ETV Bharat / entertainment

ಕನ್ನಡ ಚಿತ್ರರಂಗದ ಎವರ್‌ಗ್ರೀನ್‌ ನಾಗರಹಾವು ಸಿನಿಮಾಗೆ 50 ವರ್ಷಗಳ ಸಂಭ್ರಮ

author img

By

Published : Dec 30, 2022, 6:21 AM IST

ಡಾ ವಿಷ್ಣುವರ್ಧನ್ ಅಭಿನಯದ ನಾಗರಹಾವು ಸಿನಿಮಾಗೆ 50 ವರ್ಷಗಳ ಸಂಭ್ರಮ - ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಮಾಸ್ಟರ್‌ಪೀಸ್ ಚಿತ್ರ - ಡಾ ವಿಷ್ಣುವರ್ಧನ್ ಹಾಗೂ ಅಂಬರೀಶ್‌ರಂತಹ ದಿಗ್ಗಜ ನಟರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಸಿನಿಮಾ

Dr Vishnuvardhan starrer Nagarahau celebrates 50 years
ಡಾ ವಿಷ್ಣುವರ್ಧನ್ ಅಭಿನಯದ ನಾಗರಹಾವು ಸಿನಿಮಾಗೆ 50 ವರ್ಷಗಳ ಸಂಭ್ರಮ

ಕನ್ನಡ ಚಿತ್ರರಂಗದಲ್ಲಿ ಇವತ್ತಿಗೂ ಎಂದೂ ಮರೆಯದ ಕ್ಲಾಸಿಕ್ ಸಿನಿಮಾ ಅಂದರೆ ಅದು ನಾಗರಹಾವು ಸಿನಿಮಾ. ಡಾ ವಿಷ್ಣುವರ್ಧನ್ ಹಾಗೂ ಅಂಬರೀಶ್‌ ಅವರಂತಹ ದಿಗ್ಗಜ ನಟರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ. ಕನ್ನಡ ಸಿನಿಮಾರಂಗದ ಚಿತ್ರಬ್ರಹ್ಮ ಅಂತಾ ಕರೆಯಿಸಿಕೊಂಡಿರುವ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಮಾಸ್ಟರ್‌ಪೀಸ್ ಚಿತ್ರ 1972ರ ಡಿಸೆಂಬರ್ 29ರಂದು ನಾಗರಹಾವು ಸಿನಿಮಾ ತೆರೆಗೆ ಬಂದಿತ್ತು. ಇಂದಿಗೆ ಆ ಸಿನಿಮಾ ತೆರೆಕಂಡು ಭರ್ತಿ 50 ವರ್ಷಗಳಾಗಿವೆ.

movie that brought a triangular love story to the screen very elegantly
ಒಂದು ತ್ರಿಕೋನ ಪ್ರೇಮಕಥೆಯನ್ನು ಬಹಳ ಸೊಗಸಾಗಿ ತೆರೆಗೆ ತಂದ ಸಿನಿಮಾ

ತ.ರಾ ಸುಬ್ಬರಾಯರ 3 ಕಾದಂಬರಿಗಳು ಕಥೆ, ಪುಟ್ಟಣ್ಣ ಕಣಗಾಲ್ ದಕ್ಷ ನಿರ್ದೇಶನ ಹಾಗೂ ವಿಜಯ ಭಾಸ್ಕರ್ ಸಂಗೀತ ಚಿತ್ರದ ಜೀವಾಳವಾಗಿತ್ತು. ವಂಶವೃಕ್ಷ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ವಿಷ್ಣುವರ್ಧನ್ ಪದಾರ್ಪಣೆ ಮಾಡಿದರು. ವಿಷ್ಣುವರ್ಧನ್ ಮೂಲ ಹೆಸರು ಸಂಪತ್ ಕುಮಾರ್. ಆದರೆ, ನಾಗರಹಾವು ಚಿತ್ರಕ್ಕಾಗಿ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಂಪತ್ ಕುಮಾರ್ ಹೆಸರು ಬದಲು ವಿಷ್ಣುವರ್ಧನ್ ಅಂತಾ ಚೆಂಜ್​ ಮಾಡಿದರು.

The film introduced legendary actors like Dr Vishnuvardhan and Ambareesh to Kannada cinema
ಡಾ ವಿಷ್ಣುವರ್ಧನ್ ಹಾಗೂ ಅಂಬರೀಶ್‌ರಂತಹ ದಿಗ್ಗಜ ನಟರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ

ಇನ್ನು ನಾಗರಹಾವು ಚಿತ್ರದ ಪ್ರತಿ ಸನ್ನಿವೇಶ, ಹಾಡು ಕನ್ನಡ ಸಿನಿರಸಿಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಬಿಟ್ಟಿದೆ. ಅಷ್ಟರಮಟ್ಟಿಗೆ ಮೋಡಿ ಮಾಡಿದ ಸಿನಿಮಾ ಇದು. 1972ರಲ್ಲಿ ನಾಗರಹಾವು ಸಿನಿಮಾ ತೆರೆಕಂಡು ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಹೊಸ ದಾಖಲೆ ಬರೆದಿತ್ತು. ಇಡೀ ಸಿನಿಮಾ ಚಿತ್ರದುರ್ಗದಲ್ಲಿ ಚಿತ್ರೀಕರಣ ಮಾಡಲಾಗಿತ್ತು.

ಪುಟ್ಟಣ್ಣ ಕಣಗಾಲ್ ನಾಗರಹಾವು ಸಿನಿಮಾದ ಪ್ರತಿ ಪಾತ್ರಕ್ಕೆ ತುಂಬಾನೇ ಪ್ರಾಮುಖ್ಯತೆ ಕೊಟ್ಟಿದ್ದರು. ಚಾಮಯ್ಯ ಮೇಷ್ಟ್ರ ಪಾತ್ರದಲ್ಲಿ ಕೆ. ಎಸ್ ಅಶ್ವತ್ಥ, ರಾಮಾಚಾರಿಯಾಗಿ ವಿಷ್ಣುವರ್ಧನ್, ಕ್ರಿಶ್ಚಿಯನ್ ಪ್ರೇಯಸಿ ಮಾರ್ಗರೇಟ್ ಪಾತ್ರದಲ್ಲಿ ಶುಭ, ರಾಮಾಚಾರಿಯನ್ನು ಪ್ರೀತಿಸುವ ಅಲಮೇಲು ಪಾತ್ರದಲ್ಲಿ ಆರತಿ, ಗರಡಿ ಉಸ್ತಾದ್ ಪಾತ್ರದಲ್ಲಿ ಎಂ.ಪಿ ಶಂಕರ್, ಅಲಮೇಲುನ ರೇಗಿಸುವ ಜಲೀಲನಾಗಿ ಅಂಬರೀಷ್, ಕಾಲೇಜು ಪ್ರಿನ್ಸಿಪಾಲ್ ಆಗಿ ಲೋಕನಾಥ್, ರಾಮಚಾರಿ ತಾಯಿ ಜಯಶ್ರೀ, ದೇವ್ರೇ ದೇವ್ರೇ ಎನ್ನುತ್ತ ರಾಮಾಚಾರಿಯ ಸಾಕು ತಾಯಿ ತುಂಗಮ್ಮ ಆಗಿ ಲೀಲಾವತಿ, ರಾಮಾಚಾರಿಯ ಸ್ನೇಹಿತ ವರದನಾಗಿ ಹಿರಿಯ ನಟ ಶಿವರಾಂ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನದಲ್ಲಿ ಉಳಿದಿದ್ದರು.

