ETV Bharat / entertainment

BBK 10: ತುಕಾಲಿ ಸಂತೋಷ್ ಹುಟ್ಟಿದ್ದೇ ಪವಾಡವಂತೆ! ಇಂಟ್ರಸ್ಟಿಂಗ್​ ಕಥೆ ನೀವೂ ಕೇಳಿ..

author img

By ETV Bharat Karnataka Team

Published : Oct 14, 2023, 11:06 PM IST

ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿರುವ ತುಕಾಲಿ ಸಂತೋಷ್ ತಮ್ಮ ಹುಟ್ಟಿನ ಪವಾಡದ ಕಥೆಯನ್ನು ರೋಚಕವಾಗಿ ಹೇಳಿಕೊಂಡಿದ್ದಾರೆ.

Bigg Boss season 10 tukali santhosh born like a miracle
ಬಿಗ್​ ಬಾಸ್​ ಸೀಸನ್​ 10: ತುಕಾಲಿ ಸಂತೋಷ್ ಹುಟ್ಟಿದ್ದೇ ಪವಾಡವಂತೆ! ಇಂಟ್ರಸ್ಟಿಂಗ್​ ಕಥೆ..

ಕಿಚ್ಚ ಸುದೀಪ್​ ನಡೆಸಿಕೊಡುವ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿರುವ ತುಕಾಲಿ ಸಂತೋಷ್​ ಸದಾ ಕಾಮಿಡಿ ಮಾಡ್ತಾ ಎಲ್ಲರನ್ನೂ ನಗಿಸ್ತಾ ಇರ್ತಾರೆ. ಆದರೆ ಅಪರೂಪಕ್ಕೊಮ್ಮೆ ಸೀರಿಯಸ್​ ಆಗಿದ್ದಾರೆ. ತಮ್ಮ ಹುಟ್ಟಿನ ಪವಾಡದ ಕಥೆಯನ್ನು ರೋಚಕವಾಗಿ ಹೇಳಿಕೊಡುತ್ತಿದ್ದಾರೆ. ಆದ್ರೆ ಅವರು ಸೀರಿಯಸ್​ ಆಗಿ ಮಾತನಾಡೋದನ್ನು ಕಂಡು ಸ್ಪರ್ಧಿಗಳೆಲ್ಲ ಸಂತೋಷ್ ಕಾಲೆಳೆಯೋಕೆ ಶುರು ಮಾಡಿದ್ದಾರೆ. ಹಾಗಿದ್ರೆ ಅವರ ಹುಟ್ಟಿನ ಕಥೆಯನ್ನು 'ಸೀರಿಯಸ್​' ಆಗಿ ನೀವಾದ್ರೂ ಕೇಳಿ...

ತುಕಾಲಿ ಸಂತೋಷ್ ಹುಟ್ಟಿದ್ದೇ ಪವಾಡವಂತೆ!:'15-01-1990ಕ್ಕೆ ಒಬ್ಬ ಮಹಾನ್ ಸಾಧಕನ ಜನನ ಆಗುತ್ತೆ' ಎಂದ ಸಂತೋಷ್ ಕಥೆಯ ಸಾಲಿನ ಬಗ್ಗೆಯೇ ನೀತುಗೆ ಅನುಮಾನ. '1990?' ಎಂದು ಪ್ರಶ್ನಾರ್ಥಕವಾಗಿ ಕೇಳ್ತಾರೆ. ಆದ್ರೆ ವಯಸ್ಸನ್ನು ಕಡಿಮೆ ಮಾಡಿಕೊಳ್ಳುವ ಹುಮ್ಮಸ್ಸಿನಲ್ಲಿದ್ದ ಸಂತೋಷ್‌ ಅವರ ಅನುಮಾನದ ಕಡೆಗೆ ಗಮನಹರಿಸಲು ಸಾಧ್ಯನಾ? ಅವರು ತಮ್ಮ ಪಾಡಿಗೆ ತಾವು ಮಾತು ಮುಂದುವರಿಸುತ್ತಾರೆ.

