ಈ ವರ್ಷ ಭರ್ಜರಿ ಯಶಸ್ಸು ಕಂಡ ಕೆಜಿಎಫ್-2, ಆರ್ಆರ್ಆರ್ ಸಿನಿಮಾ ಸೇರಿದಂತೆ ಹಲವು ಸಿನಿಮಾ, ಚಿತ್ರರಂಗದವರನ್ನು ಟೀಕಿಸಿದ್ದ, ಹಳೇ ವಿವಾದಾತ್ಮಕ ಟ್ವೀಟ್ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಚಿತ್ರ ವಿಮರ್ಶಕ, ನಟ ಕಮಲ್ ಆರ್ ಖಾನ್ ಜಾಮೀನು ಮೂಲಕ ಜೈಲಿನಿಂದ ಹೊರಬಂದಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ಟ್ವೀಟ್ ಮಾಡಿರುವ ಅವರು, ಜೈಲಿನಲ್ಲಿ 10 ದಿನದಲ್ಲಿ 10 ಕೆ.ಜಿ ಕಳೆದುಕೊಂಡಿರುವುದಾಗಿ ತಿಳಿಸಿದ್ದಾರೆ.
-
I was surviving with only water for 10 days in lockup. So I have lost 10 kg weight.
— KRK (@kamaalrkhan) September 13, 2022 " class="align-text-top noRightClick twitterSection" data="
">I was surviving with only water for 10 days in lockup. So I have lost 10 kg weight.
— KRK (@kamaalrkhan) September 13, 2022
I was surviving with only water for 10 days in lockup. So I have lost 10 kg weight.
— KRK (@kamaalrkhan) September 13, 20222020ರಲ್ಲಿ ಕಮಲ್ ರಶೀದ್ ಖಾನ್ ಮಾಡಿದ್ದ ವಿವಾದಾತ್ಮಕ ಟ್ವೀಟ್ ಸಂಬಂಧ ಮಲಾಡ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಕೆಆರ್ಕೆ ಕಳೆದ ಎರಡು ವರ್ಷಗಳಿಂದ ವಿದೇಶದಲ್ಲಿದ್ದ ಕಾರಣ ಅವರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ. ಆಗಸ್ಟ್ 30ರಂದು ವಿದೇಶದಿಂದ ಮುಂಬೈ ತಲುಪಿದ ಕೂಡಲೇ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲೇ ಮಲಾಡ್ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಇದನ್ನೂ ಓದಿ: ಡಿಸೆಂಬರ್ 9 ರಂದು ಬಿಡುಗಡೆಗೆ ಸಿದ್ಧಗೊಂಡ ತುಷಾರ್ ಕಪೂರ್ ಅಭಿನಯದ ಮಾರಿಚ್
2020ರಲ್ಲಿ ನಟರಾದ ಇರ್ಫಾನ್ ಖಾನ್ ಮತ್ತು ರಿಷಿ ಕಪೂರ್ ಅವರ ಸಾವಿನ ಬಗ್ಗೆ ಅವಮಾನಕರವಾಗಿ ಟ್ವೀಟ್ ಮಾಡಿದ್ದರು. ಅಲ್ಲದೇ ಹಲವು ಸಿನಿಮಾಗಳ ಬಗ್ಗೆ, ಸಿನಿಮಾ ರಂಗದವರ ಬಗ್ಗೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪವಿದೆ.