ETV Bharat / entertainment

'ಗಂಟುಮೂಟೆ' ಹೀರೋ ನಟನೆಯ ಹೊಸ ಚಿತ್ರದ ಶೂಟಿಂಗ್ ಕಂಪ್ಲೀಟ್: ಟೈಟಲ್ ಏನು ಗೊತ್ತಾ?

author img

By

Published : Jun 12, 2023, 11:06 AM IST

Updated : Jun 12, 2023, 12:46 PM IST

ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ 'ಸಪ್ಲೆಯರ್ ಶಂಕರ' ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ನಿಶ್ಚಿತ್ ಕೊರೋಡಿ ಈ ಚಿತ್ರದ ನಾಯಕ.

Gantumoote hero starrer new movie shooting complete
'ಗಂಟುಮೂಟೆ' ಹೀರೋ ನಟನೆಯ ಹೊಸ ಚಿತ್ರ

ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ನಾಯಕ ನಿಶ್ಚಿತ್ ಕೊರೋಡಿ 'ಸಪ್ಲೆಯರ್ ಶಂಕರ' ಎಂಬ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ.

Gantumoote hero Nishchit
ನಿಶ್ಚಿತ್ ಕೊರೋಡಿ

ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ 'ಸಪ್ಲೆಯರ್ ಶಂಕರ' ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಟೈಟಲ್ ಹೇಳುವಂತೆ ಒಬ್ಬ ಬಾರ್ Supplier ಸುತ್ತಾ ಇಡೀ ಸಿನಿಮಾ ಸಾಗುತ್ತದೆ. ನಿಶ್ಚಿತ್ ಅವರಿಗೆ ಜೋಡಿಯಾಗಿ ಲಗೋರಿ ಸಿನಿಮಾ ಖ್ಯಾತಿಯ ದೀಪಿಕಾ ಆರಾಧ್ಯ ನಟಿಸಿದ್ದಾರೆ. ಗೋಪಾಲ ಕೃಷ್ಣ ದೇಶಪಾಂಡೆ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ: ಮಧುರ ಪ್ರೇಮಕಥೆಯೊಂದಿಗೆ 'ಗಂಟುಮೂಟೆ' ಹೊತ್ಕೊಂಡ ಬಂದ ತೇಜು ಬೆಳವಾಡಿ

Supplier ಶಂಕರ ಸಿನಿಮಾಗೆ ರಂಜಿತ್, ಕಥೆ , ಚಿತ್ರಕಥೆ, ಸಂಭಾಷಣೆ ಜತೆಗೆ ಸಾಹಿತ್ಯದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

Gantumoote hero starrer new movie shooting complete
ನಿಶ್ಚಿತ್ ಕೊರೋಡಿ ಹಾಗೂ ದೀಪಿಕಾ ಆರಾಧ್ಯ

ರವಿ ಬಸ್ರೂರ್ ಬಳಿ ಕೆಲಸ ಮಾಡಿರುವ ಆರ್.ಬಿ.ಭರತ್ ಸಂಗೀತ ನೀಡಿದ್ದಾರೆ. ಸತೀಶ್ ಚಂದ್ರಯ್ಯ ಸಂಕಲನ, ಸತೀಶ್ ಕುಮಾರ್.ಎ ಛಾಯಾಗ್ರಹಣ, ಬಾಲಾಜಿ ಕಲಾ ನಿರ್ದೇಶನ ಈ ಸಿನಿಮಾಕ್ಕಿದೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರವು ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಫಿಲಂ ಫೆಸ್ಟಿವಲ್​​​​​​​​ಗೆ ಹೊರಟ ರೂಪಾರಾವ್​ರ ‘ಗಂಟುಮೂಟೆ’

