ETV Bharat / city

ಸಿದ್ದಗಂಗಾ ಪ್ರೌಢಶಾಲೆಯಲ್ಲಿ ಅಕ್ಷರ ಕಲಿಸಿದ ಗುರುವಿಗೆ ನಮನ.. - ಅಕ್ಷರ ಕಲಿಸಿದ ಗುರುವಿಗೆ ನಮನ

ಸಿದ್ದಗಂಗಾ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ನಿವೃತ್ತಿ ಶಿಕ್ಷಕರನ್ನು ಸನ್ಮಾನಿಸಲಾಯಿತು.

shivakumara-swami-was-an-spiritual-leader-and-educator
author img

By

Published : Oct 13, 2019, 6:10 PM IST

ತುಮಕೂರು: ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರು ದೂರ ದೃಷ್ಟಿಕೋನದಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಅವರ ಕನಸಿನ ಕೂಸೇ ಸಿದ್ದಗಂಗಾ ಪ್ರೌಢಶಾಲೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ನಗರದ ಸಿದ್ದಗಂಗಾ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕರ ವೃತ್ತಿ ಪವಿತ್ರವಾದದ್ದು. ನಿವೃತ್ತಿ ಹೊಂದಿದ ಮೇಲೆ ಅವರನ್ನು ಕರೆಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ..

ಸಿದ್ದಗಂಗಾ ಶಿಕ್ಷಣ ಸಂಸ್ಥೆಗಳಿಗೆ ಸಿದ್ದಗಂಗಾ ಪ್ರೌಢಶಾಲೆ ಶಿಕ್ಷಣ ಸಂಸ್ಥೆ ಹಿರಿಯಣ್ಣನಂತೆ. ಎಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು ಸೇರಿದಂತೆ ಎಲ್ಲವೂ ಇಲ್ಲಿಯೇ ಪ್ರಾರಂಭವಾಗಿರುವುದು. ಈ ಎಲ್ಲದಕ್ಕೂ ಮೂಲ ಕಾರಣ ಶಿವಕುಮಾರ ಸ್ವಾಮೀಜಿ. ಅವರು ಪ್ರತಿ ಶುಕ್ರವಾರ ಪ್ರೌಢಶಾಲೆಗೆ ಭೇಟಿ ನೀಡುತ್ತಿದ್ದರು. ಅದರಲ್ಲಿಯೇ ತಿಳಿಯಬಹುದು ಶ್ರೀಗಳಿಗೆ ಶಿಕ್ಷಣದ ಮೇಲೆ ಎಷ್ಟು ಪ್ರೀತಿ ಇತ್ತು ಎಂಬುದನ್ನು ಎಂದು ನೆನೆಸಿಕೊಂಡರು.

ಇಡೀ ಜಗತ್ತು ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದ್ದು ರಾಮಾಯಣ ಮತ್ತು ಮಹಾಭಾರತ ಕಾವ್ಯಗಳು. ರಾಮಾಯಣ ರಚಿಸಿರುವ ವಾಲ್ಮೀಕಿ ಅವರ ಜಯಂತಿ ಇಂದು. ಬದುಕಿಗೆ ಬೇಕಾದ ಅನೇಕ ಮಾರ್ಗ ದರ್ಶನಗಳನ್ನು ವಾಲ್ಮೀಕಿ ಮಹರ್ಷಿಗಳು ರಾಮಾಯಣದ ಮೂಲಕ ತಿಳಿಸಿಕೊಟ್ಟಿದ್ದಾರೆ ಎಂದು ರಾಮಾಯಣದಲ್ಲಿನ ಸ್ವಾರಸ್ಯ ತಿಳಿಸಿದರು.

ತುಮಕೂರು: ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರು ದೂರ ದೃಷ್ಟಿಕೋನದಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಅವರ ಕನಸಿನ ಕೂಸೇ ಸಿದ್ದಗಂಗಾ ಪ್ರೌಢಶಾಲೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ನಗರದ ಸಿದ್ದಗಂಗಾ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳು ಭಾನುವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕರ ವೃತ್ತಿ ಪವಿತ್ರವಾದದ್ದು. ನಿವೃತ್ತಿ ಹೊಂದಿದ ಮೇಲೆ ಅವರನ್ನು ಕರೆಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ..