'ಪವಾಡ ಪುರುಷ ಅಲ್ಲ ನಾನು. ನಾನು ಹುಟ್ಟಿದ್ದೇ ಒಂದು ಪವಾಡ. ಪವಾಡದಿಂದ ಜನನ. ನಾನು ಹುಟ್ಟಿದ್ದೇ ಒಂದು ಪವಾಡ. ನಿಮಗಿನ್ನು ಗೊತ್ತಿಲ್ಲ, ಒಂಬತ್ತು ತಿಂಗಳಾಗಿ ಮೂರು ದಿನಕ್ಕೆ ನಾನು ಹುಟ್ಟಿರೋದು. ಒಂಬತ್ತು ತಿಂಗಳು ಕರೆಕ್ಟಾಗಿ ಬರತ್ತಲ್ಲಾ. ಅವತ್ತು, ಜೋರಾದ ಗುಡುಗು, ಸಿಡಿಲು, ಮಳೆ, ಗಾಳಿ…'

ಇಷ್ಟು ಹೇಳುತ್ತಿದ್ದ ಹಾಗೆಯೇ ಮಧ್ಯ ಬಾಯಿ ಹಾಕಿದೋರು ವರ್ತೂರು ಸಂತೋಷ್. 'ಈ ಭೂಮಿಗೆ ಯಾವ್ದೋ ದುಷ್ಟಶಕ್ತಿ ಬರ್ತಿದೆ ಅಂತ ಸೂಚನೆ' ಎಂದ ಅವರ ಮಾತಿಗೆ ಉಳಿದವರೆಲ್ಲ ಜೋರಾಗಿ ನಕ್ಕರು. ಗೌರೀಶ ಅಕ್ಕಿ, ಇನ್ನೊಂದು ಹೆಜ್ಜೆ ಮುಂದೆ ಹೋಗಿ, 'ಧುರ್ಯೋಧನ ಹುಟ್ಟಬೇಕಾದರೆ ಹಿಂಗೇ ಆಗಿತ್ತಂತೆ' ಎಂದು ಸಂತೋಷ್ ಜನ್ಮಕ್ಕೆ ಪುರಾಣ ಸ್ಪರ್ಶವನ್ನು ಬೇರೆ ಕೊಟ್ಟುಬಿಟ್ಟರು. ತುಕಾಲಿ ಅವರಿಗೆ ಕೋಪ ಬರ್ದೇ ಇರತ್ತಾ? ಆದ್ರೂ ನಗ್ತಾನೇ 'ನನ್ನ ಹಾಳು ಮಾಡ್ತಿದ್ದಾರೆ ಇವ್ರು' ಎಂದು ಹೇಳಿ ತಮ್ಮ ಕಥೆಯನ್ನು ಮುಂದುವರಿಸಿದ್ರು.

'ಜೋರಾದ ಗುಡುಗು, ಸಿಡಿಲು, ಮಳೆ ಬರ್ತಾ ಐತೆ. ರಾತ್ರಿ ಒಂಬತ್ತು ಗಂಟೆ. ಅಮ್ಮ ಬೆಳಿಗ್ಗೆ ತಿಂಡಿ ಮಾಡ್ಬೇಕಲಾ… ತರಕಾರಿ ಹಿಡ್ಕೊಂಡು ಬರ್ತಾ ಇದ್ದಾರೆ ದೇವಸ್ಥಾನದ ಹತ್ರ. ಆಗ ಯಾವ್ದೋ ಒಂದು ಶಬ್ದ' ಎಂದು ಎರಡು ಸಾಲು ಹೇಳುವಷ್ಟರಲ್ಲಿ ನೀತು ತಲೆಗೆ ಹೊಸ ಆಲೋಚನೆ ಹೊಳೆದಿದೆ. 'ಈ ಕಥೆಯನ್ನೇ ಸಿನಿಮಾ ಮಾಡ್ಬೋದು ನೀವು' ಎಂದು ಗೌರೀಶ ಅವರಿಗೆ ಸಲಹೆಯನ್ನೂ ಕೊಟ್ಟುಬಿಟ್ಟರು.