ಒಂದು ತ್ರಿಕೋನ ಪ್ರೇಮಕಥೆಯನ್ನು ಬಹಳ ಸೊಗಸಾಗಿ ತೆರೆಗೆ ತರಲಾಗಿತ್ತು. ನಾಗರಹಾವು ಚಿತ್ರದಲ್ಲಿ ವಿಷ್ಣುವರ್ಧನ್‌ಗೆ ಸಿಕ್ಕ ಯಶಸ್ಸು ಅಂತಿಂಥ ಯಶಸ್ಸಲ್ಲ. ಈ ಸಿನಿಮಾ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗೆ ರಿಮೇಕ್ ಆಗಿತ್ತು. ವಿಷ್ಣುವರ್ಧನ್ ಗೆ 10 ಸೂಪರ್ ಹಿಟ್ ಸಿನಿಮಾಗಳಿಂದ ಸಿಗಬಹುದಾದ ಯಶಸ್ಸು ಈ ನಾಗರಹಾವು ಚಿತ್ರದಿಂದ ಸಿಕ್ಕಿತ್ತು.

ಇನ್ನು ಕನ್ನಡದಲ್ಲಿ ಚಿತ್ರರಂಗದ ಎವರ್‌ಗ್ರೀನ್‌ ಸಿನಿಮಾಗಳ ಸಾಲಿನಲ್ಲಿರುವ ನಾಗರಹಾವು ಸಿನಿಮಾಗೆ ಇದೀಗ 50 ವರ್ಷಗಳ ಸಂಭ್ರಮ. ಕನ್ನಡ ಸಿನಿಮಾ ಇತಿಹಾಸದ ಪುಟಗಳಲ್ಲಿ ಒಂದು ಪುಟವನ್ನು ತನ್ನ ಹೆಸರಿನಲ್ಲಿ ಬರೆಸಿಕೊಂಡಿದೆ. ಈ ಸಿನಿಮಾದಲ್ಲಿ ಕೆಲಸ ಮಾಡಿದ ಬಹುತೇಕರು ಒಂದು ನಮ್ಮೊಂದಿಗಿಲ್ಲ.

ಆದರೆ, ಈ ಸಿನಿಮಾವನ್ನು ಮಾತ್ರ ಇನ್ನು 50 ವರ್ಷ ಕಳೆದರೂ ಮರೆಯಲು ಸಾಧ್ಯವಿಲ್ಲ. ಆ ಕಾಲಕ್ಕೆ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಆಗಿದ್ದ ಶ್ರೀ ಈಶ್ವರಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಖ್ಯಾತ ನಿರ್ಮಾಪಕ ಎನ್​. ವೀರಾಸ್ವಾಮಿ ನಾಗರಹಾವು ಸಿನಿಮಾ ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ :ನಾಳೆ ಪದವಿ ಪೂರ್ವ ಸಿನಿಮಾ ಬಿಡುಗಡೆ.. ಚಿತ್ರ ಮೆಚ್ಚಿದ ಕನ್ನಡದ ತಾರೆಯರು

ಕನ್ನಡ ಚಿತ್ರರಂಗದಲ್ಲಿ ಇವತ್ತಿಗೂ ಎಂದೂ ಮರೆಯದ ಕ್ಲಾಸಿಕ್ ಸಿನಿಮಾ ಅಂದರೆ ಅದು ನಾಗರಹಾವು ಸಿನಿಮಾ. ಡಾ ವಿಷ್ಣುವರ್ಧನ್ ಹಾಗೂ ಅಂಬರೀಶ್‌ ಅವರಂತಹ ದಿಗ್ಗಜ ನಟರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ. ಕನ್ನಡ ಸಿನಿಮಾರಂಗದ ಚಿತ್ರಬ್ರಹ್ಮ ಅಂತಾ ಕರೆಯಿಸಿಕೊಂಡಿರುವ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಈ ಮಾಸ್ಟರ್‌ಪೀಸ್ ಚಿತ್ರ 1972ರ ಡಿಸೆಂಬರ್ 29ರಂದು ನಾಗರಹಾವು ಸಿನಿಮಾ ತೆರೆಗೆ ಬಂದಿತ್ತು. ಇಂದಿಗೆ ಆ ಸಿನಿಮಾ ತೆರೆಕಂಡು ಭರ್ತಿ 50 ವರ್ಷಗಳಾಗಿವೆ.

