ತುಮಕೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ಯೋಧನ ಅಂತ್ಯಕ್ರಿಯೆಯನ್ನು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
ಮೂಲತಃ ಚಿಕ್ಕನಾಯಕನಹಳ್ಳಿಯವರಾಗಿದ್ದ ಯೋಧ ಅಗ್ಸರ್ ಖಾನ್ ಮೇ 23ರಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ನಿನ್ನೆ ರಾತ್ರಿಯೇ ಅವರ ಶವವನ್ನು ಚಿಕ್ಕನಾಯಕನಹಳ್ಳಿಗೆ ತರಲಾಗಿತ್ತು.
ಇದನ್ನೂ ಓದಿ: 1.5 ಲಕ್ಷ ಸಂಬಳ ಕೊಟ್ರೂ ಡಾಕ್ಟರ್ ಸಿಗ್ತಿಲ್ಲ, ಇಲ್ಲಿ ಶಿಕ್ಷಣ ಪಡೆದು ವಿದೇಶದಲ್ಲಿ ಕೆಲಸ ಮಾಡ್ತಾರೆ: ಸಚಿವ ಎಸ್.ಟಿ.ಸೋಮಶೇಖರ್