ತುಮಕೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಬೆಂಬಲಿಗರ ನಡುವಿನ ಆರೋಪ-ಪ್ರತ್ಯಾರೋಪ ಮುಗಿಲುಮುಟ್ಟಿದೆ. ಇದರಿಂದಾಗಿ ಜಿಲ್ಲಾ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ .
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣರ ಪುತ್ರ ಹಾಗೂ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಒಬ್ಬ 10 ಪರ್ಸೆಂಟ್ ಗಿರಾಕಿ ಎಂದು ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಹಣ ಪಡೆದು ಅದರಲ್ಲಿ 10 ಪರ್ಸೆಂಟ್ ಹಿಡ್ಕೊಂಡು ಹಂಚಿದ್ದಾನೆ. ಅಲ್ಲದೆ ಇತ್ತೀಚಿಗೆ ನಡೆದ ಪಾಲಿಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಹಣ ಪಡೆದು ಟಿಕೆಟ್ ಕೊಟ್ಟಿದ್ದಾನೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಸ್ಥಾನದಿಂದ ರಾಮಕೃಷ್ಣರನ್ನು ಬದಲಾಯಿಸಿದರೆ ಎಲ್ಲವೂ ಸರಿಹೋಗಲಿದೆ. ಮೈತ್ರಿ ಅಭ್ಯರ್ಥಿ ಸೋಲಿಗೆ ರಾಜಣ್ಣ ಕಾರಣ ಎಂದು ಆರೋಪಿಸ್ತಾರೆ. ಹಾಗಾದ್ರೆ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಸೋಲಲಿಲ್ಲವೇ, ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಸೋಲಲಿಲ್ಲವೇ ಎಂದು ಪ್ರಶ್ನಿಸಿದರು. ಹಾಗಾದ್ರೆ ಅಲ್ಲಿಯ ಕಾಂಗ್ರೆಸ್ ಮುಖಂಡರ ಮೇಲೂ ಕ್ರಮ ಕೈಗೊಳ್ತಾರಾ ಎಂದು ರಾಜೇಂದ್ರ ಪ್ರಶ್ನಿಸಿದ್ದಾರೆ