ETV Bharat / entertainment

ಪೊಲೀಸ್​ ಪಾತ್ರದಲ್ಲಿ ನಟ ರಿಷಿ: ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ ನೀನಾಸಂ ಸತೀಶ್

ನಟ ರಿಷಿ ಅಭಿನಯದ ಮುಂದಿನ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ.

author img

By

Published : Jun 3, 2023, 1:05 PM IST

Actor Rishi starrer upcoming movie title unveiled
ರಿಷಿ ಅಭಿನಯದ ಮುಂದಿನ ಚಿತ್ರ

ಕಿರುತೆರೆ ಬಳಿಕ ಆಪರೇಶನ್ ಅಲಮೇಲ್ಲಮ್ಮ, ಕವಲುದಾರಿ ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ ಮುಂದಿನ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕೆ.ಎಸ್ ನಂದೀಶ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.

Actor Rishi starrer upcoming movie title unveiled
ಪ್ರಿಯಾಂಕ ಕುಮಾರ್ - ರಿಷಿ

ಶೀರ್ಷಿಕೆ ಅನಾವರಣ: ಇತ್ತೀಚೆಗೆ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ನೆರವೇರಿತು. ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲಾಪ್ ಮಾಡಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಿತ್ರಕ್ಕೆ 'ರುದ್ರ ಗರುಡ ಪುರಾಣ' ಎಂಬ ಟೈಟಲ್ ಇಡಲಾಗಿದೆ.

Actor Rishi starrer upcoming movie title unveiled
ರಿಷಿ ಅಭಿನಯದ ಮುಂದಿನ ಚಿತ್ರದ ಶೀರ್ಷಿಕೆ ಅನಾವರಣ

ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ ನಟ ರಿಷಿ, ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಕವಲುದಾರಿ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್​ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ, ನಂದೀಶ್ ಅವರು ಈ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ. ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದೇನೆ. ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ. ಈ ಚಿತ್ರಕ್ಕೆ "ಗರುಡ ಪುರಾಣ" ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ "ರುದ್ರ ಗರುಡ ಪುರಾಣ" ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದು ತಿಳಿಸಿದರು.

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರೊಂದಿಗೆ ಹಾಸ್ಯ ನಟ ಶಿವರಾಜ್ ಕೆ ಆರ್ ಪೇಟೆ, ಪವನ್ ಸೇರಿದಂತೆ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ. ಚಂಬಲ್, ಡಿಯರ್ ವಿಕ್ರಮ್​ ಚಿತ್ರಗಳು ಸೇರಿದಂತೆ ಕೆಲ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಸಂಭಾಷಣೆ ಜವಾಬ್ದಾರಿ ರಘು ನಿಡುವಳ್ಳಿ ಅವರದ್ದು. ಉದ್ಯಮಿ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ದೇಶವನ್ನೇ ಬೆಚ್ಚಿಬೀಳಿಸಿದ ಒಡಿಶಾ ರೈಲು ದುರಂತ: ಭೀಕರ ಸನ್ನಿವೇಶ ಫೋಟೋಗಳಲ್ಲಿ ಕಂಡಿದ್ದು ಹೀಗೆ!

ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ. 2022 UPSC ಪರೀಕ್ಷೆಯಲ್ಲಿ 265ನೇ ರ‍್ಯಾಂಕ್‌ ಪಡೆದಿರುವ ಮೈಸೂರು ಮೂಲದ ಕೆ‌.ಸೌರಭ್ ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ "ಪೃಥ್ವಿ" ಚಿತ್ರ ಪ್ರೇರಣೆ ಎಂದಿದ್ದಾರೆ. ಹಾಗಾಗಿ ಪ್ರೇಕ್ಷಕರ ಮೇಲೆ ಪ್ರಭಾವ ಬೀರುವ ಚಿತ್ರ ನಿರ್ಮಿಸಲೊರಟಿದ್ದೇನೆ ಎಂದು ಲೋಹಿತ್ ಹೇಳಿಕೊಂಡಿದ್ದಾರೆ. ರುದ್ರ ಗರುಡ ಪುರಾಣ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ: ಭೂಮಿ ಮೇಲಿನ ಸ್ವರ್ಗ 'ಮಾಲ್ಡೀವ್ಸ್​​' ಕಡಲ ತೀರದಲ್ಲಿ ರಾಕುಲ್ ಪ್ರೀತ್ ಸಿಂಗ್ : ಬಿಕಿನಿ ತೊಟ್ಟು ಬಿಸಿಯೇರಿಸಿದ ನಟಿ

ಕಿರುತೆರೆ ಬಳಿಕ ಆಪರೇಶನ್ ಅಲಮೇಲ್ಲಮ್ಮ, ಕವಲುದಾರಿ ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ ಮುಂದಿನ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕೆ.ಎಸ್ ನಂದೀಶ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.

