ನವದೆಹಲಿ: ದೆಹಲಿಯ ಪ್ರಗತಿ ಮೈದಾನ ಪ್ರದೇಶದ ಬಳಿ ದೆಹಲಿ ಪೊಲೀಸ್ ಅಪರಾಧ ಶಾಖೆ ನಡೆಸಿದ ಎನ್ಕೌಂಟರ್ನಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಗಾಯಗೊಂಡಿದ್ದಾರೆ.
ಇಂದು ನಸುಕಿನ ಜಾವ 4:50ರ ಸುಮಾರಿಗೆ ಬುಲೆಟ್ ಪ್ರೂಫ್ ಜಾಕೆಟ್ ಹಾಕಿದ್ದ ಎಸಿಪಿ ಪಂಕಜ್ ಹಾಗೂ ಎಸ್ಐ ಪ್ರಿಯಾಂಕಾರ ಮೇಲೆ ಇಬ್ಬರು ಕ್ರಿಮಿನಲ್ಗಳು ಗುಂಡು ಹಾರಿಸಿದ್ದಾರೆ. ಆತ್ಮರಕ್ಷಣೆಗಾಗಿ ಪೊಲೀಸರು ಅವರಿಗೆ ಶೂಟ್ ಮಾಡಿದ್ದು, ಗಾಯಗೊಂಡಿರುವ ಕ್ರಿಮಿನಲ್ಗಳನ್ನು ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಚೆನ್ನೈ ಏರ್ಪೋರ್ಟ್ನಲ್ಲಿ 18.25 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ.. ಮಹಿಳೆ ಬಂಧನ
ಈ ಕ್ರಿಮಿನಲ್ಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ ಮತ್ತು ದರೋಡೆ ಪ್ರಕರಣಗಳು ದಾಖಲಾಗಿದ್ದು, ಇವರನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿ ಕೂಡ ಪೊಲೀಸರು ಘೋಷಿಸಿದ್ದರು.