ETV Bharat / crime

ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು

author img

By

Published : Apr 27, 2021, 11:15 PM IST

ಶಿರವಾಡದಿಂದ ಕಾರವಾರಕ್ಕೆ ಬರುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಟಿಪ್ಪರ್ ಚಕ್ರದ ಅಡಿ ಸಿಲುಕಿದ ಕಾರಣ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

Accident news
Accident news

ಕಾರವಾರ: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಾರವಾರ ತಾಲೂಕಿನ ಶಿರವಾಡದ ಬಳಿ ಇಂದು ನಡೆದಿದೆ.

ತಾಲೂಕಿನ ಕಿನ್ನರ ಮೂಲದ ವಿಘ್ನೇಶ್ವರ ಚಿಂಚನಕರ್ (31) ಮೃತ ಯುವಕ. ಶಿರವಾಡದಿಂದ ಕಾರವಾರಕ್ಕೆ ಬರುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಟಿಪ್ಪರ್ ಚಕ್ರದ ಅಡಿ ಸಿಲುಕಿದ ಕಾರಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತ ಯುವಕ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ನಾಳೆಯಿಂದ ಕೊರೊನಾ ಕರ್ಪ್ಯೂ ಇರುವ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದ ಎನ್ನಲಾಗಿದೆ.

ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಾರವಾರ ತಾಲೂಕಿನ ಶಿರವಾಡದ ಬಳಿ ಇಂದು ನಡೆದಿದೆ.

ತಾಲೂಕಿನ ಕಿನ್ನರ ಮೂಲದ ವಿಘ್ನೇಶ್ವರ ಚಿಂಚನಕರ್ (31) ಮೃತ ಯುವಕ. ಶಿರವಾಡದಿಂದ ಕಾರವಾರಕ್ಕೆ ಬರುತ್ತಿದ್ದಾಗ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಟಿಪ್ಪರ್ ಚಕ್ರದ ಅಡಿ ಸಿಲುಕಿದ ಕಾರಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಮೃತ ಯುವಕ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ನಾಳೆಯಿಂದ ಕೊರೊನಾ ಕರ್ಪ್ಯೂ ಇರುವ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದ ಎನ್ನಲಾಗಿದೆ.

ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.