ಈಗ ಸಂತೋಷ್‌ ತಾಳ್ಮೆಯ ಕಟ್ಟೆ ಒಡೀತು. 'ಯಾರಾದ್ರೂ ಬಂದು ನನ್ ತಲ್ ತಲೆಗೆ ಹೊಡ್ದುಬಿಡ್ರಪ್ಪಾ… ಹೊಡ್ದುಬಿಡಿ… ನನ್ ಲೈಫ್‌ನ ರಿಯಲ್ ಸ್ಟೋರಿ ಹೇಳ್ತಿದೀನಿ… ಸಿನಿಮಾ ಮಾಡ್ಬೇಕು ಅಂತಿದೀರಲಾ ನೀವು…' ಎಂದು ಕೋಪಗೊಂಡರೇನೋ ನಿಜ. ಆದ್ರೆ ಕಥೆಯನ್ನು ಹೇಳುವ ಉತ್ಸಾಹವನ್ನು ಮಾತ್ರ ಕಳೆದುಕೊಳ್ಳಲಿಲ್ಲ.

'ಇದು ನಿಜವಾಗ್ಲೂ ನಡೆದಿದ್ದು. ನಮ್ಮೂರಲ್ಲಿ ಮಾರಮ್ಮನ ಗುಡಿ, ಆಂಜನೇಯ ಸ್ವಾಮಿ ಗುಡಿ ಇವೆ. ಈಗ ದೇವಸ್ಥಾನ ಕಟ್ತವ್ರೆ. ವೆರಿ ಪವರ್​ಫುಲ್ ಆಂಜನೇಯಸ್ವಾಮಿ. ಆ ಗುಡಿ ಹತ್ರ ನಮ್ಮಮ್ಮ ತರಕಾರಿ ಬ್ಯಾಗ್ ಹಿಡ್ಕಂಡು ಬರೋವಾಗ ಒಂದು ಧ್ವನಿ ಕೇಳ್ತಂತೆ.. ನಿನ್ ಮಗ ಇಡೀ ಜಗತ್ತನ್ನೇ….’ ಸಂತೋಷ್ ಮಾತನ್ನು ತುಂಡರಿಸಿದ ಸಿರಿ, ‘ಹಾಳ್ಮಾಡ್ತಾನೆ ಅಂದ್ರಾ?’ ಎಂದು ಕೇಳಿದರು. ‘ಇಲ್ಲ. ಆಳ್ತಾನೆ ಅಂತ. ನಾನು ದೊಡ್ಡ ಇದಾಯ್ತೀನಿ ಅಂತ ಹೇಳಿದ್ದು ಅಲ್ಲಿ’ ಎಂದು ಸಮಾಧಾನದಿಂದ ತಿದ್ದಿದರು ತುಕಾಲಿ ಅವರು.

‘ನಿನ್ ಮಗ ಒಳ್ಳೆ ಅದ್ಭುತ ವ್ಯಕ್ತಿಯಾಗ್ತಾನೆ. ಸಾಧಕನಾಗ್ತಾನೆ. ಇಡೀ ನಾಡನ್ನು ಗೆಲ್ಲುವಂಥ ಶಕ್ತಿ ಸಿಗ್ತದೆ- ಇಷ್ಟು ಮಾತು ಆ ಗುಡುಗು ಸಿಡಿಲು ಮಳೆಯಲ್ಲಿ ಎಲ್ಲೋ ಒಂದು ಕಡೆ ಎಕೋ ಧ್ವನಿಯಲ್ಲಿ ಕೇಳಿಸಿದ್ದು’.. ಸಂತೋಷ್ ಇಷ್ಟು ತನ್ಮಯನಾಗಿ ಕಥೆ ಹೇಳ್ತಿದ್ರೆ ಉಳಿದವರಿಗೆಲ್ಲ ಲಾಜಿಕ್‌ನ ಸಮಸ್ಯೆ.

