ETV Bharat / crime

ಮೂರು ವರ್ಷಗಳ ಬಳಿಕ ವ್ಯಕ್ತಿ ಸಾವಿಗೆ ಸಂಬಂಧಿಸಿದಂತೆ ಎಫ್ಐಆರ್​.. ಕೋರ್ಟ್​ ನಿರ್ದೇಶನದಂತೆ ತನಿಖೆ ಆರಂಭ - ಕೋರ್ಟ್​ ನಿರ್ದೇಶನದಂತೆ ತನಿಖೆ ಆರಂಭ

ಕೋರ್ಟ್​ ನಿರ್ದೇಶನದಂತೆ ತನಿಖೆ ಆರಂಭ; ಮಾರ್ಚ್ 11, 2020 ರಂದು ವೈದ್ಯಕೀಯ ಮಂಡಳಿಯು ಶವಪರೀಕ್ಷೆ ಕೂಡಾ ನಡೆಸಿತ್ತು. ಮಾರ್ಚ್ 19 ರಂದು ಮೃತರನ್ನು ಚಾಂದ್ ಬಾಗ್ ನಿವಾಸಿ ಮೊಹಮ್ಮದ್ ಮುಷ್ತಾಕ್ ಅವರ ಪುತ್ರ ಸಿಕಂದರ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಅವರ ಕುಟುಂಬಕ್ಕೆ ಅಂತಿಮ ವಿಧಿವಿಧಾನಗಳಿಗಾಗಿ ಹಸ್ತಾಂತರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Man found dead in 2020: Delhi Police files culpable homicide case on court's direction
ಮೂರು ವರ್ಷಗಳ ಬಳಿಕ ವ್ಯಕ್ತಿ ಸಾವಿಗೆ ಸಂಬಂಧಿಸಿದಂತೆ ಎಫ್ಐಆರ್
author img

By

Published : Oct 22, 2022, 11:00 AM IST

ನವದೆಹಲಿ: ಸುಮಾರು ಮೂರು ವರ್ಷಗಳ ನಂತರ ವ್ಯಕ್ತಿಯೊಬ್ಬರ ಸಾವಿನ ಪ್ರಕರಣ ಕುರಿತಂತೆ ಕೇಸ್​​​​ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ವರ್ಷಗಳ ಹಿಂದೆ ವ್ಯಕ್ತಿಯೊಬ್ಬರು ದೆಹಲಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ್ದರು. ಇವರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.

ಬಳಿಕ ನಡೆದ ಪೊಲೀಸ್​ ಪ್ರಾಥಮಿಕ ವಿಚಾರಣೆ ವೇಳೆ ವ್ಯಕ್ತಿ ಉಸಿರಾಟದ ವೈಫಲ್ಯದಿಂದ ಮೃತಪಟ್ಟಿದ್ದರು ಎಂದು ಘೋಷಿಸಲಾಗಿತ್ತು. ಆದರೆ ಸಾವನ್ನಪ್ಪಿದ ಕುಟುಂಬದ ಸದಸ್ಯರು ಒಪ್ಪಲು ರೆಡಿ ಇರಲಿಲ್ಲ. ಹಾಗೂ ಈ ಸಂಬಂಧ ಅವರು ಕೋರ್ಟ್​ ಮೆಟ್ಟಿಲೇರಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಪ್ರಕರಣ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದೆ.


ಏನಿದು ಘಟನೆ?: ಫೆಬ್ರವರಿ 27, 2020 ರಂದು 45 ವರ್ಷದ ವ್ಯಕ್ತಿಯೊಬ್ಬರು ಖಜೂರಿ ಖಾಸ್ ಕೆಂಪು ದೀಪದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಆ ವ್ಯಕ್ತಿ ಸತ್ತಿದ್ದಾನೆ ಎಂದು ಘೋಷಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕ್ರಿಮಿನಲ್ ಪ್ರೊಸೀಜರ್ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 174 ರ ಅಡಿ ಪ್ರಕ್ರಿಯೆಗಳನ್ನು ನಿಯಮಗಳಿಗೆ ಅನುಸಾರವಾಗಿ ನಡೆಸಲಾಗಿದೆ ಎಂದೂ ಪೊಲೀಸ್​ ಅಧಿಕಾರಿ ಸ್ಪಷ್ಟನೆ ಕೊಟ್ಟಿದ್ದಾರೆ.

