ETV Bharat / city

ಡೆತ್​​ನೋಟ್​​​ ಬರೆದಿಟ್ಟು ನಾಪತ್ತೆಯಾಗಿದ್ದ ಶ್ರೀಗಂಧ ಬೆಳೆಗಾರನಿಂದ ತುಮುಕೂರಿನಲ್ಲಿ ಆತ್ಮಹತ್ಯೆ ಯತ್ನ

author img

By

Published : Dec 21, 2020, 4:27 PM IST

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲು ಗ್ರಾಮದಲ್ಲಿನ 22 ಜನರು 8 ವರ್ಷದಿಂದ ಬೆಳೆದಿದ್ದ ಶ್ರೀಗಂಧ ಮರಗಳಿದ್ದ ಪ್ರದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ರೈತರಿಗೆ ನ್ಯಾಯಯುತ ಪರಿಹಾರ ನೀಡದಿದ್ದರಿಂದ ಮನನೊಂದ ವಿಶುಕುಮಾರ್​ ಎಂಬಾತ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನ

ತುಮಕೂರು: ಡೆತ್​ನೋಟ್ ಬರೆದಿಟ್ಟು, ವಿಡಿಯೋ ಮಾಡಿ ನಾಪತ್ತೆಯಾಗಿದ್ದ ಶ್ರೀಗಂಧ ಬೆಳಗಾರ ವಿಶುಕುಮಾರ್ ಇಂದು ಬೆಳಗ್ಗೆ ತುಮಕೂರಿನ ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನ ಘಟಕದ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ಅವರ ಮನವೊಲಿಸಿ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲು ಗ್ರಾಮದಲ್ಲಿನ 22 ಜನರು 8 ವರ್ಷದಿಂದ ಬೆಳೆದಿದ್ದ ಶ್ರೀಗಂಧ ಮರಗಳಿದ್ದ ಪ್ರದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಈ ಜಾಗಕ್ಕೆ ನೋಟಿಫಿಕೇಶನ್ ಮಾಡಿ 4 ವರ್ಷಗಳಾಗಿದ್ದು, 1 ವರ್ಷದ ಹಿಂದೆ ಪರಿಹಾರ ನೀಡಲಾಗಿದೆ. ಅದು ಕೂಡ ಖರೀದಿಸಿದ ಭೂಮಿಯ ಬೆಲೆಗಿಂತ ಕಡಿಮೆ ಪರಿಹಾರ ನೀಡಿರುವುದಾಗಿ ರೈತರು ಆರೋಪಿಸಿದ್ದರು.

ನಾಪತ್ತೆಯಾಗಿದ್ದ ಶ್ರೀಗಂಧ ಬೆಳೆಗಾರ ತುಮುಕೂರಿನಲ್ಲಿ ಆತ್ಮಹತ್ಯೆಗೆ ಯತ್ನ

ಶ್ರೀಗಂಧ ಮರಗಳಿಗೆ ದರ ನಿಗದಿ ಮಾಡುವಲ್ಲಿ ಕೂಡ ತಾರತಮ್ಯ ಎಸಗಲಾಗುತ್ತಿದೆ. ಅಲ್ಲದೆ ಮಾವಿನಮರ ಹಾಗೂ ಹುಣಸೆ ಮರಕ್ಕೆ ನೀಡುವಂತಹ ಪರಿಹಾರವನ್ನು ಶ್ರೀಗಂಧದ ಮರಕ್ಕೆ ನೀಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಶ್ರೀಗಂಧದ ಮರಕ್ಕೆ ಅಧಿಕ ಬೆಲೆ ಇದ್ದು, ಅದನ್ನು ನಿಗದಿಪಡಿಸುವಂತೆ ಒತ್ತಾಯಿಸಿದ್ದರು. ಆದರೂ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಶ್ರೀಗಂಧ ಬೆಳೆಗಾರ ವಿಶುಕುಮಾರ್ ನಿನ್ನೆ ಡೆತ್​ನೋಟ್​​ ಬರೆದಿಟ್ಟು ಕಣ್ಮರೆಯಾಗಿದ್ದರು.

ಡೆತ್ ನೋಟ್ ಬರೆದಿಟ್ಟ ಶ್ರೀಗಂಧ ಬೆಳೆಗಾರ : ವಿಡಿಯೋ ಮಾಡಿ ವ್ಯಕ್ತಿ ನಾಪತ್ತೆ

ಇಂದು ಆತ್ಮಹತ್ಯೆ ಮಾಡಿಕೊಳ್ಳಲು ತುಮಕೂರು ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನ ಘಟಕದ ಎದುರು ಪ್ರತ್ಯಕ್ಷವಾಗಿದ್ದಾರೆ. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು, ಸಂಘಟಕರು ಹಾಗೂ ಶ್ರೀಗಂಧ ಬೆಳಗಾರರು ಪರಿಸ್ಥಿತಿ ತಿಳಿಗೊಳಿಸಿದರು. ಮಾಧ್ಯಮದೆದುರು ಮಾತನಾಡಿದ ವಿಶುಕುಮಾರ್, ಪರಿಹಾರ ನೀಡದೆ ಸತಾಯಿಸಲಾಗುತ್ತಿದೆ ಎಂಬ ನೋವಿನಿಂದ ಈ ಒಂದು ನಿರ್ಧಾರಕ್ಕೆ ಬಂದಿದ್ದೆ. ಇಂತಹ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ ಎಂದರು.

