ETV Bharat / crime

ಮಂಡ್ಯ: ರೌಡಿಶೀಟರ್​ಗಳ ನಡುವೆ ಮಾತಿನ ಚಕಮಕಿ, ಗಲಾಟೆ ಕೊಲೆಯಲ್ಲಿ ಅಂತ್ಯ

author img

By

Published : Nov 21, 2022, 7:27 PM IST

ರೌಡಿ ಶೀಟರ್​ಗಳ ನಡುವೆ ಹಣಕಾಸಿನ ವಿಚಾರಕ್ಕಾಗಿ ಜಗಳ, ಕೊಲೆಯಲ್ಲಿ ಅಂತ್ಯವಾದ ಘಟನೆ ಭಾನುವಾರ ಸಂಜೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದಲ್ಲಿ ನಡೆದಿದೆ. ರೌಡಿ ಶೀಟರ್ ಅರುಣ್ ಅಲಿಯಾಸ್ ಕಪ್ಪೆ (23) ಹತ್ಯೆಯಾದ ವ್ಯಕ್ತಿ.

rowdy sheeter murder
ರೌಡಿಶೀಟರ್​ಗಳ ನಡುವೆ ಮಾತಿನ ಚಕಮಕಿ...ಕೊಲೆಯಲ್ಲಿ ಅಂತ್ಯ

ಮಂಡ್ಯ: ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಗ್ರಾಮದ ರೌಡಿ ಶೀಟರ್ ಅರುಣ್ ಅಲಿಯಾಸ್ ಕಪ್ಪೆ ಹಾಗೂ ಅದೇ ಗ್ರಾಮದ ರೌಡಿ ಶೀಟರ್​ಗಳಾದ ದೊಡ್ಡಯ್ಯ ಮತ್ತು ದೇವರಾಜು ಅವರ ನಡುವೆ ಭಾನುವಾರ ಸಂಜೆ ಹಣಕಾಸಿನ ವಿಚಾರಕ್ಕಾಗಿ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಹೊಡೆದಾಟದಲ್ಲಿ ಅರುಣ್ ಅಲಿಯಾಸ್ ಕಪ್ಪೆಗೆ ದೇವರಾಜು ಮತ್ತು ದೊಡ್ಡಯ್ಯ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಅರುಣ್ ಮೂಗಿನಲ್ಲಿ ತೀವ್ರವಾಗಿ ರಕ್ತಸ್ರಾವವಾಗಿದ್ದು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಹಿಂಬಾಲಿಸಿ ಬಂದ ದೊಡ್ಡಯ್ಯ ಮತ್ತವನ ಸಹಚರರು, ಎತ್ತಿನ ಗಾಡಿ ಗೂಟದಿಂದ ಮತ್ತೆ ಅರುಣ್ ಮೇಲೆ ತೀಕ್ಷ್ಣವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಚಿಕಿತ್ಸೆ ಫಲಕಾರಿಯಾಗದೆ ಸಾವು: ಗಂಭೀರವಾಗಿ ಗಾಯಗೊಂಡಿದ್ದ ಅರುಣ್ ಕೆ.ಎಂ. ದೊಡ್ಡಿಯ ಜಿ.ಮಾದೇಗೌಡ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಅರುಣ್ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಒಪ್ಪಿಸಲಾಗಿದೆ.

ಅರುಣ್​ನನ್ನು ತೀವ್ರವಾಗಿ ಥಳಿಸಿ ಹತ್ಯೆಮಾಡಿದ ರೌಡಿಶೀಟರ್​ಗಳಾದ ದೊಡ್ಡಯ್ಯ ಮತ್ತು ದೇವರಾಜು ಹಾಗೂ ಮತ್ತವರ ಸಹಚರರು ಸೇರಿ ಒಟ್ಟು 5 ಮಂದಿಯ ಮೇಲೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಅರುಣ್ ಕೊಲೆ ಹಿನ್ನೆಲೆಯಲ್ಲಿ ದೊಡ್ಡರಸಿನಕೆರೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಗ್ರಾಮದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಎಷ್ಟು ದುಡಿದರೂ ದುಡ್ಡು ದುಡ್ಡು ಅಂತಾಳೆ.. ಪತ್ನಿಯ ಧನದಾಹಕ್ಕೆ ಬೇಸತ್ತು ಗಂಡ ಆತ್ಮಹತ್ಯೆ

ಮಂಡ್ಯ: ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಗ್ರಾಮದ ರೌಡಿ ಶೀಟರ್ ಅರುಣ್ ಅಲಿಯಾಸ್ ಕಪ್ಪೆ ಹಾಗೂ ಅದೇ ಗ್ರಾಮದ ರೌಡಿ ಶೀಟರ್​ಗಳಾದ ದೊಡ್ಡಯ್ಯ ಮತ್ತು ದೇವರಾಜು ಅವರ ನಡುವೆ ಭಾನುವಾರ ಸಂಜೆ ಹಣಕಾಸಿನ ವಿಚಾರಕ್ಕಾಗಿ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಹೊಡೆದಾಟದಲ್ಲಿ ಅರುಣ್ ಅಲಿಯಾಸ್ ಕಪ್ಪೆಗೆ ದೇವರಾಜು ಮತ್ತು ದೊಡ್ಡಯ್ಯ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಅರುಣ್ ಮೂಗಿನಲ್ಲಿ ತೀವ್ರವಾಗಿ ರಕ್ತಸ್ರಾವವಾಗಿದ್ದು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಹಿಂಬಾಲಿಸಿ ಬಂದ ದೊಡ್ಡಯ್ಯ ಮತ್ತವನ ಸಹಚರರು, ಎತ್ತಿನ ಗಾಡಿ ಗೂಟದಿಂದ ಮತ್ತೆ ಅರುಣ್ ಮೇಲೆ ತೀಕ್ಷ್ಣವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಚಿಕಿತ್ಸೆ ಫಲಕಾರಿಯಾಗದೆ ಸಾವು: ಗಂಭೀರವಾಗಿ ಗಾಯಗೊಂಡಿದ್ದ ಅರುಣ್ ಕೆ.ಎಂ. ದೊಡ್ಡಿಯ ಜಿ.ಮಾದೇಗೌಡ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಅರುಣ್ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಒಪ್ಪಿಸಲಾಗಿದೆ.

ಅರುಣ್​ನನ್ನು ತೀವ್ರವಾಗಿ ಥಳಿಸಿ ಹತ್ಯೆಮಾಡಿದ ರೌಡಿಶೀಟರ್​ಗಳಾದ ದೊಡ್ಡಯ್ಯ ಮತ್ತು ದೇವರಾಜು ಹಾಗೂ ಮತ್ತವರ ಸಹಚರರು ಸೇರಿ ಒಟ್ಟು 5 ಮಂದಿಯ ಮೇಲೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಅರುಣ್ ಕೊಲೆ ಹಿನ್ನೆಲೆಯಲ್ಲಿ ದೊಡ್ಡರಸಿನಕೆರೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಗ್ರಾಮದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಎಷ್ಟು ದುಡಿದರೂ ದುಡ್ಡು ದುಡ್ಡು ಅಂತಾಳೆ.. ಪತ್ನಿಯ ಧನದಾಹಕ್ಕೆ ಬೇಸತ್ತು ಗಂಡ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.