‘ನೀವು ಎಲ್ಲಿದ್ರಿ ಆವಾಗ?’ ‘ನೀವು ಹುಟ್ಟೇ ಇರ್ಲಿಲ್ವಲ್ಲಾ. ನಿಮಗೆ ಹೇಗೆ ಗೊತ್ತಾಯ್ತು?’ ‘ಅಮ್ಮನತ್ರ ಛತ್ರಿ ಇರ್ಲಿಲ್ವಾ?’ -ರೋಚಕ ಪವಾಡದ ಕಥೆಯನ್ನು ಅಷ್ಟೇ ರಸವತ್ತಾಗಿ ಹೇಳುತ್ತಿರುವಾಗ ಅದನ್ನು ಮೈಮರೆತು ಕೇಳಿಸಿಕೊಳ್ಳೋದು ಬಿಟ್ಟು ಎಲ್ರೂ ಹೀಗೆ ಪ್ರಶ್ನೆ ಮೇಲೆ ಪ್ರಶ್ನೆ ಕೇಳತೊಡಗಿದ್ರೆ ಕಥೆ ಮುಂದುವರಿಸೋದಾದ್ರೂ ಹೇಗೆ? ಆದ್ರೆ ತುಕಾಲಿ ಅವರಿಗೆ ತಮ್ಮನ್ನು ಜನ್ಮದ ಹಿಂದಿನ ‘ಪವಾಡ’ದ ಕಥೆಯನ್ನು ಎಲ್ಲರಿಗೂ ನಂಬಿಸಬೇಕು ಎಂಬ ಹಟ. ಅವ್ರು ಕಥೆಯನ್ನು ಮುಗಿಸ್ತಾರಾ? ಉಳಿದವ್ರೆಲ್ಲ ನಂಬ್ತಾರಾ? ತಿಳಿದುಕೊಳ್ಳಲು JioCinemaದಲ್ಲಿ ಬಿಗ್‌ಬಾಸ್‌ ಕನ್ನಡ ನೇರಪ್ರಸಾರದಲ್ಲಿನ ‘Unseen ಕಥೆಗಳು’ ನೋಡಬೇಕು.

  • https://jiocinema.onelink.me/fRhd/6yz6p28o

ಇದನ್ನೂ ಓದಿ: ಬಿಗ್​ ಬಾಸ್​ ಶೋನಲ್ಲಿ ಸ್ನೇಕ್‌ ಶ್ಯಾಮ್‌ ತೆರೆದಿಟ್ರು 'ಉರಗ' ಪ್ರಪಂಚದ ಕುತೂಹಲ

ಕಿಚ್ಚ ಸುದೀಪ್​ ನಡೆಸಿಕೊಡುವ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿರುವ ತುಕಾಲಿ ಸಂತೋಷ್​ ಸದಾ ಕಾಮಿಡಿ ಮಾಡ್ತಾ ಎಲ್ಲರನ್ನೂ ನಗಿಸ್ತಾ ಇರ್ತಾರೆ. ಆದರೆ ಅಪರೂಪಕ್ಕೊಮ್ಮೆ ಸೀರಿಯಸ್​ ಆಗಿದ್ದಾರೆ. ತಮ್ಮ ಹುಟ್ಟಿನ ಪವಾಡದ ಕಥೆಯನ್ನು ರೋಚಕವಾಗಿ ಹೇಳಿಕೊಡುತ್ತಿದ್ದಾರೆ. ಆದ್ರೆ ಅವರು ಸೀರಿಯಸ್​ ಆಗಿ ಮಾತನಾಡೋದನ್ನು ಕಂಡು ಸ್ಪರ್ಧಿಗಳೆಲ್ಲ ಸಂತೋಷ್ ಕಾಲೆಳೆಯೋಕೆ ಶುರು ಮಾಡಿದ್ದಾರೆ. ಹಾಗಿದ್ರೆ ಅವರ ಹುಟ್ಟಿನ ಕಥೆಯನ್ನು 'ಸೀರಿಯಸ್​' ಆಗಿ ನೀವಾದ್ರೂ ಕೇಳಿ...

