ಬಾರಾಮುಲ್ಲಾ (ಜಮ್ಮು-ಕಾಶ್ಮೀರ): ಉಗ್ರರ ಗುಂಡಿನ ದಾಳಿಯಲ್ಲಿ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಓರ್ವ ಕೌನ್ಸಿಲರ್ ಮೃತ ಪಟ್ಟಿದ್ದು, ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ.
ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಬಿಡಿಸಿ (ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್) ಅಧ್ಯಕ್ಷೆ ಫರೀದಾ ಖಾನ್ ಅವರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದ ಕೌನ್ಸಿಲರ್ ಹಾಗೂ ಪೊಲೀಸ್ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಫರೀದಾ ಖಾನ್ ಅವರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಅಂಗಡಿ ಕಮ್ ಮನೆಯಲ್ಲಿ ಬೆಂಕಿ: ನಿದ್ರೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಚಿರನಿದ್ರೆಗೆ
ಸೋಪೋರ್ ಪ್ರದೇಶವನ್ನು ಸುತ್ತುವರೆದಿರುವ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.