ETV Bharat / crime

ಮನ್ಸುಖ್​ ಹಿರೇನ್ ಮೃತಪಟ್ಟಿದ್ದ ಸ್ಥಳದಲ್ಲೇ ಮತ್ತೊಂದು ಮೃತದೇಹ ಪತ್ತೆ..! - Reti Bunder, Mumbra

Another body was found at the spot where Mansukh Hiran's body was found. Mumbra police rushed to the spot. Mansukh's body was found on March 5 at Mumbra Retibandar

Another body was found at the spot where Mansukh Hiran's body was found
ಮನ್ಸುಖ್​ ಹಿರೇನ್ ಮೃತಪಟ್ಟಿದ್ದ ಸ್ಥಳದಲ್ಲೇ ಮತ್ತೊಂದು ಮೃತದೇಹ ಪತ್ತೆ
author img

By

Published : Mar 20, 2021, 11:25 AM IST

Updated : Mar 20, 2021, 11:54 AM IST

11:15 March 20

ಉದ್ಯಮಿ ಮನ್ಸುಖ್​ ಹಿರೇನ್ ಅವರ ಮೃತದೇಹ ಪತ್ತೆಯಾಗಿದ್ದ ಥಾಣೆ ಜಿಲ್ಲೆಯ ಮುಂಬ್ರಾದ ರೇತಿಬಂದರ್​ ಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದೆ.

ಮುಂಬೈ (ಮಹಾರಾಷ್ಟ್ರ): ಉದ್ಯಮಿ ಮುಖೇಶ್​​ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಎಸ್​ಯುವಿ ಕಾರು ಪತ್ತೆ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಈ ಕೇಸ್​ನ ಸುಳಿಯಲ್ಲಿ ಸಿಲುಕಿದ್ದ ಮನ್ಸುಖ್​ ಹಿರೇನ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದ ಸ್ಥಳದಲ್ಲೇ ಮತ್ತೊಂದು ಮೃತದೇಹ ಪತ್ತೆಯಾಗಿದೆ.  

ಮಾ.5 ರಂದು ಉದ್ಯಮಿ ಮನ್ಸುಖ್​ ಹಿರೇನ್ ಅವರ ಮೃತದೇಹ ಥಾಣೆ ಜಿಲ್ಲೆಯ ಮುಂಬ್ರಾದ ರೇತಿ ಬಂದರ್​ ಪ್ರದೇಶದಲ್ಲಿರುವ ನದಿಯೊಂದರಲ್ಲಿ ಪತ್ತೆಯಾಗಿತ್ತು. ಅದೇ ಸ್ಥಳದಲ್ಲಿ ಇಂದು ರೇತಿಬಂದರ್ ನಿವಾಸಿ ಶೇಖ್ ಸಲೀಮ್ ಅಬ್ದುಲ್ (48) ಎಂಬ ವ್ಯಕ್ತಿಯ ಶವ ಕಂಡು ಬಂದಿದ್ದು, ಸ್ಥಳಕ್ಕೆ ಮುಂಬೈ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.   

ಪ್ರಕರಣ ಹಿನ್ನೆಲೆ

ಕಳೆದ ತಿಂಗಳು ಉದ್ಯಮಿ ಮುಖೇಶ್​​ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್​ ಇರಿಸಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಮುಂಬೈ ಕ್ರೈಂ ಬ್ರ್ಯಾಂಚ್​ ಹಾಗೂ ಎಟಿಎಸ್​ ಜಂಟಿಯಾಗಿ ಪ್ರಕರಣ ತನಿಖೆ ನಡೆಸುತ್ತಿದ್ದು, ಮುಂಬೈ ಮೂಲದ ಮನ್ಸುಖ್​ ಹಿರೇನ್ ಅವರು ಸ್ಕಾರ್ಪಿಯೋ ಕಾರು ಮಾಲೀಕ ಎಂದು ಹೇಳಲಾಗಿತ್ತು.

ಆದರೆ, ಮಾರ್ಚ್ 5ರಂದು ಥಾಣೆಯ ನದಿಯೊಂದರಲ್ಲಿ ಮನ್ಸುಖ್​ ಹಿರೇನ್ ಮೃತದೇಹ ಪತ್ತೆಯಾಗಿತ್ತು. ಈ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ಮುಂಬೈನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿಸಿದೆ. ಆದರೆ ಆ ಸ್ಕಾರ್ಪಿಯೋ ಕಾರು ಮಾಲೀಕ ಮೃತ ಮನ್ಸುಖ್​ ಹಿರೇನ್ ಅಲ್ಲ, ಥಾಣೆ ಮೂಲದ ಸ್ಯಾಮ್ ನ್ಯೂಟನ್​​ ಎಂಬ ವಿಚಾರ ಕೂಡ ತನಿಖೆ ವೇಳೆ ಬೆಳಕಿಗೆ ಬಂದಿತ್ತು.  

