ETV Bharat / entertainment

ಸಂದೀಪ್​ ರೆಡ್ಡಿ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್​

ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ ಮುಂದಿನ ಸಿನಿಮಾವನ್ನು ಖ್ಯಾತ ನಿರ್ದೇಶಕ ಸಂದೀಪ್​ ರೆಡ್ಡಿ ವಾಂಗ ಜೊತೆ ಮಾಡಲಿದ್ದಾರೆ.

author img

By

Published : Mar 3, 2023, 2:18 PM IST

film
ಅಲ್ಲು ಅರ್ಜುನ್​

ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್​ ಪುಷ್ಪ-1 ಸಿನಿಮಾ ಮೂಲಕ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಇದೀಗ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅರ್ಜುನ್​ ರೆಡ್ಡಿ ಖ್ಯಾತಿಯ ಸಂದೀಪ್​ ರೆಡ್ಡಿ ವಾಂಗ ಜೊತೆ ಅಲ್ಲು ಅರ್ಜುನ್ ಮುಂದಿನ​ ಸಿನಿಮಾ ಮಾಡಲಿದ್ದಾರೆ.

ಹೌದು. ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ ಪುಷ್ಪ ಮೊದಲ ಭಾಗದ ಯಶಸ್ಸಿನ ಬಳಿಕ ಪಾರ್ಟ್​ 2 ತಯಾರಿಯಲ್ಲಿದ್ದಾರೆ. ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಈ ಸಿನಿಮಾದ ಚಿತ್ರೀಕರಣ ಭರ್ಜರಿಯಲ್ಲಿ ಸಾಗುತ್ತಿದೆ. ಜೊತೆಗೆ ಅಲ್ಲು ಈ ಸಿನಿಮಾ ಬಳಿಕ ಯಾವ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ? ಎಂಬ ಕುತೂಹಲ ಜನರಲ್ಲಿತ್ತು. ಆದರೀಗ ಕುತೂಹಲಕ್ಕೆ ತೆರೆ ಬಿದ್ದಿದೆ.

ಮೊದಲ ಸಿನಿಮಾದಲ್ಲೇ ಸೂಪರ್​ ಸಕ್ಸಸ್​ ಕಂಡ ನಿರ್ದೇಶಕ ಸಂದೀಪ್​ ರೆಡ್ಡಿ ವಾಂಗ ಬಾಲಿವುಡ್​ ಅಂಗಳಕ್ಕೆ ಹಾರಿದರು. ಬಳಿಕ ಕಬೀರ್​ ಸಿಂಗ್​ ಎಂಬ ಹಿಟ್​ ಸಿನಿಮಾ ಮಾಡಿದ್ದು, ದೊಡ್ಡ ಮಟ್ಟದಲ್ಲಿಯೇ ಯಶಸ್ವಿ ಕಂಡಿತು. ಅದಾದ ನಂತರ ಮತ್ತೆ ಹಿಂದಿ ಸಿನಿಮಾ ಒಪ್ಪಿಕೊಂಡಿರುವ ನಿರ್ದೇಶಕ, ರಣಬೀರ್​ ಕಪೂರ್​ ಜೊತೆ ಅನಿಮಲ್​ ಸಿನಿಮಾ ಮಾಡುತ್ತಿದ್ದಾರೆ. ಅನಿಮಲ್​ನಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ರಣಬೀರ್​ ಕಪೂರ್​ ಜೊತೆ ಬಹುಭಾಷಾ ತಾರೆ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ಆದರೆ ಇದೀಗ ಅನಿಮಲ್​ ಚಿತ್ರೀಕರಣ ಮುಗಿಯುವ ಮುನ್ನವೇ ನಿರ್ದೇಶಕ ಸಂದೀಪ್​ ರೆಡ್ಡಿ, ಅಲ್ಲು ಅರ್ಜುನ್​ ಜೊತೆ ಮುಂದಿನ ಸಿನಿಮಾ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ವಿಠಲ್ ಮಲೆಕುಡಿಯ ನಕ್ಸಲ್​​ ನಂಟು ಆರೋಪ ಪ್ರಕರಣ ಆಧಾರಿತ 19.20.21 ಸಿನಿಮಾ ನಾಳೆ ತೆರೆಗೆ

