ETV Bharat / entertainment

ಪ್ಯಾನ್ ಇಂಡಿಯಾ ಸಿನಿಮಾ 'ಮಂಗಳಾವರಂ'ನಲ್ಲಿ ಕಾಂತಾರ ಚಿತ್ರದ ಸಂಗೀತ ನಿರ್ದೇಶಕ

author img

By

Published : Mar 1, 2023, 2:14 PM IST

ನಿರ್ದೇಶಕ ಅಜಯ್​ ಭೂಪತಿ ಅವರ ಮುಂದಿನ ಚಿತ್ರ ಮಂಗಳಾವರಂನಲ್ಲಿ ಕಾಂತಾರ ಸಿನಿಮಾದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕೆಲಸ ಮಾಡಲಿದ್ದಾರೆ.

mangalavaram
ಮಂಗಳಾವರಂ

ಕನ್ನಡದ ಕೆಲ ಚಿತ್ರಗಳು ಭಾರತೀಯ ಚಿತ್ರರಂಗ ಮಾತ್ರವಲ್ಲದೇ ವಿಶ್ವಾದ್ಯಂತ ಸಿನಿ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಕೆಲ ನಟರು ಹಾಗೂ ತಂತ್ರಜ್ಞಾನರಿಗೆ ಪರಭಾಷೆಯ ಸಿನಿಮಾಗಳಿಂದ ಭರ್ಜರಿ ಆಫರ್​ಗಳು ಬರ್ತಾ ಇವೆ. ಕಾಂತಾರ ಸಿನಿಮಾದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮಂಗಳಾವರಂ ಎಂಬ ಸಿನಿಮಾ ಮುಖಾಂತರ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಆರ್ ಎಕ್ಸ್ 100 ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದ ನಿರ್ದೇಶಕ ಅಜಯ್​ ಭೂಪತಿ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಉತ್ತರವಾಗಿ, 'ಮಂಗಳಾವರಂ' ಎಂಬ ಹೊಸ ಚಿತ್ರವನ್ನು ಅವರು ಘೋಷಿಸಿದ್ದು, ಚಿತ್ರದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆಯಾಗಿದೆ.

'ಮಂಗಳಾವರಂ' ಸಿನಿಮಾವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್​ ಹಾಗೂ ಅಜಯ್​ ಭೂಪತಿ ಅವರ ಎ ಕ್ರಿಯೇಟಿವ್​ ವರ್ಕ್ಸ್​ ಸೇರಿಕೊಂಡು ನಿರ್ಮಿಸುತ್ತಿವೆ. ಇಲ್ಲಿಯ ತನಕ ನಿರ್ದೇಶಕರಾಗಿದ್ದ ಅಜಯ್​ ಭೂಪತಿ ಅವರು ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರ ಬರೀ ತೆಲುಗು ಭಾಷೆಗಷ್ಟೇ ಸೀಮಿತವಲ್ಲ. ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿ ಕನ್ನಡ ಮತ್ತು ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್​ಆಗಲಿದೆ.

mangalavaram
ಮಂಗಳಾವರಂ ಚಿತ್ರದ ಪೋಸ್ಟರ್​

ಇದನ್ನೂ ಓದಿ: ಈ ದಿನಾಂಕದಂದೇ ಅನಾವರಣಗೊಳ್ಳಲಿದೆ 'ಪುಷ್ಪ: ದಿ ರೂಲ್​​' ಮೊದಲ ನೋಟ

'ಮಂಗಳಾವರಂ' ವಿಭಿನ್ನ ಚಿತ್ರ ಎಂದು ಬಣ್ಣಿಸುವ ಅಜಯ್​, 'ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಸಿನಿಮಾದಲ್ಲಿ ಒಟ್ಟು 30 ಪಾತ್ರಗಳಿವೆ. ಪ್ರತಿ ಪಾತ್ರಗಳು ಮುಖ್ಯವಾಗಿದ್ದು ಎಂದು ಹೇಳಿದ್ದಾರೆ.

ಇದೊಂದು ಪಕ್ಕಾ ದಕ್ಷಿಣ ಭಾರತದ ಚಿತ್ರ ಎನ್ನುವ ನಿರ್ಮಾಪಕರಾದ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮ, 'ಆರ್​ ಎಕ್ಸ್ 100 ಚಿತ್ರದಂತೆಯೇ ಈ ಚಿತ್ರದ ಮೂಲಕವೂ ಅಜಯ್​ ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್​ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕಥೆ ಅದ್ಭುತವಾಗಿ ರೂಪುಗೊಂಡಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಾರಂಭವಾಗಿದ್ದು, ಸದ್ಯದಲ್ಲೇ ಕಲಾವಿದರ ಆಯ್ಕೆ ಅಂತಿಮವಾಗಲಿದೆ' ಎಂದಿದ್ದಾರೆ.

