ತುಮಕೂರು: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿ ಬಿಡುಗಡೆಯಾಗಿದ್ದ ಖದೀಮ ಲಾಕ್ಡೌನ್ನಿಂದ ಕೆಲಸವಿಲ್ಲದೇ ಮತ್ತೆ ಹಳೆ ಚಾಳಿ ಮುಂದುವರೆಸಿ ಪೊಲೀಸರ ಕೈಗೆ ಸಿಕ್ಕು ಬಿದ್ದ ಘಟನೆ ನಗರದಲ್ಲಿ ನಡೆದಿದೆ.
ಸುದೀಪ್ ಬಂಧಿತ ಆರೋಪಿ. ಹಲವಾರು ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿ ನಾಲ್ಕು ತಿಂಗಳ ಹಿಂದಷ್ಟೆ ಹೊರ ಬಂದಿದ್ದ ಆರೋಪಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದು ಡ್ಯಾಶ್ ಬೋರ್ಡ್ನಲ್ಲಿದ್ದ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿದ್ದ.
ನಗರದ ಹೊರ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಟಿ ನಗರ, ಸಾಯಿ ಬಡಾವಣೆ, ಶ್ರೀರಾಮ ನಗರ, ರಿಲೇಯಬಲ್ ಲೇ ಔಟ್ ಹಾಗೂ ಇತರ ಏರಿಯಾಗಳಲ್ಲಿ ಕಳ್ಳ ತನ್ನ ಕೈ ಚಳಕ ತೋರಿಸಿದ್ದ. ಇದರಿಂದ ಜನರ ಭಯ ಭೀತರಾಗಿದ್ದರು.
ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಕೊನೆಗೂ ಆರೋಪಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಆರ್ಥಿಕ ದುಃಸ್ಥಿತಿಯಿಂದ ಕಳ್ಳತನ ಮಾಡುತ್ತಿದ್ದದ್ದಾಗಿ ಸುದೀಪ್ ಒಪ್ಪಿಕೊಂಡಿದ್ದಾನೆ.