ಮಾರ್ಚ್ 11, 2020 ರಂದು ವೈದ್ಯಕೀಯ ಮಂಡಳಿಯು ಶವಪರೀಕ್ಷೆ ಕೂಡಾ ನಡೆಸಿತ್ತು. ಮಾರ್ಚ್ 19 ರಂದು ಮೃತರನ್ನು ಚಾಂದ್ ಬಾಗ್ ನಿವಾಸಿ ಮೊಹಮ್ಮದ್ ಮುಷ್ತಾಕ್ ಅವರ ಪುತ್ರ ಸಿಕಂದರ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಅವರ ಕುಟುಂಬಕ್ಕೆ ಅಂತಿಮ ವಿಧಿವಿಧಾನಗಳಿಗಾಗಿ ಹಸ್ತಾಂತರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ಕಾರಣ ಉಸಿರಾಟದ ವೈಫಲ್ಯ ಎಂದು ಕಂಡು ಬಂದಿದೆ. ವ್ಯಕ್ತಿಯ ದೇಹದಲ್ಲಿ ಯಾವುದೇ ಗಾಯವಾಗಿಲ್ಲ ಎಂದು ಅವರು ಹೇಳಿದರು. ಆದರೆ, ಇದರಿಂದ ತೃಪ್ತರಾಗದ ಮೃತರ ಕುಟುಂಬವು ಎಫ್‌ಐಆರ್ ನೋಂದಣಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ವ್ಯಕ್ತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ನಗರ ಪೊಲೀಸರಿಗೆ ಸೂಚಿಸಿದೆ. ಈ ವರ್ಷ ಜುಲೈ 27 ರಂದು ಕೋರ್ಟ್​ ಈ ಆದೇಶವನ್ನು ನೀಡಿದೆ. ಅಕ್ಟೋಬರ್ 17 ರಂದು ಈ ಬಗ್ಗೆ ಎಫ್​ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಮರು ಆದೇಶ ಹೊರಡಿಸಿದೆ.

ನ್ಯಾಯಾಲಯದ ಆದೇಶದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ರ ಅಡಿ (ಕೊಲೆಗೆ ಸಮನಾಗಿರುವುದಿಲ್ಲ ಅಪರಾಧಿ ನರಹತ್ಯೆಗೆ ಶಿಕ್ಷೆ) ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ. ಹಾಗೂ ಈ ಸಂಬಂಧ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಪ್ರಕರಣದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಪೊಲೀಸರು, ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳಿಗೂ ಈ ಸಾವಿಗೂ ಸಂಬಂಧವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿ:ಭೀಕರ ರಸ್ತೆ ಅಪಘಾತ.. ದೀಪಾವಳಿಗೆ ಹೊರಟ 15 ಮಂದಿಯ ದಾರುಣ ಸಾವು.. 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ನವದೆಹಲಿ: ಸುಮಾರು ಮೂರು ವರ್ಷಗಳ ನಂತರ ವ್ಯಕ್ತಿಯೊಬ್ಬರ ಸಾವಿನ ಪ್ರಕರಣ ಕುರಿತಂತೆ ಕೇಸ್​​​​ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ವರ್ಷಗಳ ಹಿಂದೆ ವ್ಯಕ್ತಿಯೊಬ್ಬರು ದೆಹಲಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ್ದರು. ಇವರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.

ಬಳಿಕ ನಡೆದ ಪೊಲೀಸ್​ ಪ್ರಾಥಮಿಕ ವಿಚಾರಣೆ ವೇಳೆ ವ್ಯಕ್ತಿ ಉಸಿರಾಟದ ವೈಫಲ್ಯದಿಂದ ಮೃತಪಟ್ಟಿದ್ದರು ಎಂದು ಘೋಷಿಸಲಾಗಿತ್ತು. ಆದರೆ ಸಾವನ್ನಪ್ಪಿದ ಕುಟುಂಬದ ಸದಸ್ಯರು ಒಪ್ಪಲು ರೆಡಿ ಇರಲಿಲ್ಲ. ಹಾಗೂ ಈ ಸಂಬಂಧ ಅವರು ಕೋರ್ಟ್​ ಮೆಟ್ಟಿಲೇರಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಪ್ರಕರಣ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದೆ.


