ETV Bharat / entertainment

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಬಿಡುಗಡೆ ಆಗಬಾರದೆಂದು ನ್ಯಾಯಾಲಯದ ಮೆಟ್ಟಿಲೇರಿದ ನಟಿ ರಮ್ಯಾ!

author img

By

Published : Jul 19, 2023, 5:35 PM IST

Updated : Jul 19, 2023, 8:03 PM IST

ರಮ್ಯಾ ಕೆಲ ವರ್ಷಗಳ ಬ್ರೇಕ್​ ನಂತರ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾದಲ್ಲಿ ನಟಿಸಿದ್ರು. ಈಗ ತಾವು ನಟಿಸಿರೋ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಬಾರದು ಎಂದು ನೋಟಿಸ್ ಕಳುಸಿದ್ದಾರೆ.

actress ramya
ನಟಿ ರಮ್ಯಾ

ರಂಗಭೂಮಿ ಕಲಾವಿದರು ಅಭಿನಯಿಸಿರುವ,‌ ನಿತಿನ್ ಕೃಷ್ಣಮೂರ್ತಿ ಆ್ಯಕ್ಷನ್​ ಕಟ್​​ ಹೇಳಿರುವ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾಗೆ ಸಮಸ್ಯೆ ಎದುರಾಗಿದೆ‌. ಈ ಸಿನಿಮಾ ಬಿಡುಗಡೆ ಆಗಬಾರದೆಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ‌.

ತಾವೇ ಪ್ರೀತಿಯಿಂದ ನಟಿಸಿದ ಸಿನಿಮಾಗೆ ಮೋಹಕ ತಾರೆ ರಮ್ಯಾ ಸ್ಟೇ ತಂದಿದ್ದಾರೆ. ಇನ್ನೇನು ಎರಡು ದಿನ ಕಳೆದರೆ ಸಿನಿಮಾ ತೆರೆ ಕಾಣಬೇಕಿದೆ. ಇದೇ ಜುಲೈ 21ರಂದು 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರ ತಂಡದಿಂದ ಘೋಷಣೆಯಾಗಿದೆ. ಆದ್ರೀಗ ಚಿತ್ರ ಬಿಡುಗಡೆ ಆಗಬಾರದೆಂದು ನಟಿ ರಮ್ಯಾ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈ ಚಿತ್ರದ ಸ್ಪೆಷಲ್​ ರೋಲ್​ನಲ್ಲಿ ರಮ್ಯಾ ಅವರು ನಟಿಸಿದ್ದು, ಇದೀಗ ತಮ್ಮ ಒಪ್ಪಿಗೆ ಇಲ್ಲದೇ ಯಾವ ದೃಶ್ಯವನ್ನೂ ಬಳಸಬಾರದು ಎಂದು ಕಮರ್ಷಿಯಲ್ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ನನ್ನ ಅನುಮತಿ ಇಲ್ಲದೇ ತಮ್ಮ ದೃಶ್ಯಗಳನ್ನು ಬಳಸಿದ್ರೆ 1 ಕೋಟಿ ರೂ. ಪರಿಹಾರ ಕೊಡುವಂತೆ ಕೇಸ್ ಹಾಕುವುದಾಗಿ ರಮ್ಯಾ ಸೂಚನೆ ನೀಡಿದ್ದಾರೆ. ಕರ್ಮಷಿಯಲ್ ಕೋರ್ಟ್​​ನಲ್ಲಿ ಸ್ವತಃ ರಮ್ಯಾ ಅವರು ದಾವೆ ಹೂಡಿ ನೋಟಿಸ್ ಜಾರಿ ಮಾಡಿದ್ದಾರೆ.

ನಿತಿನ್ ಕೃಷ್ಣಮೂರ್ತಿ ಆ್ಯಕ್ಷನ್ ಕಟ್ ಹೇಳಿರೋ ಸಿನಿಮಾದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಗಂತ್, ರಮ್ಯಾ ಸೇರಿದಂತೆ ಹಲವರು ಗೆಸ್ಟ್ ರೋಲ್​ನಲ್ಲಿ ನಟಿಸಿದ್ದಾರೆ. ಕೆಲ ದೃಶ್ಯಗಳಲ್ಲಿ ರಮ್ಯಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಮೋಷನ್​​ಗೆ ಬಳಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಚಿತ್ರತಂಡಕ್ಕೆ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಪ್ರಾಜೆಕ್ಟ್ ಕೆ ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ.. ಕುತೂಹಲ ಹೆಚ್ಚಿಸಿದ ಪ್ರಭಾಸ್​ ಫಸ್ಟ್ ಲುಕ್‌

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಅವರೇ ಕಥೆ ಬರೆದಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮ್ಸ್​ ಬ್ಯಾನರ್ ಅಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಬವಾಲ್ ಬಿಡುಗಡೆಗೆ ಕ್ಷಣಗಣನೆ: ಸೋಷಿಯಲ್​ ಮೀಡಿಯಾದಲ್ಲಿ ಬಿಸಿಯೇರಿಸಿದ ಬಾಲಿವುಡ್​ ಬ್ಯೂಟಿ ಜಾನ್ವಿ ಕಪೂರ್

ಪ್ರತಿ ಬಾರಿ ಯೂನಿಕ್ ಕಾನ್ಸೆಪ್ಟ್​​ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಸಿನಿಮಾ ಇದೇ ಜುಲೈ 21ಕ್ಕೆ ತೆರೆ ಕಾಣಲು ಸಜ್ಜಾಗಿದೆ.