'ಗಂಟುಮೂಟೆ' ಸಿನಿಮಾದ ಬಗ್ಗೆ ಒಂದಿಷ್ಟು: ರಿಲೀಸ್​​​​​​​​​ಗೂ ಮುಂಚೆ ವಿದೇಶಗಳಲ್ಲಿ ಪ್ರದರ್ಶನಗೊಂಡಿರುವ 'ಗಂಟುಮೂಟೆ' ಸಿನಿಮಾ 2019ರ ಅಕ್ಟೋಬರ್ 18ರಂದು ತೆರೆ ಕಂಡಿತ್ತು. 90ರ ದಶಕದಲ್ಲಿ 16 ವರ್ಷದ ಹುಡುಗಿಯೊಬ್ಬಳ ವಯಸ್ಸಿನ ಕಥೆಯನ್ನು ಸಿನಿಮಾ ಒಳಗೊಂಡಿದೆ. ಈ ಸಿನಿಮಾ ನ್ಯೂಯಾರ್ಕ್-ಇಂಡಿಯನ್ ಚಲನಚಿತ್ರೋತ್ಸವದಲ್ಲಿ, ಬೆಸ್ಟ್ ಸ್ಕ್ರೀನ್ ಪ್ಲೇ ಪ್ರಶಸ್ತಿ ಪಡೆದುಕೊಂಡಿದೆ. ಕೆನಡಾ, ಆಸ್ಟ್ರೇಲಿಯಾ, ಯುಎಸ್​​​​ಎ, ಇಟಲಿ ಸೇರಿದಂತೆ ಹಲವಾರು ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆ ಪಡೆದಿದೆ.

ಇಷ್ಟೆಲ್ಲ ವಿಶೇಷತೆ ಹೊಂದಿರುವ 'ಗಂಟುಮೂಟೆ' ಸಿನಿಮಾವನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಿರ್ದೇಶಕಿ ರೂಪಾರಾವ್ ಹೇಳಿದ್ದರು. ಬೆಳವಾಡಿ ಕುಟುಂಬದ ಕುಡಿ, ತೇಜು ಬೆಳವಾಡಿ ಈ ಚಿತ್ರದಲ್ಲಿ ಹದಿಹರೆಯದ ಮೀರಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಾನಾಯಿತು ತನ್ನ ಪಾಡಾಯಿತು ಎಂದು ಇರುತ್ತಿದ್ದ ಹುಡುಗ ಹೇಗೆ ಪ್ರೀತಿಯಲ್ಲಿ ಬೀಳುತ್ತಾನೆ ಎಂಬ ಪಾತ್ರದಲ್ಲಿ ನಿಶ್ಚಿತ್ ಕೊರೋಡಿ ನಟಿಸಿದ್ದಾರೆ.

ಇದನ್ನೂ ಓದಿ: ಅಪ್ಪಟ ಕನ್ನಡ ಶೀರ್ಷಿಕೆ ಹೊಂದಿರುವ 'ಗಂಟುಮೂಟೆ' ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿ

ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ನಾಯಕ ನಿಶ್ಚಿತ್ ಕೊರೋಡಿ 'ಸಪ್ಲೆಯರ್ ಶಂಕರ' ಎಂಬ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ.

Gantumoote hero Nishchit
ನಿಶ್ಚಿತ್ ಕೊರೋಡಿ

ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ 'ಸಪ್ಲೆಯರ್ ಶಂಕರ' ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಟೈಟಲ್ ಹೇಳುವಂತೆ ಒಬ್ಬ ಬಾರ್ Supplier ಸುತ್ತಾ ಇಡೀ ಸಿನಿಮಾ ಸಾಗುತ್ತದೆ. ನಿಶ್ಚಿತ್ ಅವರಿಗೆ ಜೋಡಿಯಾಗಿ ಲಗೋರಿ ಸಿನಿಮಾ ಖ್ಯಾತಿಯ ದೀಪಿಕಾ ಆರಾಧ್ಯ ನಟಿಸಿದ್ದಾರೆ. ಗೋಪಾಲ ಕೃಷ್ಣ ದೇಶಪಾಂಡೆ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ: ಮಧುರ ಪ್ರೇಮಕಥೆಯೊಂದಿಗೆ 'ಗಂಟುಮೂಟೆ' ಹೊತ್ಕೊಂಡ ಬಂದ ತೇಜು ಬೆಳವಾಡಿ

Supplier ಶಂಕರ ಸಿನಿಮಾಗೆ ರಂಜಿತ್, ಕಥೆ , ಚಿತ್ರಕಥೆ, ಸಂಭಾಷಣೆ ಜತೆಗೆ ಸಾಹಿತ್ಯದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದಾರೆ.