'ಮಂಗಳಾವರಂ' ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಅವರು ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣ ಇದೆ. ಜೊತೆಗೆ ರಘು ಕುಲಕರ್ಣಿ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜೂ.ಎನ್​ಟಿಆರ್​ ಅನುಪಸ್ಥಿತಿ: ಹೆಚ್‌ಸಿಎ ಸ್ಪಷ್ಟನೆ ಹೀಗಿದೆ!

ಕನ್ನಡದ ಕೆಲ ಚಿತ್ರಗಳು ಭಾರತೀಯ ಚಿತ್ರರಂಗ ಮಾತ್ರವಲ್ಲದೇ ವಿಶ್ವಾದ್ಯಂತ ಸಿನಿ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಕೆಲ ನಟರು ಹಾಗೂ ತಂತ್ರಜ್ಞಾನರಿಗೆ ಪರಭಾಷೆಯ ಸಿನಿಮಾಗಳಿಂದ ಭರ್ಜರಿ ಆಫರ್​ಗಳು ಬರ್ತಾ ಇವೆ. ಕಾಂತಾರ ಸಿನಿಮಾದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮಂಗಳಾವರಂ ಎಂಬ ಸಿನಿಮಾ ಮುಖಾಂತರ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಆರ್ ಎಕ್ಸ್ 100 ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದ ನಿರ್ದೇಶಕ ಅಜಯ್​ ಭೂಪತಿ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಉತ್ತರವಾಗಿ, 'ಮಂಗಳಾವರಂ' ಎಂಬ ಹೊಸ ಚಿತ್ರವನ್ನು ಅವರು ಘೋಷಿಸಿದ್ದು, ಚಿತ್ರದ ಪೋಸ್ಟರ್​ ಇತ್ತೀಚೆಗೆ ಬಿಡುಗಡೆಯಾಗಿದೆ.

'ಮಂಗಳಾವರಂ' ಸಿನಿಮಾವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್​ ಹಾಗೂ ಅಜಯ್​ ಭೂಪತಿ ಅವರ ಎ ಕ್ರಿಯೇಟಿವ್​ ವರ್ಕ್ಸ್​ ಸೇರಿಕೊಂಡು ನಿರ್ಮಿಸುತ್ತಿವೆ. ಇಲ್ಲಿಯ ತನಕ ನಿರ್ದೇಶಕರಾಗಿದ್ದ ಅಜಯ್​ ಭೂಪತಿ ಅವರು ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರ ಬರೀ ತೆಲುಗು ಭಾಷೆಗಷ್ಟೇ ಸೀಮಿತವಲ್ಲ. ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿ ಕನ್ನಡ ಮತ್ತು ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್​ಆಗಲಿದೆ.

mangalavaram
ಮಂಗಳಾವರಂ ಚಿತ್ರದ ಪೋಸ್ಟರ್​

ಇದನ್ನೂ ಓದಿ: ಈ ದಿನಾಂಕದಂದೇ ಅನಾವರಣಗೊಳ್ಳಲಿದೆ 'ಪುಷ್ಪ: ದಿ ರೂಲ್​​' ಮೊದಲ ನೋಟ

'ಮಂಗಳಾವರಂ' ವಿಭಿನ್ನ ಚಿತ್ರ ಎಂದು ಬಣ್ಣಿಸುವ ಅಜಯ್​, 'ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಸಿನಿಮಾದಲ್ಲಿ ಒಟ್ಟು 30 ಪಾತ್ರಗಳಿವೆ. ಪ್ರತಿ ಪಾತ್ರಗಳು ಮುಖ್ಯವಾಗಿದ್ದು ಎಂದು ಹೇಳಿದ್ದಾರೆ.

ಇದೊಂದು ಪಕ್ಕಾ ದಕ್ಷಿಣ ಭಾರತದ ಚಿತ್ರ ಎನ್ನುವ ನಿರ್ಮಾಪಕರಾದ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮ, 'ಆರ್​ ಎಕ್ಸ್ 100 ಚಿತ್ರದಂತೆಯೇ ಈ ಚಿತ್ರದ ಮೂಲಕವೂ ಅಜಯ್​ ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್​ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕಥೆ ಅದ್ಭುತವಾಗಿ ರೂಪುಗೊಂಡಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಾರಂಭವಾಗಿದ್ದು, ಸದ್ಯದಲ್ಲೇ ಕಲಾವಿದರ ಆಯ್ಕೆ ಅಂತಿಮವಾಗಲಿದೆ' ಎಂದಿದ್ದಾರೆ.

'ಮಂಗಳಾವರಂ' ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಅವರು ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣ ಇದೆ. ಜೊತೆಗೆ ರಘು ಕುಲಕರ್ಣಿ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜೂ.ಎನ್​ಟಿಆರ್​ ಅನುಪಸ್ಥಿತಿ: ಹೆಚ್‌ಸಿಎ ಸ್ಪಷ್ಟನೆ ಹೀಗಿದೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.