ETV Bharat / entertainment

ನಟ ತಾರಕರತ್ನ ಆರೋಗ್ಯ ಸ್ಥಿತಿ ಸ್ಥಿರ.. ಹೆಚ್ಚುವರಿ ಪೊಲೀಸ್​ ಪಡೆ ನಿಯೋಜನೆಗೆ ಆದೇಶ!

author img

By

Published : Jan 30, 2023, 12:31 PM IST

ನಟ ತಾರಕರತ್ನ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಮಧ್ಯಾಹ್ನದ ನಂತರ ವೈದ್ಯರು ಹೆಲ್ತ್​ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

Actor Taraka Ratna health bulletin  health bulletin will be released by doctor  Actor Taraka Ratna health update  ನಟ ತಾರಕರತ್ನ ಆರೋಗ್ಯದಲ್ಲಿ ಸ್ಥಿರ  ಹೆಚ್ಚುವರಿ ಪೊಲೀಸ್​ ಪಡೆ ನಿಯೋಜನೆಗೆ ಆದೇಶ  ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆ  ವೈದ್ಯರು ಹೆಲ್ತ್​ ಬುಲೆಟಿನ್ ಬಿಡುಗಡೆ  ಹೆಚ್ಚುವರಿ ಪಡೆ ನಿಯೋಜನೆಗೆ ಆದೇಶ  ತಾರಕರತ್ನ ಆರೋಗ್ಯ ಮೇಲೆ ನಿಮ್ಹಾನ್ಸ್​ ವೈದ್ಯರ ನಿಗಾ  ಸಚಿವ ಸುಧಾಕರ್​ ಹೇಳಿದ್ದ ಹೀಗೆ  ಪಾದಯಾತ್ರೆಯಲ್ಲಿ ಕುಸಿದು ಬಿದ್ದ ತಾರಕರತ್ನ
ನಟ ತಾರಕರತ್ನ ಆರೋಗ್ಯದಲ್ಲಿ ಸ್ಥಿರ

ಬೆಂಗಳೂರು: ನಟ ತಾರಕರತ್ನ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಎಂಆರ್​ಐ ಮತ್ತು ಸಿಟಿ ಸ್ಕ್ಯಾನ್ ಬಳಿಕ ತಾರಕರತ್ನ ಅವರ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಸೋಮವಾರ ಮಧ್ಯಾಹ್ನದ ನಂತರ ತಾರಕರತ್ನ ಆರೋಗ್ಯ ಸ್ಥಿತಿ ಕುರಿತು ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

ಹೆಚ್ಚುವರಿ ಪಡೆ ನಿಯೋಜನೆಗೆ ಆದೇಶ: ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಅಭಿಮಾನಿಗಳು ಮತ್ತು ಸಂದರ್ಶಕರ ನಡುವೆ ಘರ್ಷಣೆ ಹೆಚ್ಚುತ್ತಿರುವ ಕಾರಣ ಹೆಚ್ಚುವರಿ ಪಡೆಗಳನ್ನು ನಿಯೋಜಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಸಚಿವ ಸುಧಾಕರ್​ ಹೇಳಿದ್ದ ಹೀಗೆ: ಕುಪ್ಪಂನಲ್ಲಿ ಆಂಜಿಯೋಪ್ಲಾಸ್ಟಿ ನಂತರ ನಾರಾಯಣ ಹೃದಯಾಲಯದ ವೈದ್ಯರ ತಂಡ ನಟ ತಾರಕರತ್ನ ಅವರಿಗೆ ಚಿಕಿತ್ಸೆ ಮುಂದುವರೆಸಿದೆ. ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಅವರು ಭಾನುವಾರ ತಾರಕರತ್ನ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಅವರ ಹೃದಯ ಬಡಿತ ಸಾಮಾನ್ಯವಾಗಿದೆ, ಆದರೆ, ಅವರ ಮೆದುಳಿನ ಕಾರ್ಯವು ಸರಿಯಾಗಿಲ್ಲ. ಹೃದಯಾಘಾತವಾದ ನಂತರ 30 ನಿಮಿಷಗಳ ಕಾಲ ರಕ್ತ ಸಂಚಾರ ಸ್ಥಗಿತಗೊಂಡಿದ್ದರಿಂದ ಮೆದುಳಿನ ಕಾರ್ಯಚಟುವಟಿಕೆಗೆ ತೊಂದರೆಯಾಗಿರುವುದು ಪರೀಕ್ಷೆಗಳ ಮೂಲಕ ಪತ್ತೆಯಾಗಿದೆ ಎಂದರು.

