ತುಮಕೂರು: ಇಂದಿನಿಂದ ಶಾಲಾ-ಕಾಲೇಜು ಆರಂಭವಾಗಿದ್ದು, ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಮುಂಜಾಗ್ರತೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಗರದ ಎಂಪ್ರೆಸ್ ಸರ್ಕಾರಿ ಶಾಲೆ ಮತ್ತು ಕಾಲೇಜಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಸಂವಾದ ನಡೆಸಿದರು, ಇದೇ ವೇಳೆ ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಅಲ್ಲದೇ, ವಿದ್ಯಾರ್ಥಿಗಳನ್ನು ಮಾನವೀಯತೆಯ ಆಧಾರದ ಮೇಲೆ ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಕರೆದುಕೊಂಡು ಬರಬೇಕೆಂದು ಈಗಾಗಲೇ ಸಂಬಂಧಪಟ್ಟವರಿಗೆ ಮನವಿ ಮಾಡಿಕೊಂಡಿರುವುದಾಗಿ ತಿಳಿಸಿದರು.