ETV Bharat / entertainment

ನಟ ವಿಶಾಲ್ ಮನೆ ಮೇಲೆ ಅಪರಿಚಿತರಿಂದ ಕಲ್ಲು ತೂರಾಟ.. ಕಿಟಕಿ ಗಾಜುಗಳು ಪುಡಿಪುಡಿ

author img

By

Published : Sep 28, 2022, 10:25 AM IST

ಚೆನ್ನೈನಲ್ಲಿರುವ ನಟ ವಿಶಾಲ್ ಮನೆ ಮೇಲೆ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ.

attacked actor Vishal house in Chennai  Vishal house in Chennai by pelting stones  Unidentified persons attacked actor Vishal house  stone pelt on actor Vishal house  ನಟ ವಿಶಾಲ್ ಮನೆ ಮೇಲೆ ಅಪರಿಚಿತರಿಂದ ಕಲ್ಲು ತೂರಾಟ  ಕಿಟಕಿ ಗಾಜುಗಳು ಪುಡಿಪುಡಿ  ನಟ ವಿಶಾಲ್ ಮನೆ ಮೇಲೆ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ  ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್  ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ  ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ
ನಟ ವಿಶಾಲ್ ಮನೆ ಮೇಲೆ ಅಪರಿಚಿತರಿಂದ ಕಲ್ಲು ತೂರಾಟ

ಚೆನ್ನೈ(ತಮಿಳುನಾಡು): ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೆ.26ರಂದು ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಚೆನ್ನೈನ ಅಣ್ಣಾನಗರ 12ನೇ ಬೀದಿಯಲ್ಲಿ ನಟ ವಿಶಾಲ್ ಕುಟುಂಬ ಸಮೇತ ವಾಸವಾಗಿದ್ದಾರೆ. ಆದ್ರೆ ಸೆಪ್ಟಂಬರ್​ 26 ರಾತ್ರಿ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ. ಪರಿಣಾಮ ಕಿಟಕಿ ಗಾಜುಗಳು ಒಡೆದಿವೆ.

ಘಟನೆಯ ಕುರಿತು ವಿಶಾಲ್ ಅವರ ಮ್ಯಾನೇಜರ್ ಹರಿಕೃಷ್ಣನ್ ಅವರು ಸಿಸಿಟಿವಿ ಸಾಕ್ಷ್ಯಗಳೊಂದಿಗೆ ಅಣ್ಣಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟ ವಿಶಾಲ್ ಶೂಟಿಂಗ್​ಗಾಗಿ ವಿದೇಶ ಪ್ರವಾಸದಲ್ಲಿದ್ದಾರೆ ಎನ್ನಲಾಗ್ತಿದೆ. ಪೊಲೀಸರ ತನಿಖೆ ಬಳಿಕ ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲಿದೆ.

ಓದಿ: ನಟ ಪುನೀತ್ ಓದಿಸುತ್ತಿದ್ದ 1800 ಮಕ್ಕಳ ಜವಾಬ್ದಾರಿ ಹೊರುವುದಾಗಿ ಘೋಷಿಸಿದ ತಮಿಳು ನಟ ವಿಶಾಲ್

ಚೆನ್ನೈ(ತಮಿಳುನಾಡು): ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೆ.26ರಂದು ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಚೆನ್ನೈನ ಅಣ್ಣಾನಗರ 12ನೇ ಬೀದಿಯಲ್ಲಿ ನಟ ವಿಶಾಲ್ ಕುಟುಂಬ ಸಮೇತ ವಾಸವಾಗಿದ್ದಾರೆ. ಆದ್ರೆ ಸೆಪ್ಟಂಬರ್​ 26 ರಾತ್ರಿ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ. ಪರಿಣಾಮ ಕಿಟಕಿ ಗಾಜುಗಳು ಒಡೆದಿವೆ.

ಘಟನೆಯ ಕುರಿತು ವಿಶಾಲ್ ಅವರ ಮ್ಯಾನೇಜರ್ ಹರಿಕೃಷ್ಣನ್ ಅವರು ಸಿಸಿಟಿವಿ ಸಾಕ್ಷ್ಯಗಳೊಂದಿಗೆ ಅಣ್ಣಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟ ವಿಶಾಲ್ ಶೂಟಿಂಗ್​ಗಾಗಿ ವಿದೇಶ ಪ್ರವಾಸದಲ್ಲಿದ್ದಾರೆ ಎನ್ನಲಾಗ್ತಿದೆ. ಪೊಲೀಸರ ತನಿಖೆ ಬಳಿಕ ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲಿದೆ.

ಓದಿ: ನಟ ಪುನೀತ್ ಓದಿಸುತ್ತಿದ್ದ 1800 ಮಕ್ಕಳ ಜವಾಬ್ದಾರಿ ಹೊರುವುದಾಗಿ ಘೋಷಿಸಿದ ತಮಿಳು ನಟ ವಿಶಾಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.