ಮನ್ಸುಖ್​ ಹಿರೇನ್ ನಿಗೂಢ ಸಾವಿನ ಪ್ರಕರಣದಲ್ಲಿ ಪೊಲೀಸ್​ ಅಧಿಕಾರಿ ಸಚಿನ್​ ವಾಝೆ ಕೂಡ ಹೆಸರು ಕೇಳಿಬಂದಿತ್ತು. ಇವರ ವಿರುದ್ಧ ಅನೇಕ ಕೇಸ್​ಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ. 

11:15 March 20

ಉದ್ಯಮಿ ಮನ್ಸುಖ್​ ಹಿರೇನ್ ಅವರ ಮೃತದೇಹ ಪತ್ತೆಯಾಗಿದ್ದ ಥಾಣೆ ಜಿಲ್ಲೆಯ ಮುಂಬ್ರಾದ ರೇತಿಬಂದರ್​ ಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದೆ.

ಮುಂಬೈ (ಮಹಾರಾಷ್ಟ್ರ): ಉದ್ಯಮಿ ಮುಖೇಶ್​​ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಎಸ್​ಯುವಿ ಕಾರು ಪತ್ತೆ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಈ ಕೇಸ್​ನ ಸುಳಿಯಲ್ಲಿ ಸಿಲುಕಿದ್ದ ಮನ್ಸುಖ್​ ಹಿರೇನ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದ ಸ್ಥಳದಲ್ಲೇ ಮತ್ತೊಂದು ಮೃತದೇಹ ಪತ್ತೆಯಾಗಿದೆ.  

ಮಾ.5 ರಂದು ಉದ್ಯಮಿ ಮನ್ಸುಖ್​ ಹಿರೇನ್ ಅವರ ಮೃತದೇಹ ಥಾಣೆ ಜಿಲ್ಲೆಯ ಮುಂಬ್ರಾದ ರೇತಿ ಬಂದರ್​ ಪ್ರದೇಶದಲ್ಲಿರುವ ನದಿಯೊಂದರಲ್ಲಿ ಪತ್ತೆಯಾಗಿತ್ತು. ಅದೇ ಸ್ಥಳದಲ್ಲಿ ಇಂದು ರೇತಿಬಂದರ್ ನಿವಾಸಿ ಶೇಖ್ ಸಲೀಮ್ ಅಬ್ದುಲ್ (48) ಎಂಬ ವ್ಯಕ್ತಿಯ ಶವ ಕಂಡು ಬಂದಿದ್ದು, ಸ್ಥಳಕ್ಕೆ ಮುಂಬೈ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.   

ಪ್ರಕರಣ ಹಿನ್ನೆಲೆ

ಕಳೆದ ತಿಂಗಳು ಉದ್ಯಮಿ ಮುಖೇಶ್​​ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್​ ಇರಿಸಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಮುಂಬೈ ಕ್ರೈಂ ಬ್ರ್ಯಾಂಚ್​ ಹಾಗೂ ಎಟಿಎಸ್​ ಜಂಟಿಯಾಗಿ ಪ್ರಕರಣ ತನಿಖೆ ನಡೆಸುತ್ತಿದ್ದು, ಮುಂಬೈ ಮೂಲದ ಮನ್ಸುಖ್​ ಹಿರೇನ್ ಅವರು ಸ್ಕಾರ್ಪಿಯೋ ಕಾರು ಮಾಲೀಕ ಎಂದು ಹೇಳಲಾಗಿತ್ತು.

ಆದರೆ, ಮಾರ್ಚ್ 5ರಂದು ಥಾಣೆಯ ನದಿಯೊಂದರಲ್ಲಿ ಮನ್ಸುಖ್​ ಹಿರೇನ್ ಮೃತದೇಹ ಪತ್ತೆಯಾಗಿತ್ತು. ಈ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ಮುಂಬೈನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿಸಿದೆ. ಆದರೆ ಆ ಸ್ಕಾರ್ಪಿಯೋ ಕಾರು ಮಾಲೀಕ ಮೃತ ಮನ್ಸುಖ್​ ಹಿರೇನ್ ಅಲ್ಲ, ಥಾಣೆ ಮೂಲದ ಸ್ಯಾಮ್ ನ್ಯೂಟನ್​​ ಎಂಬ ವಿಚಾರ ಕೂಡ ತನಿಖೆ ವೇಳೆ ಬೆಳಕಿಗೆ ಬಂದಿತ್ತು.  

ಮನ್ಸುಖ್​ ಹಿರೇನ್ ನಿಗೂಢ ಸಾವಿನ ಪ್ರಕರಣದಲ್ಲಿ ಪೊಲೀಸ್​ ಅಧಿಕಾರಿ ಸಚಿನ್​ ವಾಝೆ ಕೂಡ ಹೆಸರು ಕೇಳಿಬಂದಿತ್ತು. ಇವರ ವಿರುದ್ಧ ಅನೇಕ ಕೇಸ್​ಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ. 

Last Updated : Mar 20, 2021, 11:54 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.