ತಾರಕರತ್ನ ಆರೋಗ್ಯ ಮೇಲೆ ನಿಮ್ಹಾನ್ಸ್​ ವೈದ್ಯರ ನಿಗಾ: ನಿಮ್ಹಾನ್ಸ್ ನರಶಸ್ತ್ರಚಿಕಿತ್ಸಕ ಪ್ರಾಧ್ಯಾಪಕ ಗಿರೀಶ್ ಕುಲಕರ್ಣಿ ನೇತೃತ್ವದಲ್ಲಿ ಇಬ್ಬರು ತಜ್ಞ ವೈದ್ಯರು ತಾರಕರತ್ನ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ. ಪ್ರಸ್ತುತ ನಾರಾಯಣ ಹೃದಯಾಲಯ ಮತ್ತು ನಿಮ್ಹಾನ್ಸ್‌ನ 10 ವೈದ್ಯರು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ನಟ ಬಾಲಕೃಷ್ಣ ಹೇಳಿದ್ದು ಹೀಗೆ: ತಾರಕರತ್ನ ಅವರ ಆರೋಗ್ಯದಲ್ಲಿ ಆಗಿರುವ ಬದಲಾವಣೆ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ತಾರಕರತ್ನ ಒಂದು ಬಾರಿ ಪ್ರತಿಕ್ರಿಯಿಸಿರುವುದನ್ನು ನಾವು ನೋಡಿದ್ದೇವೆ. ಆಂತರಿಕ ರಕ್ತಸ್ರಾವ, ರಕ್ತ ಹೆಪ್ಪುಗಟ್ಟುತ್ತಿದೆ ಎಂದು ವೈದ್ಯರು ಹೇಳಿದ್ದಾರೆ ಅಂತಾ ನಟ ಬಾಲಕೃಷ್ಣ ಬಹಿರಂಗಪಡಿಸಿದ್ದಾರೆ.

ಆಸ್ಪತ್ರೆಗೆ ಎನ್​ಟಿಆರ್​ ಕುಟುಂಬ ಭೇಟಿ: ನಟ ಜೂನಿಯರ್ ಎನ್ ಟಿಆರ್, ಅವರ ಪತ್ನಿ ಪ್ರಣತಿ, ಸಹೋದರ ಕಲ್ಯಾಣ್ ರಾಮ್, ನಾರಾ ಲೋಕೇಶ್ ಅವರ ಪತ್ನಿ ನಾರಾ ಬ್ರಾಹ್ಮಣಿ, ಕನ್ನಡ ಚಿತ್ರರಂಗದ ನಟ ಶಿವರಾಜ್ ಕುಮಾರ್ ಸೇರಿ ಇತರರು ಭಾನುವಾರ ನಾರಾಯಣ ಹೃದಯಕ್ಕೆ ಭೇಟಿ ನೀಡಿದ್ದರು. ಜನರು ಮತ್ತು ತಾತನ ಆಶೀರ್ವಾದದಿಂದ ತಾರಕರತ್ನ ಅವರ ಆರೋಗ್ಯ ಸುಧಾರಿಸಲಿ ಎಂದು ಎನ್​ಟಿಆರ್ ಹಾರೈಸಿದರು. ಆದರೆ, ಅವರು ಅಪಾಯದಿಂದ ಪಾರಾಗಿಲ್ಲ ಎಂದು ವೈದ್ಯರು ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪಾದಯಾತ್ರೆಯಲ್ಲಿ ಕುಸಿದು ಬಿದ್ದ ತಾರಕರತ್ನ: ಆಂಧ್ರ ಪ್ರದೇಶದ ತೆಲುಗು ದೇಶಂ ಪಾರ್ಟಿಯ ಯುವಘಳಂ ಪ್ರಚಾರ ಚಟುವಟಿಕೆಗಳಲ್ಲಿ ತಾರಕರತ್ನ ತೊಡಗಿಸಿಕೊಂಡಿದ್ದರು. ಜನವರಿ 27ರ ಮಧ್ಯಾಹ್ನ ಕುಪ್ಪಂನ ಪ್ರಮುಖ ಬೀದಿಗಳಲ್ಲಿ ಸಾಗಿದ ಯುವಘಳಂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾಗ ತಾರಕರತ್ನ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಟಿಡಿಪಿ ಕಾರ್ಯಕರ್ತರು ಕೂಡಲೇ ಅವರನ್ನು ಕುಪ್ಪಂ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಶನಿವಾರ ನಸುಕಿನ ಜಾವ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಗೆ ರವಾನಿಸಿದ್ದು, ಇದೀಗ ಚಿಕಿತ್ಸೆ ನಡೆಯುತ್ತಿದೆ.