ರಂಗಭೂಮಿ ಕಲಾವಿದರು ಅಭಿನಯಿಸಿರುವ,‌ ನಿತಿನ್ ಕೃಷ್ಣಮೂರ್ತಿ ಆ್ಯಕ್ಷನ್​ ಕಟ್​​ ಹೇಳಿರುವ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾಗೆ ಸಮಸ್ಯೆ ಎದುರಾಗಿದೆ‌. ಈ ಸಿನಿಮಾ ಬಿಡುಗಡೆ ಆಗಬಾರದೆಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ನ್ಯಾಯಾಲಯದಿಂದ ಸ್ಟೇ ತಂದಿದ್ದಾರೆ‌.

ತಾವೇ ಪ್ರೀತಿಯಿಂದ ನಟಿಸಿದ ಸಿನಿಮಾಗೆ ಮೋಹಕ ತಾರೆ ರಮ್ಯಾ ಸ್ಟೇ ತಂದಿದ್ದಾರೆ. ಇನ್ನೇನು ಎರಡು ದಿನ ಕಳೆದರೆ ಸಿನಿಮಾ ತೆರೆ ಕಾಣಬೇಕಿದೆ. ಇದೇ ಜುಲೈ 21ರಂದು 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರ ತಂಡದಿಂದ ಘೋಷಣೆಯಾಗಿದೆ. ಆದ್ರೀಗ ಚಿತ್ರ ಬಿಡುಗಡೆ ಆಗಬಾರದೆಂದು ನಟಿ ರಮ್ಯಾ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈ ಚಿತ್ರದ ಸ್ಪೆಷಲ್​ ರೋಲ್​ನಲ್ಲಿ ರಮ್ಯಾ ಅವರು ನಟಿಸಿದ್ದು, ಇದೀಗ ತಮ್ಮ ಒಪ್ಪಿಗೆ ಇಲ್ಲದೇ ಯಾವ ದೃಶ್ಯವನ್ನೂ ಬಳಸಬಾರದು ಎಂದು ಕಮರ್ಷಿಯಲ್ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ನನ್ನ ಅನುಮತಿ ಇಲ್ಲದೇ ತಮ್ಮ ದೃಶ್ಯಗಳನ್ನು ಬಳಸಿದ್ರೆ 1 ಕೋಟಿ ರೂ. ಪರಿಹಾರ ಕೊಡುವಂತೆ ಕೇಸ್ ಹಾಕುವುದಾಗಿ ರಮ್ಯಾ ಸೂಚನೆ ನೀಡಿದ್ದಾರೆ. ಕರ್ಮಷಿಯಲ್ ಕೋರ್ಟ್​​ನಲ್ಲಿ ಸ್ವತಃ ರಮ್ಯಾ ಅವರು ದಾವೆ ಹೂಡಿ ನೋಟಿಸ್ ಜಾರಿ ಮಾಡಿದ್ದಾರೆ.

ನಿತಿನ್ ಕೃಷ್ಣಮೂರ್ತಿ ಆ್ಯಕ್ಷನ್ ಕಟ್ ಹೇಳಿರೋ ಸಿನಿಮಾದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಗಂತ್, ರಮ್ಯಾ ಸೇರಿದಂತೆ ಹಲವರು ಗೆಸ್ಟ್ ರೋಲ್​ನಲ್ಲಿ ನಟಿಸಿದ್ದಾರೆ. ಕೆಲ ದೃಶ್ಯಗಳಲ್ಲಿ ರಮ್ಯಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಮೋಷನ್​​ಗೆ ಬಳಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಚಿತ್ರತಂಡಕ್ಕೆ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಪ್ರಾಜೆಕ್ಟ್ ಕೆ ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ.. ಕುತೂಹಲ ಹೆಚ್ಚಿಸಿದ ಪ್ರಭಾಸ್​ ಫಸ್ಟ್ ಲುಕ್‌

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಅವರೇ ಕಥೆ ಬರೆದಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮ್ಸ್​ ಬ್ಯಾನರ್ ಅಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ಬವಾಲ್ ಬಿಡುಗಡೆಗೆ ಕ್ಷಣಗಣನೆ: ಸೋಷಿಯಲ್​ ಮೀಡಿಯಾದಲ್ಲಿ ಬಿಸಿಯೇರಿಸಿದ ಬಾಲಿವುಡ್​ ಬ್ಯೂಟಿ ಜಾನ್ವಿ ಕಪೂರ್

ಪ್ರತಿ ಬಾರಿ ಯೂನಿಕ್ ಕಾನ್ಸೆಪ್ಟ್​​ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಸಿನಿಮಾ ಇದೇ ಜುಲೈ 21ಕ್ಕೆ ತೆರೆ ಕಾಣಲು ಸಜ್ಜಾಗಿದೆ.

Last Updated : Jul 19, 2023, 8:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.