ETV Bharat / city

ಅಪ್ಪು ನಿಧನದಿಂದ ಮಾನಸಿಕ ಖಿನ್ನತೆ: ಊಟ, ತಿಂಡಿ ತ್ಯಜಿಸಿದ್ದ ತುಮಕೂರಿನ ಅಭಿಮಾನಿ ಸಾವು

author img

By

Published : Nov 5, 2021, 4:35 PM IST

ಅಪ್ಪು ನಿಧನದಿಂದ ನೊಂದು ಊಟ ತಿಂಡಿ ತ್ಯಜಿಸಿದ್ದ ಪುನೀತ್ ರಾಜಕುಮಾರ್ ಅವರ ಅಭಿಮಾನಿಯೋರ್ವ ಬಾರದ ಲೋಕಕ್ಕೆ ತೆರಳಿದ್ದಾನೆ.

Tumkur
ರವಿ ಕುಮಾರ್

ತುಮಕೂರು: ಪುನೀತ್ ರಾಜ್​​ಕುಮಾರ್ ನಿಧನದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜಿಲ್ಲೆಯಲ್ಲಿ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ. ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯ ರವಿ ಕುಮಾರ್ (27) ಮೃತ ಅಭಿಮಾನಿ.

ಈತ ಪುನೀತ್ ರಾಜ್​​ಕುಮಾರ್ ನಿಧನದ ನಂತರ ಬೆಂಗಳೂರಿಗೆ ತೆರಳಿ ಅಂತಿಮ ದರ್ಶನ ಪಡೆದು ವಾಪಸ್ ಗ್ರಾಮಕ್ಕೆ ಆಗಮಿಸಿದ್ದ. ಬಳಿಕ ಸರಿಯಾಗಿ ಊಟ, ತಿಂಡಿ ಸೇವಿಸದೇ ಮಾನಸಿಕ ಖಿನ್ನತೆಗೆ ಒಳಗಾಗಿ ನರಳುತ್ತಿದ್ದನಂತೆ.

ಹೀಗಾಗಿ ಚಿಕಿತ್ಸೆಗಾಗಿ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ದುರಂತ ನಡೆದಿದೆ. ಅಪ್ಪು ಸಾವಿನ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ ಒಂದು ವಾರದಿಂದ ಆಹಾರ ತ್ಯಜಿಸಿದ್ದ ಅಭಿಮಾನಿ ಇಂದು ಮೃತಪಟ್ಟಿದ್ದಾನೆ.

ಇದನ್ನೂ ಓದಿ: ತುಮಕೂರಿನಲ್ಲಿ ಮತ್ತೋರ್ವ ಪುನೀತ್ ರಾಜ್​​ಕುಮಾರ್ ಅಭಿಮಾನಿ ಹೃದಯಾಘಾತದಿಂದ ಸಾವು!

ತುಮಕೂರು: ಪುನೀತ್ ರಾಜ್​​ಕುಮಾರ್ ನಿಧನದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜಿಲ್ಲೆಯಲ್ಲಿ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ. ತುಮಕೂರು ತಾಲೂಕಿನ ಅರೆಗುಜ್ಜನಹಳ್ಳಿಯ ರವಿ ಕುಮಾರ್ (27) ಮೃತ ಅಭಿಮಾನಿ.

ಈತ ಪುನೀತ್ ರಾಜ್​​ಕುಮಾರ್ ನಿಧನದ ನಂತರ ಬೆಂಗಳೂರಿಗೆ ತೆರಳಿ ಅಂತಿಮ ದರ್ಶನ ಪಡೆದು ವಾಪಸ್ ಗ್ರಾಮಕ್ಕೆ ಆಗಮಿಸಿದ್ದ. ಬಳಿಕ ಸರಿಯಾಗಿ ಊಟ, ತಿಂಡಿ ಸೇವಿಸದೇ ಮಾನಸಿಕ ಖಿನ್ನತೆಗೆ ಒಳಗಾಗಿ ನರಳುತ್ತಿದ್ದನಂತೆ.

ಹೀಗಾಗಿ ಚಿಕಿತ್ಸೆಗಾಗಿ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ದುರಂತ ನಡೆದಿದೆ. ಅಪ್ಪು ಸಾವಿನ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ ಒಂದು ವಾರದಿಂದ ಆಹಾರ ತ್ಯಜಿಸಿದ್ದ ಅಭಿಮಾನಿ ಇಂದು ಮೃತಪಟ್ಟಿದ್ದಾನೆ.

ಇದನ್ನೂ ಓದಿ: ತುಮಕೂರಿನಲ್ಲಿ ಮತ್ತೋರ್ವ ಪುನೀತ್ ರಾಜ್​​ಕುಮಾರ್ ಅಭಿಮಾನಿ ಹೃದಯಾಘಾತದಿಂದ ಸಾವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.