ಇನ್ನು ಹೆಸರಿಡದ ಈ ಸಿನಿಮಾವನ್ನು ಭೂಷಣ್​ ಕುಮಾರ್​ ಅವರ ಫಿಲ್ಮ್​ ಸ್ಟುಡಿಯೋ ಮತ್ತು ಟೀ ಸೀರಿಸ್​ ಹಾಗೂ ಸಂದೀಪ್​ ರೆಡ್ಡಿ ಅವರ ಭದ್ರಕಾಳಿ ಪಿಕ್ಚರ್ಸ್​ ನಿರ್ಮಾಣ ಮಾಡುತ್ತಿದೆ. ಅಲ್ಲು ಅರ್ಜುನ್​ ಹೊಸ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗಲಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಪ್ಲ್ಯಾನ್​ ಮಾಡಿರುವ ಚಿತ್ರತಂಡ ಸದ್ಯ ಪ್ರಿ ಪ್ರೊಡಕ್ಷನ್​ ಕೆಲಸದಲ್ಲಿ ತೊಡಗಿದ್ದಾರೆ. ಇನ್ನೂ ಈ ಸಿನಿಮಾದಲ್ಲಿ ಯಾರೆಲ್ಲಾ ನಟಿಸಲಿದ್ದಾರೆ, ನಾಯಕಿ ಯಾರು? ಎಂಬೆಲ್ಲಾ ಪ್ರಶ್ನೆಗಳಿಗೆ ಸದ್ಯದಲ್ಲೇ ಉತ್ತರ ಸಿಗಲಿದೆ. ನಿರ್ದೇಶಕ ಸಂದೀಪ್​ ರೆಡ್ಡಿ ಪ್ರಭಾಸ್​ ಜೊತೆ ಸ್ಪಿರಿಟ್​ ಸಿನಿಮಾ ಮಾಡುತ್ತಿದ್ದಾರೆ. ಹಾಗಾಗಿ ಈ ಸಿನಿಮಾ ಚಿತ್ರೀಕರಣ ಮುಗಿದ ಬಳಿಕವಷ್ಟೇ ಅಲ್ಲು ಅರ್ಜುನ್​ ಜೊತೆ ಶೂಟಿಂಗ್​ ಪ್ರಾರಂಭಿಸಲಿದ್ದಾರೆ.

'ಪ್ಯಾನ್​ ಇಂಡಿಯಾ ಸ್ಟಾರ್'​: ಪುಷ್ಪ-1 ಸಿನಿಮಾವು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತು. ಈ ಚಿತ್ರದ ಯಶಸ್ಸಿನಿಂದಲೇ ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೊರಹೊಮ್ಮಿದರು. ಇದೀಗ ಪುಷ್ಪ-2 ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಅಮೆರಿಕದಾದ್ಯಂತ ಆರ್​ಆರ್​ಆರ್ ಸದ್ದು: ಪ್ರೇಕ್ಷಕರ ಚಪ್ಪಾಳೆಗೆ ಸಾಕ್ಷಿಯಾದ ಯುಎಸ್​ ಚಿತ್ರಮಂದಿರಗಳು

ಟಾಲಿವುಡ್​ ಸ್ಟಾರ್​ ಅಲ್ಲು ಅರ್ಜುನ್​ ಪುಷ್ಪ-1 ಸಿನಿಮಾ ಮೂಲಕ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಇದೀಗ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅರ್ಜುನ್​ ರೆಡ್ಡಿ ಖ್ಯಾತಿಯ ಸಂದೀಪ್​ ರೆಡ್ಡಿ ವಾಂಗ ಜೊತೆ ಅಲ್ಲು ಅರ್ಜುನ್ ಮುಂದಿನ​ ಸಿನಿಮಾ ಮಾಡಲಿದ್ದಾರೆ.

ಹೌದು. ಸ್ಟೈಲಿಶ್​ ಸ್ಟಾರ್​ ಅಲ್ಲು ಅರ್ಜುನ್​ ಪುಷ್ಪ ಮೊದಲ ಭಾಗದ ಯಶಸ್ಸಿನ ಬಳಿಕ ಪಾರ್ಟ್​ 2 ತಯಾರಿಯಲ್ಲಿದ್ದಾರೆ. ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಈ ಸಿನಿಮಾದ ಚಿತ್ರೀಕರಣ ಭರ್ಜರಿಯಲ್ಲಿ ಸಾಗುತ್ತಿದೆ. ಜೊತೆಗೆ ಅಲ್ಲು ಈ ಸಿನಿಮಾ ಬಳಿಕ ಯಾವ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ? ಎಂಬ ಕುತೂಹಲ ಜನರಲ್ಲಿತ್ತು. ಆದರೀಗ ಕುತೂಹಲಕ್ಕೆ ತೆರೆ ಬಿದ್ದಿದೆ.

