ಪೂರ್ವ ಗೋದಾವರಿ: ಐದು ಮಂದಿ ಪ್ರಯಾಣಿಸುತ್ತಿದ್ದ ಕಾರು ಕಾಲುವೆಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಪೂರ್ವ ಗೋದಾವರಿ ಜಿಲ್ಲೆಯ ಆತ್ರೇಯಪುರಂ ಮಂಡಲ್ನ ಲೊಲ್ಲಕುಲ್ಲಾ ಎಂಬ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಭೀಮಾವರಂ ನಿವಾಸಿಗಳಾಗಿದ್ದಾರೆ.
ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ತೆಲುಗು ನಟ ತನೀಶ್ ಸೇರಿ ಐವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.