ಈ ಘಟನೆ ಬಳಿಕ ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನ ಘಟಕದ ಅಧಿಕಾರಿಗಳು, ಶ್ರೀಗಂಧ ಬೆಳೆಗಾರರೊಂದಿಗೆ ಹಾಗೂ ಸಂಘಟಕರೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲು ನಿರ್ಧರಿಸಿದ್ದಾರೆ.

ತುಮಕೂರು: ಡೆತ್​ನೋಟ್ ಬರೆದಿಟ್ಟು, ವಿಡಿಯೋ ಮಾಡಿ ನಾಪತ್ತೆಯಾಗಿದ್ದ ಶ್ರೀಗಂಧ ಬೆಳಗಾರ ವಿಶುಕುಮಾರ್ ಇಂದು ಬೆಳಗ್ಗೆ ತುಮಕೂರಿನ ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನ ಘಟಕದ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ಅವರ ಮನವೊಲಿಸಿ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲು ಗ್ರಾಮದಲ್ಲಿನ 22 ಜನರು 8 ವರ್ಷದಿಂದ ಬೆಳೆದಿದ್ದ ಶ್ರೀಗಂಧ ಮರಗಳಿದ್ದ ಪ್ರದೇಶವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ ಈ ಜಾಗಕ್ಕೆ ನೋಟಿಫಿಕೇಶನ್ ಮಾಡಿ 4 ವರ್ಷಗಳಾಗಿದ್ದು, 1 ವರ್ಷದ ಹಿಂದೆ ಪರಿಹಾರ ನೀಡಲಾಗಿದೆ. ಅದು ಕೂಡ ಖರೀದಿಸಿದ ಭೂಮಿಯ ಬೆಲೆಗಿಂತ ಕಡಿಮೆ ಪರಿಹಾರ ನೀಡಿರುವುದಾಗಿ ರೈತರು ಆರೋಪಿಸಿದ್ದರು.

ನಾಪತ್ತೆಯಾಗಿದ್ದ ಶ್ರೀಗಂಧ ಬೆಳೆಗಾರ ತುಮುಕೂರಿನಲ್ಲಿ ಆತ್ಮಹತ್ಯೆಗೆ ಯತ್ನ

ಶ್ರೀಗಂಧ ಮರಗಳಿಗೆ ದರ ನಿಗದಿ ಮಾಡುವಲ್ಲಿ ಕೂಡ ತಾರತಮ್ಯ ಎಸಗಲಾಗುತ್ತಿದೆ. ಅಲ್ಲದೆ ಮಾವಿನಮರ ಹಾಗೂ ಹುಣಸೆ ಮರಕ್ಕೆ ನೀಡುವಂತಹ ಪರಿಹಾರವನ್ನು ಶ್ರೀಗಂಧದ ಮರಕ್ಕೆ ನೀಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಶ್ರೀಗಂಧದ ಮರಕ್ಕೆ ಅಧಿಕ ಬೆಲೆ ಇದ್ದು, ಅದನ್ನು ನಿಗದಿಪಡಿಸುವಂತೆ ಒತ್ತಾಯಿಸಿದ್ದರು. ಆದರೂ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಶ್ರೀಗಂಧ ಬೆಳೆಗಾರ ವಿಶುಕುಮಾರ್ ನಿನ್ನೆ ಡೆತ್​ನೋಟ್​​ ಬರೆದಿಟ್ಟು ಕಣ್ಮರೆಯಾಗಿದ್ದರು.

ಡೆತ್ ನೋಟ್ ಬರೆದಿಟ್ಟ ಶ್ರೀಗಂಧ ಬೆಳೆಗಾರ : ವಿಡಿಯೋ ಮಾಡಿ ವ್ಯಕ್ತಿ ನಾಪತ್ತೆ

ಇಂದು ಆತ್ಮಹತ್ಯೆ ಮಾಡಿಕೊಳ್ಳಲು ತುಮಕೂರು ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನ ಘಟಕದ ಎದುರು ಪ್ರತ್ಯಕ್ಷವಾಗಿದ್ದಾರೆ. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು, ಸಂಘಟಕರು ಹಾಗೂ ಶ್ರೀಗಂಧ ಬೆಳಗಾರರು ಪರಿಸ್ಥಿತಿ ತಿಳಿಗೊಳಿಸಿದರು. ಮಾಧ್ಯಮದೆದುರು ಮಾತನಾಡಿದ ವಿಶುಕುಮಾರ್, ಪರಿಹಾರ ನೀಡದೆ ಸತಾಯಿಸಲಾಗುತ್ತಿದೆ ಎಂಬ ನೋವಿನಿಂದ ಈ ಒಂದು ನಿರ್ಧಾರಕ್ಕೆ ಬಂದಿದ್ದೆ. ಇಂತಹ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ಇದಕ್ಕಾಗಿ ಕ್ಷಮೆ ಕೋರುತ್ತೇನೆ ಎಂದರು.

ಈ ಘಟನೆ ಬಳಿಕ ಹೆದ್ದಾರಿ ಪ್ರಾಧಿಕಾರದ ಯೋಜನಾ ಅನುಷ್ಠಾನ ಘಟಕದ ಅಧಿಕಾರಿಗಳು, ಶ್ರೀಗಂಧ ಬೆಳೆಗಾರರೊಂದಿಗೆ ಹಾಗೂ ಸಂಘಟಕರೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲು ನಿರ್ಧರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.