Gantumoote hero starrer new movie shooting complete
ನಿಶ್ಚಿತ್ ಕೊರೋಡಿ ಹಾಗೂ ದೀಪಿಕಾ ಆರಾಧ್ಯ

ರವಿ ಬಸ್ರೂರ್ ಬಳಿ ಕೆಲಸ ಮಾಡಿರುವ ಆರ್.ಬಿ.ಭರತ್ ಸಂಗೀತ ನೀಡಿದ್ದಾರೆ. ಸತೀಶ್ ಚಂದ್ರಯ್ಯ ಸಂಕಲನ, ಸತೀಶ್ ಕುಮಾರ್.ಎ ಛಾಯಾಗ್ರಹಣ, ಬಾಲಾಜಿ ಕಲಾ ನಿರ್ದೇಶನ ಈ ಸಿನಿಮಾಕ್ಕಿದೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರವು ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಫಿಲಂ ಫೆಸ್ಟಿವಲ್​​​​​​​​ಗೆ ಹೊರಟ ರೂಪಾರಾವ್​ರ ‘ಗಂಟುಮೂಟೆ’

'ಗಂಟುಮೂಟೆ' ಸಿನಿಮಾದ ಬಗ್ಗೆ ಒಂದಿಷ್ಟು: ರಿಲೀಸ್​​​​​​​​​ಗೂ ಮುಂಚೆ ವಿದೇಶಗಳಲ್ಲಿ ಪ್ರದರ್ಶನಗೊಂಡಿರುವ 'ಗಂಟುಮೂಟೆ' ಸಿನಿಮಾ 2019ರ ಅಕ್ಟೋಬರ್ 18ರಂದು ತೆರೆ ಕಂಡಿತ್ತು. 90ರ ದಶಕದಲ್ಲಿ 16 ವರ್ಷದ ಹುಡುಗಿಯೊಬ್ಬಳ ವಯಸ್ಸಿನ ಕಥೆಯನ್ನು ಸಿನಿಮಾ ಒಳಗೊಂಡಿದೆ. ಈ ಸಿನಿಮಾ ನ್ಯೂಯಾರ್ಕ್-ಇಂಡಿಯನ್ ಚಲನಚಿತ್ರೋತ್ಸವದಲ್ಲಿ, ಬೆಸ್ಟ್ ಸ್ಕ್ರೀನ್ ಪ್ಲೇ ಪ್ರಶಸ್ತಿ ಪಡೆದುಕೊಂಡಿದೆ. ಕೆನಡಾ, ಆಸ್ಟ್ರೇಲಿಯಾ, ಯುಎಸ್​​​​ಎ, ಇಟಲಿ ಸೇರಿದಂತೆ ಹಲವಾರು ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು ಮೆಚ್ಚುಗೆ ಪಡೆದಿದೆ.

ಇಷ್ಟೆಲ್ಲ ವಿಶೇಷತೆ ಹೊಂದಿರುವ 'ಗಂಟುಮೂಟೆ' ಸಿನಿಮಾವನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಿರ್ದೇಶಕಿ ರೂಪಾರಾವ್ ಹೇಳಿದ್ದರು. ಬೆಳವಾಡಿ ಕುಟುಂಬದ ಕುಡಿ, ತೇಜು ಬೆಳವಾಡಿ ಈ ಚಿತ್ರದಲ್ಲಿ ಹದಿಹರೆಯದ ಮೀರಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಾನಾಯಿತು ತನ್ನ ಪಾಡಾಯಿತು ಎಂದು ಇರುತ್ತಿದ್ದ ಹುಡುಗ ಹೇಗೆ ಪ್ರೀತಿಯಲ್ಲಿ ಬೀಳುತ್ತಾನೆ ಎಂಬ ಪಾತ್ರದಲ್ಲಿ ನಿಶ್ಚಿತ್ ಕೊರೋಡಿ ನಟಿಸಿದ್ದಾರೆ.

ಇದನ್ನೂ ಓದಿ: ಅಪ್ಪಟ ಕನ್ನಡ ಶೀರ್ಷಿಕೆ ಹೊಂದಿರುವ 'ಗಂಟುಮೂಟೆ' ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿ

Last Updated : Jun 12, 2023, 12:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.