ಸಿದ್ದಗಂಗಾ ಶಿಕ್ಷಣ ಸಂಸ್ಥೆಗಳಿಗೆ ಸಿದ್ದಗಂಗಾ ಪ್ರೌಢಶಾಲೆ ಶಿಕ್ಷಣ ಸಂಸ್ಥೆ ಹಿರಿಯಣ್ಣನಂತೆ. ಎಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು ಸೇರಿದಂತೆ ಎಲ್ಲವೂ ಇಲ್ಲಿಯೇ ಪ್ರಾರಂಭವಾಗಿರುವುದು. ಈ ಎಲ್ಲದಕ್ಕೂ ಮೂಲ ಕಾರಣ ಶಿವಕುಮಾರ ಸ್ವಾಮೀಜಿ. ಅವರು ಪ್ರತಿ ಶುಕ್ರವಾರ ಪ್ರೌಢಶಾಲೆಗೆ ಭೇಟಿ ನೀಡುತ್ತಿದ್ದರು. ಅದರಲ್ಲಿಯೇ ತಿಳಿಯಬಹುದು ಶ್ರೀಗಳಿಗೆ ಶಿಕ್ಷಣದ ಮೇಲೆ ಎಷ್ಟು ಪ್ರೀತಿ ಇತ್ತು ಎಂಬುದನ್ನು ಎಂದು ನೆನೆಸಿಕೊಂಡರು.

ಇಡೀ ಜಗತ್ತು ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದ್ದು ರಾಮಾಯಣ ಮತ್ತು ಮಹಾಭಾರತ ಕಾವ್ಯಗಳು. ರಾಮಾಯಣ ರಚಿಸಿರುವ ವಾಲ್ಮೀಕಿ ಅವರ ಜಯಂತಿ ಇಂದು. ಬದುಕಿಗೆ ಬೇಕಾದ ಅನೇಕ ಮಾರ್ಗ ದರ್ಶನಗಳನ್ನು ವಾಲ್ಮೀಕಿ ಮಹರ್ಷಿಗಳು ರಾಮಾಯಣದ ಮೂಲಕ ತಿಳಿಸಿಕೊಟ್ಟಿದ್ದಾರೆ ಎಂದು ರಾಮಾಯಣದಲ್ಲಿನ ಸ್ವಾರಸ್ಯ ತಿಳಿಸಿದರು.

Intro:ತುಮಕೂರು: ಸಿದ್ಧಗಂಗಾ ಪ್ರೌಢಶಾಲೆ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಶ್ರೀಗಳ ಕನಸಿನ ಕೂಸು ಅವರು ದೂರದೃಷ್ಟಿಯಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಶ್ರೀ ಸಿದ್ದಗಂಗಾ ಮಠಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.