ತುಕಾಲಿ ಸಂತೋಷ್ ಹುಟ್ಟಿದ್ದೇ ಪವಾಡವಂತೆ!:'15-01-1990ಕ್ಕೆ ಒಬ್ಬ ಮಹಾನ್ ಸಾಧಕನ ಜನನ ಆಗುತ್ತೆ' ಎಂದ ಸಂತೋಷ್ ಕಥೆಯ ಸಾಲಿನ ಬಗ್ಗೆಯೇ ನೀತುಗೆ ಅನುಮಾನ. '1990?' ಎಂದು ಪ್ರಶ್ನಾರ್ಥಕವಾಗಿ ಕೇಳ್ತಾರೆ. ಆದ್ರೆ ವಯಸ್ಸನ್ನು ಕಡಿಮೆ ಮಾಡಿಕೊಳ್ಳುವ ಹುಮ್ಮಸ್ಸಿನಲ್ಲಿದ್ದ ಸಂತೋಷ್‌ ಅವರ ಅನುಮಾನದ ಕಡೆಗೆ ಗಮನಹರಿಸಲು ಸಾಧ್ಯನಾ? ಅವರು ತಮ್ಮ ಪಾಡಿಗೆ ತಾವು ಮಾತು ಮುಂದುವರಿಸುತ್ತಾರೆ.

'ಪವಾಡ ಪುರುಷ ಅಲ್ಲ ನಾನು. ನಾನು ಹುಟ್ಟಿದ್ದೇ ಒಂದು ಪವಾಡ. ಪವಾಡದಿಂದ ಜನನ. ನಾನು ಹುಟ್ಟಿದ್ದೇ ಒಂದು ಪವಾಡ. ನಿಮಗಿನ್ನು ಗೊತ್ತಿಲ್ಲ, ಒಂಬತ್ತು ತಿಂಗಳಾಗಿ ಮೂರು ದಿನಕ್ಕೆ ನಾನು ಹುಟ್ಟಿರೋದು. ಒಂಬತ್ತು ತಿಂಗಳು ಕರೆಕ್ಟಾಗಿ ಬರತ್ತಲ್ಲಾ. ಅವತ್ತು, ಜೋರಾದ ಗುಡುಗು, ಸಿಡಿಲು, ಮಳೆ, ಗಾಳಿ…'

ಇಷ್ಟು ಹೇಳುತ್ತಿದ್ದ ಹಾಗೆಯೇ ಮಧ್ಯ ಬಾಯಿ ಹಾಕಿದೋರು ವರ್ತೂರು ಸಂತೋಷ್. 'ಈ ಭೂಮಿಗೆ ಯಾವ್ದೋ ದುಷ್ಟಶಕ್ತಿ ಬರ್ತಿದೆ ಅಂತ ಸೂಚನೆ' ಎಂದ ಅವರ ಮಾತಿಗೆ ಉಳಿದವರೆಲ್ಲ ಜೋರಾಗಿ ನಕ್ಕರು. ಗೌರೀಶ ಅಕ್ಕಿ, ಇನ್ನೊಂದು ಹೆಜ್ಜೆ ಮುಂದೆ ಹೋಗಿ, 'ಧುರ್ಯೋಧನ ಹುಟ್ಟಬೇಕಾದರೆ ಹಿಂಗೇ ಆಗಿತ್ತಂತೆ' ಎಂದು ಸಂತೋಷ್ ಜನ್ಮಕ್ಕೆ ಪುರಾಣ ಸ್ಪರ್ಶವನ್ನು ಬೇರೆ ಕೊಟ್ಟುಬಿಟ್ಟರು. ತುಕಾಲಿ ಅವರಿಗೆ ಕೋಪ ಬರ್ದೇ ಇರತ್ತಾ? ಆದ್ರೂ ನಗ್ತಾನೇ 'ನನ್ನ ಹಾಳು ಮಾಡ್ತಿದ್ದಾರೆ ಇವ್ರು' ಎಂದು ಹೇಳಿ ತಮ್ಮ ಕಥೆಯನ್ನು ಮುಂದುವರಿಸಿದ್ರು.

