ETV Bharat / entertainment

ಟಾಲಿವುಡ್​ ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್ ರಾಷ್ಟ್ರ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ.. ಯಾವ ಚಿತ್ರಕ್ಕೆ ಗೊತ್ತಾ!?

author img

By ETV Bharat Karnataka Team

Published : Aug 25, 2023, 8:20 AM IST

ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್​ ರಾಷ್ಟ್ರೀಯ ಪ್ರಶಸ್ತಿ ಪಡೆದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Allu Arjun becomes first Telugu actor  first Telugu actor to win National Award  Allu Arjun win National Award  ಟಾಲಿವುಡ್​ ಸ್ಟೈಲೀಶ್​ ಸ್ಟಾರ್​ ಅಲ್ಲು ಅರ್ಜುನ್  ಅರ್ಜುನ್ ರಾಷ್ಟ್ರ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ  ​ ಸ್ಟಾರ್​ ಅಲ್ಲು ಅರ್ಜುನ್​ ರಾಷ್ಟ್ರೀಯ ಪ್ರಶಸ್ತಿ  ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರ  ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್  ಪುಷ್ಪ ದಿ ರೈಸ್ ಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ  69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ  ಎಸ್​ಎಸ್​ ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರ
ಟಾಲಿವುಡ್​ ಸ್ಟೈಲೀಶ್​ ಸ್ಟಾರ್​ ಅಲ್ಲು ಅರ್ಜುನ್ ರಾಷ್ಟ್ರ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ

ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರು ಪುಷ್ಪ ದಿ ರೈಸ್ ಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ನಟ ಅಲ್ಲು ಅರ್ಜುನ್​ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಿತ್ರದ ಮುಂದುವರಿದ ಭಾಗವಾದ 'ಪುಷ್ಪ: ದಿ ರೂಲ್' ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

ಇನ್ನು ಎಸ್​ಎಸ್​ ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರಕ್ಕೆ ಆರು ಪ್ರಶಸ್ತಿಗಳು ಲಭಿಸಿವೆ. ಈ ಚಿತ್ರದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಪುಷ್ಪ ಚಿತ್ರದ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರೊಂದಿಗೆ ಹಂಚಿಕೊಂಡರು. ಎಸ್‌ಎಸ್ ರಾಜಮೌಳಿ ನಿರ್ದೇಶನದ ಚಲನಚಿತ್ರವು ಆರೋಗ್ಯಕರ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ, ಕಾಲಭೈರವ ಅವರಿಗೆ ಅತ್ಯುತ್ತಮ ಪುರುಷ ಹಿನ್ನೆಲೆ ಗಾಯಕ, ಅತ್ಯುತ್ತಮ ಸ್ಪೆಷಲ್ ಎಫೆಕ್ಟ್‌ಗಳು, ಅತ್ಯುತ್ತಮ ಸಾಹಸ ನಿರ್ದೇಶಕ ಮತ್ತು ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಪ್ರಶಸ್ತಿಗಳು ತಮ್ಮದಾಗಿಸಿಕೊಂಡವು.

ಗುರುವಾರ ಪ್ರಕಟವಾದ 2021 ರ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ ಹಿಂದಿ ಚಲನಚಿತ್ರ 'ರಾಕೆಟ್ರಿ: ದಿ ನಂಬಿ ಎಫೆಕ್ಟ್' ಅತ್ಯುತ್ತಮ ಚಲನಚಿತ್ರ ಎಂದು ಹೆಸರಿಸಲ್ಪಟ್ಟಿದೆ ಮತ್ತು ಅಲ್ಲು ಅರ್ಜುನ್, ಆಲಿಯಾ ಭಟ್ ಮತ್ತು ಕೃತಿ ಸನೋನ್ ಅವರು ಅತ್ಯುತ್ತಮ ಅಭಿನಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಿವುಡ್ ತಾರೆಯರಾದ ಭಟ್ ಮತ್ತು ಸನೋನ್ ಅವರು ಕ್ರಮವಾಗಿ 'ಗಂಗೂಬಾಯಿ ಕಥಿಯಾವಾಡಿ' ಮತ್ತು 'ಮಿಮಿ' ಚಿತ್ರದಲ್ಲಿನ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು.

