟ್ಟದಲ್ಲಿ ಭೀಕರ ಅಪಘಾತ
author img

By

Published : May 11, 2019, 9:14 PM IST

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ ಐವರು ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹತ್ಯಾಳು ಬೆಟ್ಟದಲ್ಲಿ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಮಾದಾಪುರ ಗ್ರಾಮದ ಶಿವಲಿಂಗಯ್ಯ (50), ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮಘಟ್ಟದ ದೊಡ್ಡ ನಿಂಗಯ್ಯ (48), ರಾಮಘಟ್ಟ ಗ್ರಾಮದ ಶಂಕರಮ್ಮ (45) ಮೃತಪಟ್ಟ ದುರ್ದೈವಿಗಳು ಮತ್ತು ಏಳು ವರ್ಷದ ಭುವನ್ ಎಂಬ ಬಾಲಕ ಕೂಡ ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಮತ್ತೊಬ್ಬರು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರನ್ನ ನಾಗರಾಜ್ (45) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ತಿಪಟೂರು ಮತ್ತು ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹತ್ಯಾಳು ಬೆಟ್ಟದಲ್ಲಿ ಭೀಕರ ಅಪಘಾತ: ಐವರ ದುರ್ಮರಣ

ಏನಿದು ಘಟನೆ?

ತಿಪಟೂರು ತಾಲೂಕಿನ ಹತ್ಯಾಳು ನರಸಿಂಹಸ್ವಾಮಿ ದೇವಸ್ಥಾನಕ್ಕೆ ಇಂದು ಸುಮಾರು 15 ಮಂದಿ ಟ್ರ್ಯಾಕ್ಟರ್​ನಲ್ಲಿ ತೆರಳಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೂಜೆ ಬಳಿಕ ಅಲ್ಲಿಯೇ ಊಟ ಮಾಡಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ, ಬೆಟ್ಟದ ಮೇಲಿಂದ ಕಡಿದಾದ ಇಳಿಜಾರಿನಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರಿಣಾಮ ಟ್ರ್ಯಾಕ್ಟರ್​ನಲ್ಲಿ ಐವರು ಮೃತಪಟ್ಟು ಇನ್ನುಳಿದವರು ಗಾಯಗೊಂಡಿದ್ದಾರೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿ ಐವರು ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಹತ್ಯಾಳು ಬೆಟ್ಟದಲ್ಲಿ ನಡೆದಿದೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ಮಾದಾಪುರ ಗ್ರಾಮದ ಶಿವಲಿಂಗಯ್ಯ (50), ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮಘಟ್ಟದ ದೊಡ್ಡ ನಿಂಗಯ್ಯ (48), ರಾಮಘಟ್ಟ ಗ್ರಾಮದ ಶಂಕರಮ್ಮ (45) ಮೃತಪಟ್ಟ ದುರ್ದೈವಿಗಳು ಮತ್ತು ಏಳು ವರ್ಷದ ಭುವನ್ ಎಂಬ ಬಾಲಕ ಕೂಡ ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಮತ್ತೊಬ್ಬರು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರನ್ನ ನಾಗರಾಜ್ (45) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ತಿಪಟೂರು ಮತ್ತು ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹತ್ಯಾಳು ಬೆಟ್ಟದಲ್ಲಿ ಭೀಕರ ಅಪಘಾತ: ಐವರ ದುರ್ಮರಣ

ಏನಿದು ಘಟನೆ?

ತಿಪಟೂರು ತಾಲೂಕಿನ ಹತ್ಯಾಳು ನರಸಿಂಹಸ್ವಾಮಿ ದೇವಸ್ಥಾನಕ್ಕೆ ಇಂದು ಸುಮಾರು 15 ಮಂದಿ ಟ್ರ್ಯಾಕ್ಟರ್​ನಲ್ಲಿ ತೆರಳಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪೂಜೆ ಬಳಿಕ ಅಲ್ಲಿಯೇ ಊಟ ಮಾಡಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ, ಬೆಟ್ಟದ ಮೇಲಿಂದ ಕಡಿದಾದ ಇಳಿಜಾರಿನಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರಿಣಾಮ ಟ್ರ್ಯಾಕ್ಟರ್​ನಲ್ಲಿ ಐವರು ಮೃತಪಟ್ಟು ಇನ್ನುಳಿದವರು ಗಾಯಗೊಂಡಿದ್ದಾರೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Intro:ಟ್ರ್ಯಾಕ್ಟರ್ ಪಲ್ಟಿ ಐವರ ಸಾವು....

ತುಮಕೂರು
ಚಾಲಕನ ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿಯಾಗಿ ಐವರು ಮೃತಪಟ್ಟು 10 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕು ಹತ್ಯಾಳು ಬೆಟ್ಟದಲ್ಲಿ ನಡೆದಿದೆ.
ಮೃತ ರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾದಾಪುರ ಗ್ರಾಮದ ಶಿವಲಿಂಗಯ್ಯ 50, ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮಘಟ್ಟದ ದೊಡ್ಡ ನಿಂಗಯ್ಯ 48, ರಾಮಘಟ್ಟ ಗ್ರಾಮದ ಶಂಕರಮ್ಮ 45, ಮತ್ತು ಏಳು ವರ್ಷದ ಭುವನ್ ಎಂಬ ಬಾಲಕ ಕೂಡ ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಮತ್ತೊಬ್ಬರು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಗರಾಜ್45 ಮೃತಪಟ್ಟಿದ್ದಾರೆ.
ಗಾಯಾಳುಗಳನ್ನು ತಿಪಟೂರು ಮತ್ತು ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಪಟೂರು ತಾಲೂಕಿನ ಹತ್ಯಾಳು ನರಸಿಂಹಸ್ವಾಮಿ ದೇವಸ್ಥಾನಕ್ಕೆ ಇಂದು ಸುಮಾರು 15 ಮಂದಿ ಟ್ರ್ಯಾಕ್ಟರ್ ನಲ್ಲಿ ತೆರಳಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಅಲ್ಲಿಯ ಊಟ ಮಾಡಿ ವಾಪಸ್ ತೆರಳುತ್ತಿದ್ದರು.
ಬೆಟ್ಟದ ಮೇಲಿಂದ ಕಡಿದಾದ ಇಳಿಜಾರು ಇದ್ದದ್ದರಿಂದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ಮಗುಚಿ ಬಿದ್ದಿದೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.Body:TumakuruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.