ಓದಿ: ನಟ ತಾರಕರತ್ನಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಆಸ್ಪತ್ರೆಗೆ ಜ್ಯೂ.ಎನ್​ಟಿಆರ್, ಕುಟುಂಬಸ್ಥರ ಭೇಟಿ

ಬೆಂಗಳೂರು: ನಟ ತಾರಕರತ್ನ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಎಂಆರ್​ಐ ಮತ್ತು ಸಿಟಿ ಸ್ಕ್ಯಾನ್ ಬಳಿಕ ತಾರಕರತ್ನ ಅವರ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಸೋಮವಾರ ಮಧ್ಯಾಹ್ನದ ನಂತರ ತಾರಕರತ್ನ ಆರೋಗ್ಯ ಸ್ಥಿತಿ ಕುರಿತು ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.

ಹೆಚ್ಚುವರಿ ಪಡೆ ನಿಯೋಜನೆಗೆ ಆದೇಶ: ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಅಭಿಮಾನಿಗಳು ಮತ್ತು ಸಂದರ್ಶಕರ ನಡುವೆ ಘರ್ಷಣೆ ಹೆಚ್ಚುತ್ತಿರುವ ಕಾರಣ ಹೆಚ್ಚುವರಿ ಪಡೆಗಳನ್ನು ನಿಯೋಜಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಸಚಿವ ಸುಧಾಕರ್​ ಹೇಳಿದ್ದ ಹೀಗೆ: ಕುಪ್ಪಂನಲ್ಲಿ ಆಂಜಿಯೋಪ್ಲಾಸ್ಟಿ ನಂತರ ನಾರಾಯಣ ಹೃದಯಾಲಯದ ವೈದ್ಯರ ತಂಡ ನಟ ತಾರಕರತ್ನ ಅವರಿಗೆ ಚಿಕಿತ್ಸೆ ಮುಂದುವರೆಸಿದೆ. ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಅವರು ಭಾನುವಾರ ತಾರಕರತ್ನ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಅವರ ಹೃದಯ ಬಡಿತ ಸಾಮಾನ್ಯವಾಗಿದೆ, ಆದರೆ, ಅವರ ಮೆದುಳಿನ ಕಾರ್ಯವು ಸರಿಯಾಗಿಲ್ಲ. ಹೃದಯಾಘಾತವಾದ ನಂತರ 30 ನಿಮಿಷಗಳ ಕಾಲ ರಕ್ತ ಸಂಚಾರ ಸ್ಥಗಿತಗೊಂಡಿದ್ದರಿಂದ ಮೆದುಳಿನ ಕಾರ್ಯಚಟುವಟಿಕೆಗೆ ತೊಂದರೆಯಾಗಿರುವುದು ಪರೀಕ್ಷೆಗಳ ಮೂಲಕ ಪತ್ತೆಯಾಗಿದೆ ಎಂದರು.