ಏನಿದು ಘಟನೆ?: ಫೆಬ್ರವರಿ 27, 2020 ರಂದು 45 ವರ್ಷದ ವ್ಯಕ್ತಿಯೊಬ್ಬರು ಖಜೂರಿ ಖಾಸ್ ಕೆಂಪು ದೀಪದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಆ ವ್ಯಕ್ತಿ ಸತ್ತಿದ್ದಾನೆ ಎಂದು ಘೋಷಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕ್ರಿಮಿನಲ್ ಪ್ರೊಸೀಜರ್ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 174 ರ ಅಡಿ ಪ್ರಕ್ರಿಯೆಗಳನ್ನು ನಿಯಮಗಳಿಗೆ ಅನುಸಾರವಾಗಿ ನಡೆಸಲಾಗಿದೆ ಎಂದೂ ಪೊಲೀಸ್​ ಅಧಿಕಾರಿ ಸ್ಪಷ್ಟನೆ ಕೊಟ್ಟಿದ್ದಾರೆ.

ಮಾರ್ಚ್ 11, 2020 ರಂದು ವೈದ್ಯಕೀಯ ಮಂಡಳಿಯು ಶವಪರೀಕ್ಷೆ ಕೂಡಾ ನಡೆಸಿತ್ತು. ಮಾರ್ಚ್ 19 ರಂದು ಮೃತರನ್ನು ಚಾಂದ್ ಬಾಗ್ ನಿವಾಸಿ ಮೊಹಮ್ಮದ್ ಮುಷ್ತಾಕ್ ಅವರ ಪುತ್ರ ಸಿಕಂದರ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಅವರ ಕುಟುಂಬಕ್ಕೆ ಅಂತಿಮ ವಿಧಿವಿಧಾನಗಳಿಗಾಗಿ ಹಸ್ತಾಂತರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ಕಾರಣ ಉಸಿರಾಟದ ವೈಫಲ್ಯ ಎಂದು ಕಂಡು ಬಂದಿದೆ. ವ್ಯಕ್ತಿಯ ದೇಹದಲ್ಲಿ ಯಾವುದೇ ಗಾಯವಾಗಿಲ್ಲ ಎಂದು ಅವರು ಹೇಳಿದರು. ಆದರೆ, ಇದರಿಂದ ತೃಪ್ತರಾಗದ ಮೃತರ ಕುಟುಂಬವು ಎಫ್‌ಐಆರ್ ನೋಂದಣಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ, ವ್ಯಕ್ತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ನಗರ ಪೊಲೀಸರಿಗೆ ಸೂಚಿಸಿದೆ. ಈ ವರ್ಷ ಜುಲೈ 27 ರಂದು ಕೋರ್ಟ್​ ಈ ಆದೇಶವನ್ನು ನೀಡಿದೆ. ಅಕ್ಟೋಬರ್ 17 ರಂದು ಈ ಬಗ್ಗೆ ಎಫ್​ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಮರು ಆದೇಶ ಹೊರಡಿಸಿದೆ.

ನ್ಯಾಯಾಲಯದ ಆದೇಶದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ರ ಅಡಿ (ಕೊಲೆಗೆ ಸಮನಾಗಿರುವುದಿಲ್ಲ ಅಪರಾಧಿ ನರಹತ್ಯೆಗೆ ಶಿಕ್ಷೆ) ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ. ಹಾಗೂ ಈ ಸಂಬಂಧ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಪ್ರಕರಣದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಪೊಲೀಸರು, ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳಿಗೂ ಈ ಸಾವಿಗೂ ಸಂಬಂಧವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿ:ಭೀಕರ ರಸ್ತೆ ಅಪಘಾತ.. ದೀಪಾವಳಿಗೆ ಹೊರಟ 15 ಮಂದಿಯ ದಾರುಣ ಸಾವು.. 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.