ಮರಾಠಿ ಚಿತ್ರ 'ಗೋದಾವರಿ'ಗಾಗಿ ನಿಖಿಲ್ ಮಹಾಜನ್ ಅವರಿಗೆ ಅತ್ಯುತ್ತಮ ನಿರ್ದೇಶಕ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಂದಿದೆ. 11 ಸದಸ್ಯರ ತೀರ್ಪುಗಾರರ ಮುಖ್ಯಸ್ಥರಾಗಿರುವ ಚಲನಚಿತ್ರ ನಿರ್ಮಾಪಕ ಕೇತನ್ ಮೆಹ್ತಾ ಅವರು 2021 ರ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿದರು. 'ಮಿಮಿ' ಚಿತ್ರಕ್ಕಾಗಿ ಪಂಕಜ್ ತ್ರಿಪಾಠಿ ಅತ್ಯುತ್ತಮ ಪೋಷಕ ನಟ ಮತ್ತು 'ದಿ ಕಾಶ್ಮೀರ್ ಫೈಲ್ಸ್'ಗಾಗಿ ಪಲ್ಲವಿ ಜೋಶಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದರು. ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ರಾಷ್ಟ್ರೀಯ ಏಕೀಕರಣದ ಅತ್ಯುತ್ತಮ ಚಿತ್ರಕ್ಕಾಗಿ ನರ್ಗೀಸ್ ದತ್ ಪ್ರಶಸ್ತಿಯನ್ನು ಸಹ ಗೆದ್ದಿದೆ.

ಶ್ರೇಯಾ ಘೋಷಾಲ್ ಅವರು 'ಇರವಿನ್ ನಿಂಜಾಲ್' ಚಿತ್ರದ ‘ಮಾಯವ ಚಾಯಾವಾ’ ಹಾಡಿಗೆ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ಪ್ರಶಸ್ತಿಯನ್ನು ಪಡೆದರು. ಮೂಲ ಚಿತ್ರಕಥೆಯ ಗೌರವವು ಮಲಯಾಳಂ ಚಿತ್ರ 'ನಯಟ್ಟು' ಮತ್ತು ಅದರ ಬರಹಗಾರ ಶಾಹಿ ಕಬೀರ್‌ಗೆ ಸಂದಿದೆ. ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರ ಮಲಯಾಳಂ ಚಿತ್ರ 'ಮೆಪ್ಪಾಡಿಯನ್'ಗೆ ಇಂದಿರಾಗಾಂಧಿ ಪ್ರಶಸ್ತಿ ಲಭಿಸಿದ್ರೆ, ಸಾಮಾಜಿಕ ಸಮಸ್ಯೆಗಳ ಮೇಲಿನ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಅಸ್ಸಾಮಿ ಚಿತ್ರ 'ಅನುನಾದ್-ದಿ ರೆಸೋನೆನ್ಸ್'ಗೆ ನೀಡಲಾಗಿದೆ.

ಶೂಜಿತ್ ಸಿರ್ಕಾರ್ ಅವರ ಜೀವನಚರಿತ್ರೆ 'ಸರ್ದಾರ್ ಉದಾಮ್' ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಮತ್ತು ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ನಿರ್ಮಾಣ ವಿನ್ಯಾಸ ಮತ್ತು ವಸ್ತ್ರ ವಿನ್ಯಾಸಕ್ಕಾಗಿ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತು. (ಕೃಪೆ: ಪಿಟಿಐ)

ಓದಿ: ರಕ್ಷಿತ್‌ ಶೆಟ್ಟಿ ಅಭಿನಯದ 'ಚಾರ್ಲಿ 777'ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರು ಪುಷ್ಪ ದಿ ರೈಸ್ ಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ನಟ ಅಲ್ಲು ಅರ್ಜುನ್​ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಚಿತ್ರದ ಮುಂದುವರಿದ ಭಾಗವಾದ 'ಪುಷ್ಪ: ದಿ ರೂಲ್' ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

ಇನ್ನು ಎಸ್​ಎಸ್​ ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರಕ್ಕೆ ಆರು ಪ್ರಶಸ್ತಿಗಳು ಲಭಿಸಿವೆ. ಈ ಚಿತ್ರದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು ಪುಷ್ಪ ಚಿತ್ರದ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಅವರೊಂದಿಗೆ ಹಂಚಿಕೊಂಡರು. ಎಸ್‌ಎಸ್ ರಾಜಮೌಳಿ ನಿರ್ದೇಶನದ ಚಲನಚಿತ್ರವು ಆರೋಗ್ಯಕರ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ಜನಪ್ರಿಯ ಚಲನಚಿತ್ರ, ಕಾಲಭೈರವ ಅವರಿಗೆ ಅತ್ಯುತ್ತಮ ಪುರುಷ ಹಿನ್ನೆಲೆ ಗಾಯಕ, ಅತ್ಯುತ್ತಮ ಸ್ಪೆಷಲ್ ಎಫೆಕ್ಟ್‌ಗಳು, ಅತ್ಯುತ್ತಮ ಸಾಹಸ ನಿರ್ದೇಶಕ ಮತ್ತು ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಪ್ರಶಸ್ತಿಗಳು ತಮ್ಮದಾಗಿಸಿಕೊಂಡವು.

