ETV Bharat / crime

ರಾಜಸ್ಥಾನದಲ್ಲಿ ಹುಬ್ಬಳ್ಳಿ ಪೊಲೀಸರ ಭರ್ಜರಿ ಬೇಟೆ.. ಮೂವರು ನಟೋರಿಯಸ್ ದರೋಡೆಕೋರರು ಅರೆಸ್ಟ್​

author img

By

Published : Mar 21, 2022, 5:38 PM IST

ರಾಜಸ್ಥಾನಕ್ಕೆ ತೆರಳಿ ಕಾರ್ಯಚರಣೆ ನಡೆಸಿದ್ದ ಕೇಶ್ವಾಪುರ ಠಾಣೆ ಪೊಲೀಸರು ರಾಜಸ್ಥಾನ ಮೂಲದ ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 171 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಮತ್ತಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

Police confiscated 171 gram gold from dacoits
ಬಂಧಿತರಿಂದ ಬರೋಬ್ಬರಿ 7.5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ ಪೊಲೀಸರು.

ಹುಬ್ಬಳ್ಳಿ: ರಾಜಸ್ಥಾನದ ಅಜ್ಮೇರ್ ಹಾಗೂ ಬಿಲವಾಡ ಮೂಲದ ಮೂರು ಜನ ನಟೋರಿಯಸ್ ದರೋಡೆಕೋರರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಬರೋಬ್ಬರಿ 7.5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದು, ತಲೆ‌ಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ‌ ಬಲೆ ಬೀಸಲಾಗಿದೆ. ಲೈಟ್ ಬಲೂನ್ ಮಾರಾಟದ ಸೋಗಿನಲ್ಲಿ ರೈಲಿನ ಮೂಲಕ ರಾಜ್ಯಕ್ಕೆ ಆಗಮಿಸಿದ್ದ ನಟೋರಿಯಸ್ ದರೋಡೆಕೋರರು‌, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಇತರೆ ನಗರಗಳಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ ದರೋಡೆ ಮಾಡುತ್ತಿದ್ದರು.

ಹುಬ್ಬಳ್ಳಿಯ ಕೇಶ್ವಾಪುರ ಮತ್ತು ಗೋಕುಲ್​ ರಸ್ತೆಯ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಬೆಳಗಾವಿ ಜಿಲ್ಲೆಯ ಟಿಳಕವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಒಂದು ವಾರದಿಂದ ರಾಜಸ್ಥಾನಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದ ಕೇಶ್ವಾಪುರ ಠಾಣೆಯ ಪೊಲೀಸ್ ಇನ್​ಸ್ಪೆಕ್ಟರ್​ ಜಗದೀಶ್ ಹಂಚಿನಾಳ ನೇತೃತ್ವದ ತಂಡ ಮೂವರು ದರೋಡೆಕೋರರನ್ನು ಬಂಧಿಸಿ, ಅವರಿಂದ 171 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದೆ.

ಹುಬ್ಬಳ್ಳಿ: ರಾಜಸ್ಥಾನದ ಅಜ್ಮೇರ್ ಹಾಗೂ ಬಿಲವಾಡ ಮೂಲದ ಮೂರು ಜನ ನಟೋರಿಯಸ್ ದರೋಡೆಕೋರರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಬರೋಬ್ಬರಿ 7.5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದು, ತಲೆ‌ಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ‌ ಬಲೆ ಬೀಸಲಾಗಿದೆ. ಲೈಟ್ ಬಲೂನ್ ಮಾರಾಟದ ಸೋಗಿನಲ್ಲಿ ರೈಲಿನ ಮೂಲಕ ರಾಜ್ಯಕ್ಕೆ ಆಗಮಿಸಿದ್ದ ನಟೋರಿಯಸ್ ದರೋಡೆಕೋರರು‌, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಇತರೆ ನಗರಗಳಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ ದರೋಡೆ ಮಾಡುತ್ತಿದ್ದರು.

ಹುಬ್ಬಳ್ಳಿಯ ಕೇಶ್ವಾಪುರ ಮತ್ತು ಗೋಕುಲ್​ ರಸ್ತೆಯ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಬೆಳಗಾವಿ ಜಿಲ್ಲೆಯ ಟಿಳಕವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಒಂದು ವಾರದಿಂದ ರಾಜಸ್ಥಾನಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದ ಕೇಶ್ವಾಪುರ ಠಾಣೆಯ ಪೊಲೀಸ್ ಇನ್​ಸ್ಪೆಕ್ಟರ್​ ಜಗದೀಶ್ ಹಂಚಿನಾಳ ನೇತೃತ್ವದ ತಂಡ ಮೂವರು ದರೋಡೆಕೋರರನ್ನು ಬಂಧಿಸಿ, ಅವರಿಂದ 171 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.