ETV Bharat / entertainment

ಕಾಂಗರೂ ಸಿನಿಮಾ ಮೂಲಕ ಮತ್ತೆ ಖಾಕಿ ಖದರ್​ನಲ್ಲಿ ಅಬ್ಬರಿಸಲು ರೆಡಿಯಾದ ಆದಿತ್ಯ

ನಿರ್ದೇಶಕ ಕಿಶೋರ್ ಮೇಗಳಮನೆ ಅವರು ಕಾಂಗೂರು ಚಿತ್ರಕ್ಕೆ ಆಕ್ಷನ್​ ಕಟ್​ ಹೇಳಿದ್ದಾರೆ.

author img

By ETV Bharat Karnataka Team

Published : Dec 4, 2023, 3:56 PM IST

ಕನ್ನಡದ ನಟ ಆದಿತ್ಯ
ಕನ್ನಡದ ನಟ ಆದಿತ್ಯ

ಕನ್ನಡ ಚಿತ್ರರಂಗದಲ್ಲಿ ಡೆಡ್ಲಿ ಸೋಮ ಅಂತಾ ಕರೆಯಿಸಿಕೊಂಡಿರುವ ನಟ ಆದಿತ್ಯ ತನ್ನ ನಟನೆ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಸದ್ಯ ಟೆರರ್ ಚಿತ್ರದ ಶೂಟಿಂಗ್​ನಲ್ಲಿರೋ ಅದಿತ್ಯ ಈಗ ಸೈಲೆಂಟ್ ಆಗಿ ಕಾಂಗರೂ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ರೌಡಿಸಂ ಪಾತ್ರಗಳಿ‌ಂದ ಗಮನ ಸೆಳೆಯುತ್ತಿದ್ದ ಅದಿತ್ಯ ಮತ್ತೆ ಖಾಕಿ ಖದರ್​ನಲ್ಲಿ ಕಾಂಗರೂ ಚಿತ್ರದ ಮೂಲಕ ಅಬ್ಬರಿಸಲಿದ್ದಾರೆ.

ಕಿಶೋರ್ ಮೇಗಳಮನೆ ನಿರ್ದೇಶನದ ಕಾಂಗರೂ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಈ ಬಗ್ಗೆ ಮಾತನಾಡಿರೋ ನಿರ್ದೇಶಕ ಕಿಶೋರ್ ಮೇಗಳಮನೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ ಮತ್ತು ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್​ಗಾಗಿ ಮಾಡಿರುವ ಕಥೆವಿದು. ಇನ್ನು "ಕಾಂಗರೂ" ಶೀರ್ಷಿಕೆ ಕುರಿತು ಹೇಳುವುದಾದರೆ, "ಕಾಂಗರೂ" ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಭಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟುಕೊಂಡು ಕಾಪಾಡುತ್ತದೆ. ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ ಯಾರಾದರೂ ಹೋದರೆ ಅದು ಯಾರನ್ನು ಬಿಡುವುದಿಲ್ಲ. ಈ ಪ್ರಾಣಿಯ ನಡವಳಿಕೆಯನ್ನು ಹೋಲುವ ಸಿನಿಮಾ ಕಥೆಯಾಗಿರುತ್ತದೆ ಎಂದರು‌.

ಕಾಂಗರೂ ಸಿನಿಮಾ
ಕಾಂಗರೂ ಸಿನಿಮಾ

ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಕಿಶೋರ್ ಮೇಗಳಮನೆ ಅವರೇ ಬರೆದಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಸದ್ಯ ಕಾಂಗರೂ ಚಿತ್ರತಂಡ ಡಬ್ಬಿಂಗ್ ಮಾಡೋದರಲ್ಲಿ ನಿರತವಾಗಿದೆ. ಅದಷ್ಟು ಬೇಗ ಬೆಳ್ಳಿ ತೆರೆಗೆ ಬರುವುದಕ್ಕೆ ಚಿತ್ರ ತಂಡ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದೆ.

ಇದನ್ನೂ ಓದಿ : 'ರೋಜಿ'ಗಾಗಿ ಒಂದಾದ ಲೂಸ್​ ಮಾದ ಯೋಗಿ-ಶ್ರೀನಗರ ಕಿಟ್ಟಿ

ಕನ್ನಡ ಚಿತ್ರರಂಗದಲ್ಲಿ ಡೆಡ್ಲಿ ಸೋಮ ಅಂತಾ ಕರೆಯಿಸಿಕೊಂಡಿರುವ ನಟ ಆದಿತ್ಯ ತನ್ನ ನಟನೆ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಸದ್ಯ ಟೆರರ್ ಚಿತ್ರದ ಶೂಟಿಂಗ್​ನಲ್ಲಿರೋ ಅದಿತ್ಯ ಈಗ ಸೈಲೆಂಟ್ ಆಗಿ ಕಾಂಗರೂ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ರೌಡಿಸಂ ಪಾತ್ರಗಳಿ‌ಂದ ಗಮನ ಸೆಳೆಯುತ್ತಿದ್ದ ಅದಿತ್ಯ ಮತ್ತೆ ಖಾಕಿ ಖದರ್​ನಲ್ಲಿ ಕಾಂಗರೂ ಚಿತ್ರದ ಮೂಲಕ ಅಬ್ಬರಿಸಲಿದ್ದಾರೆ.

ಕಿಶೋರ್ ಮೇಗಳಮನೆ ನಿರ್ದೇಶನದ ಕಾಂಗರೂ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಈ ಬಗ್ಗೆ ಮಾತನಾಡಿರೋ ನಿರ್ದೇಶಕ ಕಿಶೋರ್ ಮೇಗಳಮನೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ ಮತ್ತು ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್​ಗಾಗಿ ಮಾಡಿರುವ ಕಥೆವಿದು. ಇನ್ನು "ಕಾಂಗರೂ" ಶೀರ್ಷಿಕೆ ಕುರಿತು ಹೇಳುವುದಾದರೆ, "ಕಾಂಗರೂ" ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಭಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟುಕೊಂಡು ಕಾಪಾಡುತ್ತದೆ. ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ ಯಾರಾದರೂ ಹೋದರೆ ಅದು ಯಾರನ್ನು ಬಿಡುವುದಿಲ್ಲ. ಈ ಪ್ರಾಣಿಯ ನಡವಳಿಕೆಯನ್ನು ಹೋಲುವ ಸಿನಿಮಾ ಕಥೆಯಾಗಿರುತ್ತದೆ ಎಂದರು‌.

ಕಾಂಗರೂ ಸಿನಿಮಾ
ಕಾಂಗರೂ ಸಿನಿಮಾ

ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಕಿಶೋರ್ ಮೇಗಳಮನೆ ಅವರೇ ಬರೆದಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಸದ್ಯ ಕಾಂಗರೂ ಚಿತ್ರತಂಡ ಡಬ್ಬಿಂಗ್ ಮಾಡೋದರಲ್ಲಿ ನಿರತವಾಗಿದೆ. ಅದಷ್ಟು ಬೇಗ ಬೆಳ್ಳಿ ತೆರೆಗೆ ಬರುವುದಕ್ಕೆ ಚಿತ್ರ ತಂಡ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದೆ.

ಇದನ್ನೂ ಓದಿ : 'ರೋಜಿ'ಗಾಗಿ ಒಂದಾದ ಲೂಸ್​ ಮಾದ ಯೋಗಿ-ಶ್ರೀನಗರ ಕಿಟ್ಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.