movie that brought a triangular love story to the screen very elegantly
ಒಂದು ತ್ರಿಕೋನ ಪ್ರೇಮಕಥೆಯನ್ನು ಬಹಳ ಸೊಗಸಾಗಿ ತೆರೆಗೆ ತಂದ ಸಿನಿಮಾ

ತ.ರಾ ಸುಬ್ಬರಾಯರ 3 ಕಾದಂಬರಿಗಳು ಕಥೆ, ಪುಟ್ಟಣ್ಣ ಕಣಗಾಲ್ ದಕ್ಷ ನಿರ್ದೇಶನ ಹಾಗೂ ವಿಜಯ ಭಾಸ್ಕರ್ ಸಂಗೀತ ಚಿತ್ರದ ಜೀವಾಳವಾಗಿತ್ತು. ವಂಶವೃಕ್ಷ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ವಿಷ್ಣುವರ್ಧನ್ ಪದಾರ್ಪಣೆ ಮಾಡಿದರು. ವಿಷ್ಣುವರ್ಧನ್ ಮೂಲ ಹೆಸರು ಸಂಪತ್ ಕುಮಾರ್. ಆದರೆ, ನಾಗರಹಾವು ಚಿತ್ರಕ್ಕಾಗಿ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸಂಪತ್ ಕುಮಾರ್ ಹೆಸರು ಬದಲು ವಿಷ್ಣುವರ್ಧನ್ ಅಂತಾ ಚೆಂಜ್​ ಮಾಡಿದರು.

The film introduced legendary actors like Dr Vishnuvardhan and Ambareesh to Kannada cinema
ಡಾ ವಿಷ್ಣುವರ್ಧನ್ ಹಾಗೂ ಅಂಬರೀಶ್‌ರಂತಹ ದಿಗ್ಗಜ ನಟರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಚಿತ್ರ

ಇನ್ನು ನಾಗರಹಾವು ಚಿತ್ರದ ಪ್ರತಿ ಸನ್ನಿವೇಶ, ಹಾಡು ಕನ್ನಡ ಸಿನಿರಸಿಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಬಿಟ್ಟಿದೆ. ಅಷ್ಟರಮಟ್ಟಿಗೆ ಮೋಡಿ ಮಾಡಿದ ಸಿನಿಮಾ ಇದು. 1972ರಲ್ಲಿ ನಾಗರಹಾವು ಸಿನಿಮಾ ತೆರೆಕಂಡು ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಹೊಸ ದಾಖಲೆ ಬರೆದಿತ್ತು. ಇಡೀ ಸಿನಿಮಾ ಚಿತ್ರದುರ್ಗದಲ್ಲಿ ಚಿತ್ರೀಕರಣ ಮಾಡಲಾಗಿತ್ತು.

ಪುಟ್ಟಣ್ಣ ಕಣಗಾಲ್ ನಾಗರಹಾವು ಸಿನಿಮಾದ ಪ್ರತಿ ಪಾತ್ರಕ್ಕೆ ತುಂಬಾನೇ ಪ್ರಾಮುಖ್ಯತೆ ಕೊಟ್ಟಿದ್ದರು. ಚಾಮಯ್ಯ ಮೇಷ್ಟ್ರ ಪಾತ್ರದಲ್ಲಿ ಕೆ. ಎಸ್ ಅಶ್ವತ್ಥ, ರಾಮಾಚಾರಿಯಾಗಿ ವಿಷ್ಣುವರ್ಧನ್, ಕ್ರಿಶ್ಚಿಯನ್ ಪ್ರೇಯಸಿ ಮಾರ್ಗರೇಟ್ ಪಾತ್ರದಲ್ಲಿ ಶುಭ, ರಾಮಾಚಾರಿಯನ್ನು ಪ್ರೀತಿಸುವ ಅಲಮೇಲು ಪಾತ್ರದಲ್ಲಿ ಆರತಿ, ಗರಡಿ ಉಸ್ತಾದ್ ಪಾತ್ರದಲ್ಲಿ ಎಂ.ಪಿ ಶಂಕರ್, ಅಲಮೇಲುನ ರೇಗಿಸುವ ಜಲೀಲನಾಗಿ ಅಂಬರೀಷ್, ಕಾಲೇಜು ಪ್ರಿನ್ಸಿಪಾಲ್ ಆಗಿ ಲೋಕನಾಥ್, ರಾಮಚಾರಿ ತಾಯಿ ಜಯಶ್ರೀ, ದೇವ್ರೇ ದೇವ್ರೇ ಎನ್ನುತ್ತ ರಾಮಾಚಾರಿಯ ಸಾಕು ತಾಯಿ ತುಂಗಮ್ಮ ಆಗಿ ಲೀಲಾವತಿ, ರಾಮಾಚಾರಿಯ ಸ್ನೇಹಿತ ವರದನಾಗಿ ಹಿರಿಯ ನಟ ಶಿವರಾಂ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನದಲ್ಲಿ ಉಳಿದಿದ್ದರು.

