ETV Bharat / entertainment

ಕಾಂತಾರ ತಂಡಕ್ಕೆ ಶುಭ ಕೋರಿದ ಕೇಂದ್ರ ಸಚಿವ ಅನುರಾಗ್.. ಎರಡನೇ ಬಾರಿ ಸಿನಿಮಾ ನೋಡಿದ ಬಾಹುಬಲಿ

author img

By

Published : Oct 15, 2022, 12:20 PM IST

ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಹೊಂಬಾಳೆ ಫಿಲ್ಮ್ಸ್​​​ ತಂಡದವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ ಹಲವು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ.

central minister anurag takur wishes to kantara team
ಕಾಂತಾರ ತಂಡಕ್ಕೆ ಶುಭ ಕೋರಿದ ಕೇಂದ್ರ ಸಚಿವ ಅನುರಾಗ್ ಠಾಕೂರ್​

ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಟಾಕ್ ಆಗುತ್ತಿರುವ ಸಿನಿಮಾ ಕಾಂತಾರ. ಕಾಂತಾರ ಎಲ್ಲರನ್ನೂ ಕನ್ನಡ ಚಿತ್ರರಂಗದೆಡೆಗೆ ತಿರುಗಿ ನೋಡುವಂತೆ ಮಾಡಿದ್ದು, ಪರಭಾಷೆಗಳಿಗೂ ಡಬ್ಬಿಂಗ್​ ಮಾಡಲಾಗಿದೆ. ರಿಷಬ್​ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ 'ಕಾಂತಾರ' ಹಿಂದಿ ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸುತ್ತಿದೆ. ಈ ಮಧ್ಯೆ, ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಹೊಂಬಾಳೆ ಫಿಲ್ಮ್ಸ್​​​ ತಂಡದವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ ಹಲವು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ.

central minister anurag takur wishes to kantara team
ಕಾಂತಾರ ತಂಡಕ್ಕೆ ಶುಭ ಕೋರಿದ ಕೇಂದ್ರ ಸಚಿವ ಅನುರಾಗ್ ಠಾಕೂರ್​

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಹೊಂಬಾಳೆ ಫಿಲ್ಮ್ಸ್​​ ತಂಡದವರನ್ನು ಭೇಟಿ ಮಾಡಿ ಚಿತ್ರದ ಯಶಸ್ಸಿಗೆ ಶುಭ ಹಾರೈಸಿದ್ದೇನೆ. ಭಾರತವನ್ನು ಜಗತ್ತಿನ ಸಿನಿಮಾ ಹಬ್ ಮಾಡುವ ಯೋಜನೆಗಳನ್ನು ಕೇಳಿ ಸಂತೋಷವಾಗಿದೆ ಎಂದು ಹೇಳಿದ್ದಾರೆ.

central minister anurag takur wishes to kantara team
ಕಾಂತಾರ ಯಶಸ್ಸು

ಸಚಿವರೊಂದಿಗೆ ಸಭೆಯ ನಂತರ ತಮ್ಮ ಅನಿಸಿಕೆ ಹಂಚಿಕೊಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರು, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಬಹಳ ಅದ್ಭುತವಾದ ಮೀಟಿಂಗ್​​ ಭಾಗವಹಿಸುವ ಅವಕಾಶ ಸಿಕ್ಕಿತು. ನಮ್ಮ ಸಂಸ್ಖತಿಯನ್ನು ಸಿನಿಮಾಗಳ ಮೂಲಕ ಸಾರುವ ಮತ್ತು ಭಾರತವನ್ನು ವಿಶ್ವದ ಸಿನಿಮಾ ಹಬ್ ಮಾಡುವ ವಿಷಯಗಳೂ ಸೇರಿದಂತೆ ಸಾಕಷ್ಟು ವಿಷಯಗಳನ್ನು ಅವರೊಂದಿಗೆ ಚರ್ಚಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಅವರೊಂದಿಗೆ ಚೆಲುವೇ ಗೌಡ ಹಾಗೂ ಕಾರ್ತಿಕ್ ಗೌಡ ಸಹ ಹಾಜರಿದ್ದರು.