Actor Rishi starrer upcoming movie title unveiled
ಪ್ರಿಯಾಂಕ ಕುಮಾರ್ - ರಿಷಿ

ಶೀರ್ಷಿಕೆ ಅನಾವರಣ: ಇತ್ತೀಚೆಗೆ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ನೆರವೇರಿತು. ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲಾಪ್ ಮಾಡಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಿತ್ರಕ್ಕೆ 'ರುದ್ರ ಗರುಡ ಪುರಾಣ' ಎಂಬ ಟೈಟಲ್ ಇಡಲಾಗಿದೆ.

Actor Rishi starrer upcoming movie title unveiled
ರಿಷಿ ಅಭಿನಯದ ಮುಂದಿನ ಚಿತ್ರದ ಶೀರ್ಷಿಕೆ ಅನಾವರಣ

ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ ನಟ ರಿಷಿ, ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಕವಲುದಾರಿ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್​ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ, ನಂದೀಶ್ ಅವರು ಈ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ. ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದೇನೆ. ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ. ಈ ಚಿತ್ರಕ್ಕೆ "ಗರುಡ ಪುರಾಣ" ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ "ರುದ್ರ ಗರುಡ ಪುರಾಣ" ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದು ತಿಳಿಸಿದರು.

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರೊಂದಿಗೆ ಹಾಸ್ಯ ನಟ ಶಿವರಾಜ್ ಕೆ ಆರ್ ಪೇಟೆ, ಪವನ್ ಸೇರಿದಂತೆ ಸಾಕಷ್ಟು ಕಲಾವಿದರು ಅಭಿನಯಿಸಿದ್ದಾರೆ. ಚಂಬಲ್, ಡಿಯರ್ ವಿಕ್ರಮ್​ ಚಿತ್ರಗಳು ಸೇರಿದಂತೆ ಕೆಲ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಸಂಭಾಷಣೆ ಜವಾಬ್ದಾರಿ ರಘು ನಿಡುವಳ್ಳಿ ಅವರದ್ದು. ಉದ್ಯಮಿ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ದೇಶವನ್ನೇ ಬೆಚ್ಚಿಬೀಳಿಸಿದ ಒಡಿಶಾ ರೈಲು ದುರಂತ: ಭೀಕರ ಸನ್ನಿವೇಶ ಫೋಟೋಗಳಲ್ಲಿ ಕಂಡಿದ್ದು ಹೀಗೆ!

ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ. 2022 UPSC ಪರೀಕ್ಷೆಯಲ್ಲಿ 265ನೇ ರ‍್ಯಾಂಕ್‌ ಪಡೆದಿರುವ ಮೈಸೂರು ಮೂಲದ ಕೆ‌.ಸೌರಭ್ ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ "ಪೃಥ್ವಿ" ಚಿತ್ರ ಪ್ರೇರಣೆ ಎಂದಿದ್ದಾರೆ. ಹಾಗಾಗಿ ಪ್ರೇಕ್ಷಕರ ಮೇಲೆ ಪ್ರಭಾವ ಬೀರುವ ಚಿತ್ರ ನಿರ್ಮಿಸಲೊರಟಿದ್ದೇನೆ ಎಂದು ಲೋಹಿತ್ ಹೇಳಿಕೊಂಡಿದ್ದಾರೆ. ರುದ್ರ ಗರುಡ ಪುರಾಣ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ: ಭೂಮಿ ಮೇಲಿನ ಸ್ವರ್ಗ 'ಮಾಲ್ಡೀವ್ಸ್​​' ಕಡಲ ತೀರದಲ್ಲಿ ರಾಕುಲ್ ಪ್ರೀತ್ ಸಿಂಗ್ : ಬಿಕಿನಿ ತೊಟ್ಟು ಬಿಸಿಯೇರಿಸಿದ ನಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.