'ಜೋರಾದ ಗುಡುಗು, ಸಿಡಿಲು, ಮಳೆ ಬರ್ತಾ ಐತೆ. ರಾತ್ರಿ ಒಂಬತ್ತು ಗಂಟೆ. ಅಮ್ಮ ಬೆಳಿಗ್ಗೆ ತಿಂಡಿ ಮಾಡ್ಬೇಕಲಾ… ತರಕಾರಿ ಹಿಡ್ಕೊಂಡು ಬರ್ತಾ ಇದ್ದಾರೆ ದೇವಸ್ಥಾನದ ಹತ್ರ. ಆಗ ಯಾವ್ದೋ ಒಂದು ಶಬ್ದ' ಎಂದು ಎರಡು ಸಾಲು ಹೇಳುವಷ್ಟರಲ್ಲಿ ನೀತು ತಲೆಗೆ ಹೊಸ ಆಲೋಚನೆ ಹೊಳೆದಿದೆ. 'ಈ ಕಥೆಯನ್ನೇ ಸಿನಿಮಾ ಮಾಡ್ಬೋದು ನೀವು' ಎಂದು ಗೌರೀಶ ಅವರಿಗೆ ಸಲಹೆಯನ್ನೂ ಕೊಟ್ಟುಬಿಟ್ಟರು.

ಈಗ ಸಂತೋಷ್‌ ತಾಳ್ಮೆಯ ಕಟ್ಟೆ ಒಡೀತು. 'ಯಾರಾದ್ರೂ ಬಂದು ನನ್ ತಲ್ ತಲೆಗೆ ಹೊಡ್ದುಬಿಡ್ರಪ್ಪಾ… ಹೊಡ್ದುಬಿಡಿ… ನನ್ ಲೈಫ್‌ನ ರಿಯಲ್ ಸ್ಟೋರಿ ಹೇಳ್ತಿದೀನಿ… ಸಿನಿಮಾ ಮಾಡ್ಬೇಕು ಅಂತಿದೀರಲಾ ನೀವು…' ಎಂದು ಕೋಪಗೊಂಡರೇನೋ ನಿಜ. ಆದ್ರೆ ಕಥೆಯನ್ನು ಹೇಳುವ ಉತ್ಸಾಹವನ್ನು ಮಾತ್ರ ಕಳೆದುಕೊಳ್ಳಲಿಲ್ಲ.

'ಇದು ನಿಜವಾಗ್ಲೂ ನಡೆದಿದ್ದು. ನಮ್ಮೂರಲ್ಲಿ ಮಾರಮ್ಮನ ಗುಡಿ, ಆಂಜನೇಯ ಸ್ವಾಮಿ ಗುಡಿ ಇವೆ. ಈಗ ದೇವಸ್ಥಾನ ಕಟ್ತವ್ರೆ. ವೆರಿ ಪವರ್​ಫುಲ್ ಆಂಜನೇಯಸ್ವಾಮಿ. ಆ ಗುಡಿ ಹತ್ರ ನಮ್ಮಮ್ಮ ತರಕಾರಿ ಬ್ಯಾಗ್ ಹಿಡ್ಕಂಡು ಬರೋವಾಗ ಒಂದು ಧ್ವನಿ ಕೇಳ್ತಂತೆ.. ನಿನ್ ಮಗ ಇಡೀ ಜಗತ್ತನ್ನೇ….’ ಸಂತೋಷ್ ಮಾತನ್ನು ತುಂಡರಿಸಿದ ಸಿರಿ, ‘ಹಾಳ್ಮಾಡ್ತಾನೆ ಅಂದ್ರಾ?’ ಎಂದು ಕೇಳಿದರು. ‘ಇಲ್ಲ. ಆಳ್ತಾನೆ ಅಂತ. ನಾನು ದೊಡ್ಡ ಇದಾಯ್ತೀನಿ ಅಂತ ಹೇಳಿದ್ದು ಅಲ್ಲಿ’ ಎಂದು ಸಮಾಧಾನದಿಂದ ತಿದ್ದಿದರು ತುಕಾಲಿ ಅವರು.

