ವಿರುದುನಗರ(ತಮಿಳುನಾಡು): 2022ರ ಹೊಸ ವರ್ಷದ ಮೊದಲ ದಿನವೇ ತಮಿಳುನಾಡಿನ ಶಿವಕಾಶಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಶಿವಕಾಶಿಯ ಎಂ.ಪುದುಪಟ್ಟಿ ಗ್ರಾಮದ ವಡಿವೇಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವಾಗಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಪಟಾಕಿ ತಯಾರಿಸುವಾಗ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಎಂ.ಪುದುಪಟ್ಟಿ ಗ್ರಾಮಕ್ಕೆ ಆಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.