central minister anurag takur wishes to kantara team
ಇನ್​ಸ್ಟಾಗ್ರಾಮ್​ನಲ್ಲಿ ಅಭಿಪ್ರಾಯ ಹಂಚಿಕೊಂಡ ನಟ ಪ್ರಭಾಸ್

ಇನ್ನೂ ಡಾರ್ಲಿಂಗ್​ ಖ್ಯಾತಿಯ ಬಾಹುಬಲಿ ಪ್ರಭಾಸ್ ಎರಡೆರಡು ಸಲ ಕಾಂತಾರ ಸಿನಿಮಾ ನೋಡಿ ಮೆಚ್ಚಿದ್ದಾರೆ. 'ಕಾಂತಾರ ಚಿತ್ರ ನೋಡಿ ಬಹಳ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ' ಎಂದು ಈ ಮೊದಲು ಸಿನಿಮಾ ನೋಡಿದ ವೇಳೆ ಹಾರೈಸಿದ್ದರು. ಇದೀಗ ಮತ್ತೊಮ್ಮೆ ಸಿನಿಮಾ ನೋಡಿ ಆನಂದಿಸಿದ್ದಾರೆ.

ಇದನ್ನೂ ಓದಿ: ಕೆಜಿಎಫ್​, ಚಾರ್ಲಿ, ಆರ್​ಆರ್​ಆರ್ ದಾಖಲೆ ಬ್ರೇಕ್​ ಮಾಡಿದ ಕಾಂತಾರ

ಎರಡನೇ ಬಾರಿ ಸಿನಿಮಾ ನೋಡಿದ ಪ್ರಭಾಸ್ ಇನ್​ಸ್ಟಾಗ್ರಾಮ್​ನಲ್ಲಿ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ಸಿನಿಮಾವನ್ನು ಎರಡನೇ ಬಾರಿ ನೋಡಿದೆ. ಅಸಾಧಾರಣ ಅನುಭವ. ಗ್ರೇಟ್ ಕಾನ್ಸೆಪ್ಟ್ ಹಾಗೂ ಥ್ರಿಲ್ಲಿಂಗ್ ಕ್ಲೈಮ್ಯಾಕ್ಸ್. ಥಿಯೇಟರ್​ನಲ್ಲಿ ನೋಡಲೇಬೇಕಾದ ಸಿನಿಮಾ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಟಾಕ್ ಆಗುತ್ತಿರುವ ಸಿನಿಮಾ ಕಾಂತಾರ. ಕಾಂತಾರ ಎಲ್ಲರನ್ನೂ ಕನ್ನಡ ಚಿತ್ರರಂಗದೆಡೆಗೆ ತಿರುಗಿ ನೋಡುವಂತೆ ಮಾಡಿದ್ದು, ಪರಭಾಷೆಗಳಿಗೂ ಡಬ್ಬಿಂಗ್​ ಮಾಡಲಾಗಿದೆ. ರಿಷಬ್​ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ 'ಕಾಂತಾರ' ಹಿಂದಿ ಮತ್ತು ತೆಲುಗಿನಲ್ಲೂ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸುತ್ತಿದೆ. ಈ ಮಧ್ಯೆ, ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಹೊಂಬಾಳೆ ಫಿಲ್ಮ್ಸ್​​​ ತಂಡದವರು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿ ಹಲವು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ.

central minister anurag takur wishes to kantara team
ಕಾಂತಾರ ತಂಡಕ್ಕೆ ಶುಭ ಕೋರಿದ ಕೇಂದ್ರ ಸಚಿವ ಅನುರಾಗ್ ಠಾಕೂರ್​

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಹೊಂಬಾಳೆ ಫಿಲ್ಮ್ಸ್​​ ತಂಡದವರನ್ನು ಭೇಟಿ ಮಾಡಿ ಚಿತ್ರದ ಯಶಸ್ಸಿಗೆ ಶುಭ ಹಾರೈಸಿದ್ದೇನೆ. ಭಾರತವನ್ನು ಜಗತ್ತಿನ ಸಿನಿಮಾ ಹಬ್ ಮಾಡುವ ಯೋಜನೆಗಳನ್ನು ಕೇಳಿ ಸಂತೋಷವಾಗಿದೆ ಎಂದು ಹೇಳಿದ್ದಾರೆ.

central minister anurag takur wishes to kantara team
ಕಾಂತಾರ ಯಶಸ್ಸು

ಸಚಿವರೊಂದಿಗೆ ಸಭೆಯ ನಂತರ ತಮ್ಮ ಅನಿಸಿಕೆ ಹಂಚಿಕೊಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರು, ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಬಹಳ ಅದ್ಭುತವಾದ ಮೀಟಿಂಗ್​​ ಭಾಗವಹಿಸುವ ಅವಕಾಶ ಸಿಕ್ಕಿತು. ನಮ್ಮ ಸಂಸ್ಖತಿಯನ್ನು ಸಿನಿಮಾಗಳ ಮೂಲಕ ಸಾರುವ ಮತ್ತು ಭಾರತವನ್ನು ವಿಶ್ವದ ಸಿನಿಮಾ ಹಬ್ ಮಾಡುವ ವಿಷಯಗಳೂ ಸೇರಿದಂತೆ ಸಾಕಷ್ಟು ವಿಷಯಗಳನ್ನು ಅವರೊಂದಿಗೆ ಚರ್ಚಿಸಲಾಯಿತು ಎಂದರು. ಈ ಸಂದರ್ಭದಲ್ಲಿ ಅವರೊಂದಿಗೆ ಚೆಲುವೇ ಗೌಡ ಹಾಗೂ ಕಾರ್ತಿಕ್ ಗೌಡ ಸಹ ಹಾಜರಿದ್ದರು.

central minister anurag takur wishes to kantara team
ಇನ್​ಸ್ಟಾಗ್ರಾಮ್​ನಲ್ಲಿ ಅಭಿಪ್ರಾಯ ಹಂಚಿಕೊಂಡ ನಟ ಪ್ರಭಾಸ್

ಇನ್ನೂ ಡಾರ್ಲಿಂಗ್​ ಖ್ಯಾತಿಯ ಬಾಹುಬಲಿ ಪ್ರಭಾಸ್ ಎರಡೆರಡು ಸಲ ಕಾಂತಾರ ಸಿನಿಮಾ ನೋಡಿ ಮೆಚ್ಚಿದ್ದಾರೆ. 'ಕಾಂತಾರ ಚಿತ್ರ ನೋಡಿ ಬಹಳ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ' ಎಂದು ಈ ಮೊದಲು ಸಿನಿಮಾ ನೋಡಿದ ವೇಳೆ ಹಾರೈಸಿದ್ದರು. ಇದೀಗ ಮತ್ತೊಮ್ಮೆ ಸಿನಿಮಾ ನೋಡಿ ಆನಂದಿಸಿದ್ದಾರೆ.

ಇದನ್ನೂ ಓದಿ: ಕೆಜಿಎಫ್​, ಚಾರ್ಲಿ, ಆರ್​ಆರ್​ಆರ್ ದಾಖಲೆ ಬ್ರೇಕ್​ ಮಾಡಿದ ಕಾಂತಾರ

ಎರಡನೇ ಬಾರಿ ಸಿನಿಮಾ ನೋಡಿದ ಪ್ರಭಾಸ್ ಇನ್​ಸ್ಟಾಗ್ರಾಮ್​ನಲ್ಲಿ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ಸಿನಿಮಾವನ್ನು ಎರಡನೇ ಬಾರಿ ನೋಡಿದೆ. ಅಸಾಧಾರಣ ಅನುಭವ. ಗ್ರೇಟ್ ಕಾನ್ಸೆಪ್ಟ್ ಹಾಗೂ ಥ್ರಿಲ್ಲಿಂಗ್ ಕ್ಲೈಮ್ಯಾಕ್ಸ್. ಥಿಯೇಟರ್​ನಲ್ಲಿ ನೋಡಲೇಬೇಕಾದ ಸಿನಿಮಾ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.