ಪಾವಗಡ: ತಾಲೂಕು ಜಾನಪದ ಪರಿಷತ್ ವತಿಯಿಂದ ಜಾನಪದ ಹಬ್ಬ ಹಾಗೂ ಹಿರಿಯ ಜಾನಪದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮವನ್ನು ಪಟ್ಟಣದ ಪುರಸಭೆಯ ರೋಟರಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಾನಪದ ಗೀತೆಗಳು, ರಾಗಿ ಬೀಸುವ ಗೀತೆಗಳು, ಕೋಲಾಟ, ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಾನಪದ ಹಬ್ಬದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸುವರ್ಣ ರೆಡ್ಡಿ, ಪುರಸಭಾ ಸದಸ್ಯ ಗೋರ್ತಿ ನಾಗರಾಜು, ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಸತ್ಯಲೋಕೇಶ್ ಜಾನಪದ ಗೀತೆಗಳಿಗೆ ಹೆಜ್ಜೆ ಹಾಕಿದರು. ಇದೇ ವೇಳೆ, ಹಿರಿಯ ಜಾನಪದ ಕಲಾವಿದರಿಗೆ ಹಾಗೂ ಹ್ಯಾಂಡ್ಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕೆಜಿಬಿವಿ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.