ಗುರುವಾರ ಪ್ರಕಟವಾದ 2021 ರ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ ಹಿಂದಿ ಚಲನಚಿತ್ರ 'ರಾಕೆಟ್ರಿ: ದಿ ನಂಬಿ ಎಫೆಕ್ಟ್' ಅತ್ಯುತ್ತಮ ಚಲನಚಿತ್ರ ಎಂದು ಹೆಸರಿಸಲ್ಪಟ್ಟಿದೆ ಮತ್ತು ಅಲ್ಲು ಅರ್ಜುನ್, ಆಲಿಯಾ ಭಟ್ ಮತ್ತು ಕೃತಿ ಸನೋನ್ ಅವರು ಅತ್ಯುತ್ತಮ ಅಭಿನಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಿವುಡ್ ತಾರೆಯರಾದ ಭಟ್ ಮತ್ತು ಸನೋನ್ ಅವರು ಕ್ರಮವಾಗಿ 'ಗಂಗೂಬಾಯಿ ಕಥಿಯಾವಾಡಿ' ಮತ್ತು 'ಮಿಮಿ' ಚಿತ್ರದಲ್ಲಿನ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು.

ಮರಾಠಿ ಚಿತ್ರ 'ಗೋದಾವರಿ'ಗಾಗಿ ನಿಖಿಲ್ ಮಹಾಜನ್ ಅವರಿಗೆ ಅತ್ಯುತ್ತಮ ನಿರ್ದೇಶಕ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಂದಿದೆ. 11 ಸದಸ್ಯರ ತೀರ್ಪುಗಾರರ ಮುಖ್ಯಸ್ಥರಾಗಿರುವ ಚಲನಚಿತ್ರ ನಿರ್ಮಾಪಕ ಕೇತನ್ ಮೆಹ್ತಾ ಅವರು 2021 ರ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿದರು. 'ಮಿಮಿ' ಚಿತ್ರಕ್ಕಾಗಿ ಪಂಕಜ್ ತ್ರಿಪಾಠಿ ಅತ್ಯುತ್ತಮ ಪೋಷಕ ನಟ ಮತ್ತು 'ದಿ ಕಾಶ್ಮೀರ್ ಫೈಲ್ಸ್'ಗಾಗಿ ಪಲ್ಲವಿ ಜೋಶಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದರು. ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ರಾಷ್ಟ್ರೀಯ ಏಕೀಕರಣದ ಅತ್ಯುತ್ತಮ ಚಿತ್ರಕ್ಕಾಗಿ ನರ್ಗೀಸ್ ದತ್ ಪ್ರಶಸ್ತಿಯನ್ನು ಸಹ ಗೆದ್ದಿದೆ.

ಶ್ರೇಯಾ ಘೋಷಾಲ್ ಅವರು 'ಇರವಿನ್ ನಿಂಜಾಲ್' ಚಿತ್ರದ ‘ಮಾಯವ ಚಾಯಾವಾ’ ಹಾಡಿಗೆ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ಪ್ರಶಸ್ತಿಯನ್ನು ಪಡೆದರು. ಮೂಲ ಚಿತ್ರಕಥೆಯ ಗೌರವವು ಮಲಯಾಳಂ ಚಿತ್ರ 'ನಯಟ್ಟು' ಮತ್ತು ಅದರ ಬರಹಗಾರ ಶಾಹಿ ಕಬೀರ್‌ಗೆ ಸಂದಿದೆ. ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರ ಮಲಯಾಳಂ ಚಿತ್ರ 'ಮೆಪ್ಪಾಡಿಯನ್'ಗೆ ಇಂದಿರಾಗಾಂಧಿ ಪ್ರಶಸ್ತಿ ಲಭಿಸಿದ್ರೆ, ಸಾಮಾಜಿಕ ಸಮಸ್ಯೆಗಳ ಮೇಲಿನ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಅಸ್ಸಾಮಿ ಚಿತ್ರ 'ಅನುನಾದ್-ದಿ ರೆಸೋನೆನ್ಸ್'ಗೆ ನೀಡಲಾಗಿದೆ.

ಶೂಜಿತ್ ಸಿರ್ಕಾರ್ ಅವರ ಜೀವನಚರಿತ್ರೆ 'ಸರ್ದಾರ್ ಉದಾಮ್' ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಮತ್ತು ಅತ್ಯುತ್ತಮ ಛಾಯಾಗ್ರಹಣ, ಅತ್ಯುತ್ತಮ ನಿರ್ಮಾಣ ವಿನ್ಯಾಸ ಮತ್ತು ವಸ್ತ್ರ ವಿನ್ಯಾಸಕ್ಕಾಗಿ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತು. (ಕೃಪೆ: ಪಿಟಿಐ)

ಓದಿ: ರಕ್ಷಿತ್‌ ಶೆಟ್ಟಿ ಅಭಿನಯದ 'ಚಾರ್ಲಿ 777'ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.