ETV Bharat / entertainment

ಹೆಚ್‌ಎಂಟಿ ಕಾಡಿನಲ್ಲಿ 'ಬಾಂಡ್ ರವಿ' ಸಾಹಸ ದೃಶ್ಯಗಳ ಚಿತ್ರೀಕರಣ

ಬಾಂಡ್ ರವಿ ಚಿತ್ರತಂಡ ಬೆಂಗಳೂರಿನ ಹೆಚ್​ಎಮ್​ಟಿಯ ಕಾಡಿನಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಿತು.

author img

By

Published : May 27, 2022, 10:36 AM IST

Bond Ravi shooting
ಬಾಂಡ್ ರವಿ ಭರ್ಜರಿ ಚಿತ್ರೀಕರಣ

ಪ್ರಿಮಿಯರ್ ಪದ್ಮಿನಿ ಹಾಗು ರತ್ನನ್‌ ಪ್ರಪಂಚ ಸಿನಿಮಾಗಳ ಮೂಲಕ ‌ಸ್ಯಾಂಡಲ್​ವುಡ್​ನಲ್ಲಿ ಭರವಸೆ ಹುಟ್ಟಿಸಿರುವ ಪ್ರತಿಭಾನ್ವಿತ ನಟ ಪ್ರಮೋದ್. ಸದ್ಯ ಬಾಂಡ್ ರವಿ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಶೇ 70 ಶೂಟಿಂಗ್ ಈಗಾಗಲೇ ಮುಗಿದಿದೆ.

ಇತ್ತೀಚೆಗೆ ಬೆಂಗಳೂರಿನ ಹೆಚ್​ಎಮ್​ಟಿಯ ಕಾಡಿನಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಲಾಗಿದೆ. ಖ್ಯಾತ ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಂಯೋಜನೆಯಲ್ಲಿ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಆ್ಯಕ್ಷನ್ ಸೀನ್ಸ್​ನಲ್ಲಿ ಭಾಗಿಯಾಗಿದ್ದರು.

ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಷಿಯಲ್, ಆ್ಯಕ್ಷನ್-ಲವ್ ಸ್ಟೋರಿ ಸಿನಿಮಾ. ಪ್ರಮೋದ್‌ಗೆ​ ನಾಯಕಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಟಿಸ್ತಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ನಟ ರವಿ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರ ದಂಡು ಚಿತ್ರದಲ್ಲಿದೆ.

ಇದನ್ನೂ ಓದಿ: 60ರ ದಶಕದ ಬೆಂಗಳೂರಿನಲ್ಲಿ ನಡೆಯುವ ಕಥೆ ಹೇಳಲು ಬರುತ್ತಿದೆ 'ಆಚಾರ್ & ಕೋ'

ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್ ಅಡಿ ನರಸಿಂಹಮೂರ್ತಿ ಬಂಡವಾಳ ಹೂಡಿದ್ದಾರೆ. ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಿಸಿದ್ದರು. ಕೆಎಸ್.ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್ ಮತ್ತು ದೇವ್ ಎನ್.ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ, ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.

ಪ್ರಿಮಿಯರ್ ಪದ್ಮಿನಿ ಹಾಗು ರತ್ನನ್‌ ಪ್ರಪಂಚ ಸಿನಿಮಾಗಳ ಮೂಲಕ ‌ಸ್ಯಾಂಡಲ್​ವುಡ್​ನಲ್ಲಿ ಭರವಸೆ ಹುಟ್ಟಿಸಿರುವ ಪ್ರತಿಭಾನ್ವಿತ ನಟ ಪ್ರಮೋದ್. ಸದ್ಯ ಬಾಂಡ್ ರವಿ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಶೇ 70 ಶೂಟಿಂಗ್ ಈಗಾಗಲೇ ಮುಗಿದಿದೆ.

ಇತ್ತೀಚೆಗೆ ಬೆಂಗಳೂರಿನ ಹೆಚ್​ಎಮ್​ಟಿಯ ಕಾಡಿನಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಲಾಗಿದೆ. ಖ್ಯಾತ ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಂಯೋಜನೆಯಲ್ಲಿ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಆ್ಯಕ್ಷನ್ ಸೀನ್ಸ್​ನಲ್ಲಿ ಭಾಗಿಯಾಗಿದ್ದರು.

ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಷಿಯಲ್, ಆ್ಯಕ್ಷನ್-ಲವ್ ಸ್ಟೋರಿ ಸಿನಿಮಾ. ಪ್ರಮೋದ್‌ಗೆ​ ನಾಯಕಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಟಿಸ್ತಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ನಟ ರವಿ ಪ್ರಕಾಶ್ ಸೇರಿದಂತೆ ಸಾಕಷ್ಟು ಕಲಾವಿದರ ದಂಡು ಚಿತ್ರದಲ್ಲಿದೆ.

ಇದನ್ನೂ ಓದಿ: 60ರ ದಶಕದ ಬೆಂಗಳೂರಿನಲ್ಲಿ ನಡೆಯುವ ಕಥೆ ಹೇಳಲು ಬರುತ್ತಿದೆ 'ಆಚಾರ್ & ಕೋ'

ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್ ಅಡಿ ನರಸಿಂಹಮೂರ್ತಿ ಬಂಡವಾಳ ಹೂಡಿದ್ದಾರೆ. ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಿಸಿದ್ದರು. ಕೆಎಸ್.ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್ ಮತ್ತು ದೇವ್ ಎನ್.ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ, ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.