ETV Bharat / crime

ಗದಗ: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಮೂವರ ಸಾವು

author img

By

Published : May 12, 2021, 4:38 PM IST

ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ಈ ದುರ್ಘಟನೆ ನೆಡದಿದೆ. ಗಾಯಗೊಂಡ ಶಂಕ್ರಪ್ಪ ಎಂಬಾತ ಗ್ರಾಮಸ್ಥರಿಗೆ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದೆವು ಎಂದು ಮಾಹಿತಿ ನೀಡಿದ್ದಾನೆ.

car-accident-three-peoples-dead-in-gadaga-news
ಮರಕ್ಕೆ ಡಿಕ್ಕಿ ಹೊಡೆದ ಕಾರು

ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಗದಗ ತಾಲೂಕಿನ ಹರ್ತಿ ಬಳಿ ಸಂಭವಿಸಿದೆ.

ಮರಕ್ಕೆ ಡಿಕ್ಕಿ ಹೊಡೆದ ಕಾರು

ಓದಿ: ಪೊಲೀಸರ ವಿರುದ್ಧ ಸುಳ್ಳು ವಿಡಿಯೋ ವೈರಲ್: ಆರೋಪಿ ಬಂಧನ, ಲಕ್ಷ್ಮಣ ಮರ್ಡರ್ ಕೇಸ್​ ನಂಟು

ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗ್ರಾಮಸ್ಥರು ಜಿಮ್ಸ್​​ಗೆ ರವಾನಿಸಿದ್ದಾರೆ. ಕಾರು ಅರ್ಧ ಮರದಲ್ಲಿಯೇ ಸಿಲುಕಿಕೊಂಡಿದ್ದು, ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದಾನೆ. ಕಾರಲ್ಲಿದ್ದವರು ಹೊಲದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯ ನೆರೆದವರ ಕಣ್ಣಲ್ಲಿ ನೀರು ತರಿಸಿದೆ.

ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ಈ ದುರ್ಘಟನೆ ನೆಡದಿದೆ. ಗಾಯಗೊಂಡ ಶಂಕ್ರಪ್ಪ ಎಂಬಾತ ಗ್ರಾಮಸ್ಥರಿಗೆ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದೆವು ಎಂದು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಗದಗ ತಾಲೂಕಿನ ಹರ್ತಿ ಬಳಿ ಸಂಭವಿಸಿದೆ.

ಮರಕ್ಕೆ ಡಿಕ್ಕಿ ಹೊಡೆದ ಕಾರು

ಓದಿ: ಪೊಲೀಸರ ವಿರುದ್ಧ ಸುಳ್ಳು ವಿಡಿಯೋ ವೈರಲ್: ಆರೋಪಿ ಬಂಧನ, ಲಕ್ಷ್ಮಣ ಮರ್ಡರ್ ಕೇಸ್​ ನಂಟು

ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗ್ರಾಮಸ್ಥರು ಜಿಮ್ಸ್​​ಗೆ ರವಾನಿಸಿದ್ದಾರೆ. ಕಾರು ಅರ್ಧ ಮರದಲ್ಲಿಯೇ ಸಿಲುಕಿಕೊಂಡಿದ್ದು, ಚಾಲಕ ಮರದಡಿಯಲ್ಲಿಯೇ ಸಿಲುಕಿಕೊಂಡಿದ್ದಾನೆ. ಕಾರಲ್ಲಿದ್ದವರು ಹೊಲದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯ ನೆರೆದವರ ಕಣ್ಣಲ್ಲಿ ನೀರು ತರಿಸಿದೆ.

ಗದಗ ತಾಲೂಕಿನ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುವಾಗ ಈ ದುರ್ಘಟನೆ ನೆಡದಿದೆ. ಗಾಯಗೊಂಡ ಶಂಕ್ರಪ್ಪ ಎಂಬಾತ ಗ್ರಾಮಸ್ಥರಿಗೆ ಲಿಂಗದಾಳದಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದೆವು ಎಂದು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.