Body:ನಗರದ ಬಿ.ಹೆಚ್ ರಸ್ತೆಯಲ್ಲಿರುವ ಶ್ರೀ ಸಿದ್ದಗಂಗಾ ಪ್ರೌಢಶಾಲೆಯಲ್ಲಿ 1993-94 ನೇ ಸಾಲಿನ ವಿದ್ಯಾರ್ಥಿಗಳಿಂದ ಭಾನುವಾರ ಹಮ್ಮಿಕೊಂಡಿದ್ದ ರಜತ ಗುರುವಂದಿತ ಗುರುವಂದನಾ ಸಮಾರಂಭವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಸಿದ್ಧಗಂಗಾ ಶಿಕ್ಷಣ ಸಂಸ್ಥೆಗಳೆಲ್ಲವುಗಳಿಗೂ ಸಿದ್ಧಗಂಗಾ ಪ್ರೌಢಶಾಲೆ ಶಿಕ್ಷಣ ಸಂಸ್ಥೆಯು ಹಿರಿಯಣ್ಣನಂತೆ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು ಸೇರಿದಂತೆ ಎಲ್ಲವೂ ಇಲ್ಲಿಯೇ ಪ್ರಾರಂಭವಾಗಿರುವುದು. ಈ ಎಲ್ಲದಕ್ಕೂ ಮೂಲ ಕಾರಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ಅವರು ದೂರದೃಷ್ಟಿಯಿಂದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು ಎಂದು ಸ್ಮರಿಸಿದರು.
ಲಿಂಗೈಕ್ಯ ಶ್ರೀಗಳು ಪ್ರತಿ ಶುಕ್ರವಾರ ಸಿದ್ದಗಂಗಾ ಪ್ರೌಢಶಾಲೆಗೆ ಭೇಟಿ ನೀಡುತ್ತಿದ್ದರು ಅದರಲ್ಲಿಯೇ ತಿಳಿಯಬಹುದು ಶ್ರೀಗಳಿಗೆ ಶಿಕ್ಷಣದ ಮೇಲೆ ಎಷ್ಟು ಪ್ರೀತಿ ಇತ್ತು ಎಂಬುದನ್ನು, ಅವರೇ ಮುಂದೆ ನಿಂತು ಶಾಲಾ ಕಟ್ಟಡ ನಿರ್ಮಾಣದ ಸಮಯದಲ್ಲಿ ಕೆಲಸ ಕಾರ್ಯಗಳನ್ನು ವೀಕ್ಷಿಸುತ್ತಿದ್ದರು. ಅವರ ಕಾಯಕ ಸೇವೆಯಿಂದ ಇಂದು ಸಾಕಷ್ಟು ವಿದ್ಯಾರ್ಥಿಗಳು ಜಗತ್ತಿನಾದ್ಯಂತ ಪ್ರಜ್ವಲಿಸುತ್ತಿದ್ದಾರೆ, ಪ್ರೌಢಶಾಲಾ ಧ್ವಜವನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದರು.
ಶಿಕ್ಷಕರ ವೃತ್ತಿ ಪವಿತ್ರವಾದದ್ದು ಶಿಕ್ಷಕರನ್ನು ಸನ್ಮಾನಿಸುತ್ತಿರುವ ಗುರುವೃಂದ ಸಿಗುವುದು ಅಪರೂಪ. ನಿವೃತ್ತಿ ಹೊಂದಿದ ಮೇಲೆ ಅವರನ್ನು ಕರೆಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ ಶಿಷ್ಯ ವೃಂದದಿಂದ ಈ ಕಾರ್ಯಕ್ಕೆ ಶಿಕ್ಷಕರು ಆರೋಗ್ಯಪೂರ್ಣರಾಗುತ್ತಾರೆ ಹಾಗೂ ಕ್ರಿಯಾಶೀಲರಾಗಿರುತ್ತಾರೆ ಎಂದರು.
ಇಡೀ ಜಗತ್ತು ಭಾರತವನ್ನು ತಿರುಗಿ ನೋಡುವಂತೆ ರಚಿತವಾಗಿರುವ ಕಾವ್ಯವೆಂದರೆ ರಾಮಾಯಣ ಮತ್ತು ಮಹಾಭಾರತ. ಇಂದು ರಾಮಾಯಣ ರಚಿಸಿರುವ ವಾಲ್ಮೀಕಿ ಅವರ ಜಯಂತಿ ಜೀವನದ ಬದುಕಿಗೆ ಅನೇಕ ಮಾರ್ಗದರ್ಶನಗಳನ್ನು ವಾಲ್ಮೀಕಿ ಮಹರ್ಷಿಗಳು ರಾಮಾಯಣದ ಮೂಲಕ ತಿಳಿಸಿಕೊಟ್ಟಿದ್ದಾರೆ. ಜನನಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತಲೂ ಮಿಗಿಲಾದದ್ದು ಅಂತಹ ಜೀವನದ ಬದುಕಿನ ಸಂದೇಶವನ್ನು ಈ ರಾಮಾಯಣದಲ್ಲಿ ಕಾಣಬಹುದಾಗಿದೆ ಎಂದು ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ಅವರ ರಚಿಸಿರುವ ರಾಮಾಯಣದಲ್ಲಿನ ಸ್ವಾರಸ್ಯವನ್ನು ತಿಳಿಸಿದರು.
ಬೈಟ್: ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ಸಿದ್ದಗಂಗಾ ಮಠಧ್ಯಕ್ಷ


Conclusion:ಇದೇ ವೇಳೆ 1993-94 ರಲ್ಲಿ ಶಿಕ್ಷಣ ವೃತ್ತಿಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯಾಗಿರುವ ಶಿಕ್ಷಕರನ್ನು ಸನ್ಮಾನಿಸಲಾಯಿತು.

ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.