ETV Bharat / crime

ಕಾಡುಪಾಪಗಳ ಸಾಗಿಸುತ್ತಿದ್ದ ಇಬ್ಬರ ಬಂಧನ.. ಮೂಕಪ್ರಾಣಿಗಳ ರಕ್ಷಣೆ

ಕಾಡುಪಾಪಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಮೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ.

author img

By

Published : Dec 15, 2022, 12:56 PM IST

Stealing and transporting Slender loris
ಕಾಡುಪಾಪಗಳನ್ನು ಕದ್ದು ಸಾಗಾಟ : ಇಬ್ಬರ ಬಂಧನ

ಚಾಮರಾಜನಗರ: ಕಾಡುಪಾಪಗಳನ್ನು ಸಾಗಿಸುತ್ತಿದ್ದಾಗ ಇಬ್ಬರು ಖದೀಮರು ಸಿಕ್ಕಿಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ನಡೆದಿದೆ. ಹನೂರು ತಾಲೂಕಿನ ವೀರಭದ್ರಪ್ಪ (58) ಹಾಗೂ ಮೈಸೂರಿನ ದೊಡ್ಡಕಾನ್ಯ ಗ್ರಾಮದ ಪಿ.ರಾಜು(45) ಬಂಧಿತ ಆರೋಪಿಗಳು.

ಕಾಡುಪಾಪಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳ ಪೊಲೀಸರು ದಾಳಿ ನಡೆಸಿ ಇವರಿಬ್ಬರನ್ನು ಬಂಧಿಸಿ ಮೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ. ಮಲೆಮಹದೇಶ್ವರ ವನ್ಯಜೀವಿ ವಿಭಾಗದಿಂದ ಈ ಪ್ರಾಣಿಗಳನ್ನು ಹನುರು ತಾಲೂಕಿನ ಆನೆಹೊಲ ನಿವಾಸಿ ಮಹದೇವ ಎಂಬಾತ ಸೆರೆಹಿಡಿದು ಇವರಿಗೆ ಕೊಟ್ಟಿದ್ದ ಎಂದು ತಿಳಿದುಬಂದಿದೆ.

ಮಹಾದೇವನ ಪತ್ತೆಗೆ ಬಲೆ ಬೀಸಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಒದಿ; ಕೊಳ್ಳೇಗಾಲದ ಎರಡು ಕಡೆ ಲೋಕಾಯುಕ್ತ ದಾಳಿ, ಕಡತ ಜಪ್ತಿ

ಚಾಮರಾಜನಗರ: ಕಾಡುಪಾಪಗಳನ್ನು ಸಾಗಿಸುತ್ತಿದ್ದಾಗ ಇಬ್ಬರು ಖದೀಮರು ಸಿಕ್ಕಿಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪ ನಡೆದಿದೆ. ಹನೂರು ತಾಲೂಕಿನ ವೀರಭದ್ರಪ್ಪ (58) ಹಾಗೂ ಮೈಸೂರಿನ ದೊಡ್ಡಕಾನ್ಯ ಗ್ರಾಮದ ಪಿ.ರಾಜು(45) ಬಂಧಿತ ಆರೋಪಿಗಳು.

ಕಾಡುಪಾಪಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳ ಪೊಲೀಸರು ದಾಳಿ ನಡೆಸಿ ಇವರಿಬ್ಬರನ್ನು ಬಂಧಿಸಿ ಮೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ. ಮಲೆಮಹದೇಶ್ವರ ವನ್ಯಜೀವಿ ವಿಭಾಗದಿಂದ ಈ ಪ್ರಾಣಿಗಳನ್ನು ಹನುರು ತಾಲೂಕಿನ ಆನೆಹೊಲ ನಿವಾಸಿ ಮಹದೇವ ಎಂಬಾತ ಸೆರೆಹಿಡಿದು ಇವರಿಗೆ ಕೊಟ್ಟಿದ್ದ ಎಂದು ತಿಳಿದುಬಂದಿದೆ.

ಮಹಾದೇವನ ಪತ್ತೆಗೆ ಬಲೆ ಬೀಸಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಒದಿ; ಕೊಳ್ಳೇಗಾಲದ ಎರಡು ಕಡೆ ಲೋಕಾಯುಕ್ತ ದಾಳಿ, ಕಡತ ಜಪ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.