ತುಮಕೂರು: ಮನೆಗಳಲ್ಲಿ ಹಾಗೂ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರನ್ನು ಕೊರಟಗೆರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ತುರುವೇಕೆರೆಯ ವೆಂಕಟೇಶ್, ತುಮಕೂರಿನ ಗೋಪಾಲ್ ಹಾಗೂ ಕೃಷ್ಣ ಎಂದು ಗುರುತಿಸಲಾಗಿದೆ. ಈ ಮೂವರು ಕೊರಟಗೆರೆ, ಮಧುಗಿರಿ, ನೆಲಮಂಗಲ, ಯಲ್ಲಾಪುರ ಹಾಗೂ ತೋವಿನಕೆರೆಗಳಲ್ಲಿ ಈ ಮೊದಲು ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.
ಇನ್ನು ಬಂಧಿತರಿಂದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮೂರು ಬೈಕ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.