‘ನಿನ್ ಮಗ ಒಳ್ಳೆ ಅದ್ಭುತ ವ್ಯಕ್ತಿಯಾಗ್ತಾನೆ. ಸಾಧಕನಾಗ್ತಾನೆ. ಇಡೀ ನಾಡನ್ನು ಗೆಲ್ಲುವಂಥ ಶಕ್ತಿ ಸಿಗ್ತದೆ- ಇಷ್ಟು ಮಾತು ಆ ಗುಡುಗು ಸಿಡಿಲು ಮಳೆಯಲ್ಲಿ ಎಲ್ಲೋ ಒಂದು ಕಡೆ ಎಕೋ ಧ್ವನಿಯಲ್ಲಿ ಕೇಳಿಸಿದ್ದು’.. ಸಂತೋಷ್ ಇಷ್ಟು ತನ್ಮಯನಾಗಿ ಕಥೆ ಹೇಳ್ತಿದ್ರೆ ಉಳಿದವರಿಗೆಲ್ಲ ಲಾಜಿಕ್‌ನ ಸಮಸ್ಯೆ.

‘ನೀವು ಎಲ್ಲಿದ್ರಿ ಆವಾಗ?’ ‘ನೀವು ಹುಟ್ಟೇ ಇರ್ಲಿಲ್ವಲ್ಲಾ. ನಿಮಗೆ ಹೇಗೆ ಗೊತ್ತಾಯ್ತು?’ ‘ಅಮ್ಮನತ್ರ ಛತ್ರಿ ಇರ್ಲಿಲ್ವಾ?’ -ರೋಚಕ ಪವಾಡದ ಕಥೆಯನ್ನು ಅಷ್ಟೇ ರಸವತ್ತಾಗಿ ಹೇಳುತ್ತಿರುವಾಗ ಅದನ್ನು ಮೈಮರೆತು ಕೇಳಿಸಿಕೊಳ್ಳೋದು ಬಿಟ್ಟು ಎಲ್ರೂ ಹೀಗೆ ಪ್ರಶ್ನೆ ಮೇಲೆ ಪ್ರಶ್ನೆ ಕೇಳತೊಡಗಿದ್ರೆ ಕಥೆ ಮುಂದುವರಿಸೋದಾದ್ರೂ ಹೇಗೆ? ಆದ್ರೆ ತುಕಾಲಿ ಅವರಿಗೆ ತಮ್ಮನ್ನು ಜನ್ಮದ ಹಿಂದಿನ ‘ಪವಾಡ’ದ ಕಥೆಯನ್ನು ಎಲ್ಲರಿಗೂ ನಂಬಿಸಬೇಕು ಎಂಬ ಹಟ. ಅವ್ರು ಕಥೆಯನ್ನು ಮುಗಿಸ್ತಾರಾ? ಉಳಿದವ್ರೆಲ್ಲ ನಂಬ್ತಾರಾ? ತಿಳಿದುಕೊಳ್ಳಲು JioCinemaದಲ್ಲಿ ಬಿಗ್‌ಬಾಸ್‌ ಕನ್ನಡ ನೇರಪ್ರಸಾರದಲ್ಲಿನ ‘Unseen ಕಥೆಗಳು’ ನೋಡಬೇಕು.

  • https://jiocinema.onelink.me/fRhd/6yz6p28o

ಇದನ್ನೂ ಓದಿ: ಬಿಗ್​ ಬಾಸ್​ ಶೋನಲ್ಲಿ ಸ್ನೇಕ್‌ ಶ್ಯಾಮ್‌ ತೆರೆದಿಟ್ರು 'ಉರಗ' ಪ್ರಪಂಚದ ಕುತೂಹಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.