ತಾರಕರತ್ನ ಆರೋಗ್ಯ ಮೇಲೆ ನಿಮ್ಹಾನ್ಸ್​ ವೈದ್ಯರ ನಿಗಾ: ನಿಮ್ಹಾನ್ಸ್ ನರಶಸ್ತ್ರಚಿಕಿತ್ಸಕ ಪ್ರಾಧ್ಯಾಪಕ ಗಿರೀಶ್ ಕುಲಕರ್ಣಿ ನೇತೃತ್ವದಲ್ಲಿ ಇಬ್ಬರು ತಜ್ಞ ವೈದ್ಯರು ತಾರಕರತ್ನ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ. ಪ್ರಸ್ತುತ ನಾರಾಯಣ ಹೃದಯಾಲಯ ಮತ್ತು ನಿಮ್ಹಾನ್ಸ್‌ನ 10 ವೈದ್ಯರು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ನಟ ಬಾಲಕೃಷ್ಣ ಹೇಳಿದ್ದು ಹೀಗೆ: ತಾರಕರತ್ನ ಅವರ ಆರೋಗ್ಯದಲ್ಲಿ ಆಗಿರುವ ಬದಲಾವಣೆ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ತಾರಕರತ್ನ ಒಂದು ಬಾರಿ ಪ್ರತಿಕ್ರಿಯಿಸಿರುವುದನ್ನು ನಾವು ನೋಡಿದ್ದೇವೆ. ಆಂತರಿಕ ರಕ್ತಸ್ರಾವ, ರಕ್ತ ಹೆಪ್ಪುಗಟ್ಟುತ್ತಿದೆ ಎಂದು ವೈದ್ಯರು ಹೇಳಿದ್ದಾರೆ ಅಂತಾ ನಟ ಬಾಲಕೃಷ್ಣ ಬಹಿರಂಗಪಡಿಸಿದ್ದಾರೆ.

ಆಸ್ಪತ್ರೆಗೆ ಎನ್​ಟಿಆರ್​ ಕುಟುಂಬ ಭೇಟಿ: ನಟ ಜೂನಿಯರ್ ಎನ್ ಟಿಆರ್, ಅವರ ಪತ್ನಿ ಪ್ರಣತಿ, ಸಹೋದರ ಕಲ್ಯಾಣ್ ರಾಮ್, ನಾರಾ ಲೋಕೇಶ್ ಅವರ ಪತ್ನಿ ನಾರಾ ಬ್ರಾಹ್ಮಣಿ, ಕನ್ನಡ ಚಿತ್ರರಂಗದ ನಟ ಶಿವರಾಜ್ ಕುಮಾರ್ ಸೇರಿ ಇತರರು ಭಾನುವಾರ ನಾರಾಯಣ ಹೃದಯಕ್ಕೆ ಭೇಟಿ ನೀಡಿದ್ದರು. ಜನರು ಮತ್ತು ತಾತನ ಆಶೀರ್ವಾದದಿಂದ ತಾರಕರತ್ನ ಅವರ ಆರೋಗ್ಯ ಸುಧಾರಿಸಲಿ ಎಂದು ಎನ್​ಟಿಆರ್ ಹಾರೈಸಿದರು. ಆದರೆ, ಅವರು ಅಪಾಯದಿಂದ ಪಾರಾಗಿಲ್ಲ ಎಂದು ವೈದ್ಯರು ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪಾದಯಾತ್ರೆಯಲ್ಲಿ ಕುಸಿದು ಬಿದ್ದ ತಾರಕರತ್ನ: ಆಂಧ್ರ ಪ್ರದೇಶದ ತೆಲುಗು ದೇಶಂ ಪಾರ್ಟಿಯ ಯುವಘಳಂ ಪ್ರಚಾರ ಚಟುವಟಿಕೆಗಳಲ್ಲಿ ತಾರಕರತ್ನ ತೊಡಗಿಸಿಕೊಂಡಿದ್ದರು. ಜನವರಿ 27ರ ಮಧ್ಯಾಹ್ನ ಕುಪ್ಪಂನ ಪ್ರಮುಖ ಬೀದಿಗಳಲ್ಲಿ ಸಾಗಿದ ಯುವಘಳಂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾಗ ತಾರಕರತ್ನ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಟಿಡಿಪಿ ಕಾರ್ಯಕರ್ತರು ಕೂಡಲೇ ಅವರನ್ನು ಕುಪ್ಪಂ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಶನಿವಾರ ನಸುಕಿನ ಜಾವ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಗೆ ರವಾನಿಸಿದ್ದು, ಇದೀಗ ಚಿಕಿತ್ಸೆ ನಡೆಯುತ್ತಿದೆ.

ಓದಿ: ನಟ ತಾರಕರತ್ನಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಆಸ್ಪತ್ರೆಗೆ ಜ್ಯೂ.ಎನ್​ಟಿಆರ್, ಕುಟುಂಬಸ್ಥರ ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.