ಮೊದಲ ಸಿನಿಮಾದಲ್ಲೇ ಸೂಪರ್​ ಸಕ್ಸಸ್​ ಕಂಡ ನಿರ್ದೇಶಕ ಸಂದೀಪ್​ ರೆಡ್ಡಿ ವಾಂಗ ಬಾಲಿವುಡ್​ ಅಂಗಳಕ್ಕೆ ಹಾರಿದರು. ಬಳಿಕ ಕಬೀರ್​ ಸಿಂಗ್​ ಎಂಬ ಹಿಟ್​ ಸಿನಿಮಾ ಮಾಡಿದ್ದು, ದೊಡ್ಡ ಮಟ್ಟದಲ್ಲಿಯೇ ಯಶಸ್ವಿ ಕಂಡಿತು. ಅದಾದ ನಂತರ ಮತ್ತೆ ಹಿಂದಿ ಸಿನಿಮಾ ಒಪ್ಪಿಕೊಂಡಿರುವ ನಿರ್ದೇಶಕ, ರಣಬೀರ್​ ಕಪೂರ್​ ಜೊತೆ ಅನಿಮಲ್​ ಸಿನಿಮಾ ಮಾಡುತ್ತಿದ್ದಾರೆ. ಅನಿಮಲ್​ನಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ರಣಬೀರ್​ ಕಪೂರ್​ ಜೊತೆ ಬಹುಭಾಷಾ ತಾರೆ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ಆದರೆ ಇದೀಗ ಅನಿಮಲ್​ ಚಿತ್ರೀಕರಣ ಮುಗಿಯುವ ಮುನ್ನವೇ ನಿರ್ದೇಶಕ ಸಂದೀಪ್​ ರೆಡ್ಡಿ, ಅಲ್ಲು ಅರ್ಜುನ್​ ಜೊತೆ ಮುಂದಿನ ಸಿನಿಮಾ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ವಿಠಲ್ ಮಲೆಕುಡಿಯ ನಕ್ಸಲ್​​ ನಂಟು ಆರೋಪ ಪ್ರಕರಣ ಆಧಾರಿತ 19.20.21 ಸಿನಿಮಾ ನಾಳೆ ತೆರೆಗೆ

ಇನ್ನು ಹೆಸರಿಡದ ಈ ಸಿನಿಮಾವನ್ನು ಭೂಷಣ್​ ಕುಮಾರ್​ ಅವರ ಫಿಲ್ಮ್​ ಸ್ಟುಡಿಯೋ ಮತ್ತು ಟೀ ಸೀರಿಸ್​ ಹಾಗೂ ಸಂದೀಪ್​ ರೆಡ್ಡಿ ಅವರ ಭದ್ರಕಾಳಿ ಪಿಕ್ಚರ್ಸ್​ ನಿರ್ಮಾಣ ಮಾಡುತ್ತಿದೆ. ಅಲ್ಲು ಅರ್ಜುನ್​ ಹೊಸ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲೇ ರಿಲೀಸ್ ಆಗಲಿದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಪ್ಲ್ಯಾನ್​ ಮಾಡಿರುವ ಚಿತ್ರತಂಡ ಸದ್ಯ ಪ್ರಿ ಪ್ರೊಡಕ್ಷನ್​ ಕೆಲಸದಲ್ಲಿ ತೊಡಗಿದ್ದಾರೆ. ಇನ್ನೂ ಈ ಸಿನಿಮಾದಲ್ಲಿ ಯಾರೆಲ್ಲಾ ನಟಿಸಲಿದ್ದಾರೆ, ನಾಯಕಿ ಯಾರು? ಎಂಬೆಲ್ಲಾ ಪ್ರಶ್ನೆಗಳಿಗೆ ಸದ್ಯದಲ್ಲೇ ಉತ್ತರ ಸಿಗಲಿದೆ. ನಿರ್ದೇಶಕ ಸಂದೀಪ್​ ರೆಡ್ಡಿ ಪ್ರಭಾಸ್​ ಜೊತೆ ಸ್ಪಿರಿಟ್​ ಸಿನಿಮಾ ಮಾಡುತ್ತಿದ್ದಾರೆ. ಹಾಗಾಗಿ ಈ ಸಿನಿಮಾ ಚಿತ್ರೀಕರಣ ಮುಗಿದ ಬಳಿಕವಷ್ಟೇ ಅಲ್ಲು ಅರ್ಜುನ್​ ಜೊತೆ ಶೂಟಿಂಗ್​ ಪ್ರಾರಂಭಿಸಲಿದ್ದಾರೆ.

'ಪ್ಯಾನ್​ ಇಂಡಿಯಾ ಸ್ಟಾರ್'​: ಪುಷ್ಪ-1 ಸಿನಿಮಾವು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತು. ಈ ಚಿತ್ರದ ಯಶಸ್ಸಿನಿಂದಲೇ ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೊರಹೊಮ್ಮಿದರು. ಇದೀಗ ಪುಷ್ಪ-2 ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದು, ಭಾರೀ ನಿರೀಕ್ಷೆ ಮೂಡಿಸಿದೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಅಮೆರಿಕದಾದ್ಯಂತ ಆರ್​ಆರ್​ಆರ್ ಸದ್ದು: ಪ್ರೇಕ್ಷಕರ ಚಪ್ಪಾಳೆಗೆ ಸಾಕ್ಷಿಯಾದ ಯುಎಸ್​ ಚಿತ್ರಮಂದಿರಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.