ಒಂದು ತ್ರಿಕೋನ ಪ್ರೇಮಕಥೆಯನ್ನು ಬಹಳ ಸೊಗಸಾಗಿ ತೆರೆಗೆ ತರಲಾಗಿತ್ತು. ನಾಗರಹಾವು ಚಿತ್ರದಲ್ಲಿ ವಿಷ್ಣುವರ್ಧನ್‌ಗೆ ಸಿಕ್ಕ ಯಶಸ್ಸು ಅಂತಿಂಥ ಯಶಸ್ಸಲ್ಲ. ಈ ಸಿನಿಮಾ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗೆ ರಿಮೇಕ್ ಆಗಿತ್ತು. ವಿಷ್ಣುವರ್ಧನ್ ಗೆ 10 ಸೂಪರ್ ಹಿಟ್ ಸಿನಿಮಾಗಳಿಂದ ಸಿಗಬಹುದಾದ ಯಶಸ್ಸು ಈ ನಾಗರಹಾವು ಚಿತ್ರದಿಂದ ಸಿಕ್ಕಿತ್ತು.

ಇನ್ನು ಕನ್ನಡದಲ್ಲಿ ಚಿತ್ರರಂಗದ ಎವರ್‌ಗ್ರೀನ್‌ ಸಿನಿಮಾಗಳ ಸಾಲಿನಲ್ಲಿರುವ ನಾಗರಹಾವು ಸಿನಿಮಾಗೆ ಇದೀಗ 50 ವರ್ಷಗಳ ಸಂಭ್ರಮ. ಕನ್ನಡ ಸಿನಿಮಾ ಇತಿಹಾಸದ ಪುಟಗಳಲ್ಲಿ ಒಂದು ಪುಟವನ್ನು ತನ್ನ ಹೆಸರಿನಲ್ಲಿ ಬರೆಸಿಕೊಂಡಿದೆ. ಈ ಸಿನಿಮಾದಲ್ಲಿ ಕೆಲಸ ಮಾಡಿದ ಬಹುತೇಕರು ಒಂದು ನಮ್ಮೊಂದಿಗಿಲ್ಲ.

ಆದರೆ, ಈ ಸಿನಿಮಾವನ್ನು ಮಾತ್ರ ಇನ್ನು 50 ವರ್ಷ ಕಳೆದರೂ ಮರೆಯಲು ಸಾಧ್ಯವಿಲ್ಲ. ಆ ಕಾಲಕ್ಕೆ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಆಗಿದ್ದ ಶ್ರೀ ಈಶ್ವರಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಖ್ಯಾತ ನಿರ್ಮಾಪಕ ಎನ್​. ವೀರಾಸ್ವಾಮಿ ನಾಗರಹಾವು ಸಿನಿಮಾ ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ :ನಾಳೆ ಪದವಿ ಪೂರ್ವ ಸಿನಿಮಾ ಬಿಡುಗಡೆ.. ಚಿತ್ರ ಮೆಚ್ಚಿದ ಕನ್ನಡದ ತಾರೆಯರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.