ETV Bharat / entertainment

ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಶಂಕರ್ ಹುಟ್ಟು ಹಬ್ಬಕ್ಕೆ ಸಿಕ್ತು ಭರ್ಜರಿ ಉಡುಗೊರೆ

author img

By

Published : May 25, 2023, 10:41 PM IST

ನಟ ನವೀನ್ ಶಂಕರ್ ಅವರು ಕೇಕ್ ಕಟ್ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ನವೀನ್ ಶಂಕರ್ ಹುಟ್ಟು ಹಬ್ಬ
ನವೀನ್ ಶಂಕರ್ ಹುಟ್ಟು ಹಬ್ಬ

ಗುಳ್ಟು ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವವರು ನಟ ನವೀನ್ ಶಂಕರ್. ಇತ್ತೀಚೆಗೆ ಹೊಯ್ಸಳ ಸಿನಿಮಾದಲ್ಲಿ ಧನಂಜಯ್ ಎದುರು ಖಡಕ್ ವಿಲನ್ ಆಗಿ ಅಬ್ಬರಿಸಿ ಗಮನ ಸೆಳೆದಿರೋ ನವೀನ್ ಶಂಕರ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳ ಜೊತೆ ನವೀನ್ ಶಂಕರ್ ಕೇಕ್ ಕಟ್ ಮಾಡುವ ಮೂಲಕ ತಮ್ಮ ಬರ್ತಡೇ ಆಚರಿಸಿಕೊಂಡಿದ್ದಾರೆ.

ಕ್ಷೇತ್ರಪತಿ ಸಿನಿಮಾ ತಂಡ
ಕ್ಷೇತ್ರಪತಿ ಸಿನಿಮಾ ತಂಡ

ಈ ಮಧ್ಯೆ ಕ್ಷೇತ್ರಪತಿ ಚಿತ್ರತಂಡ ನವೀನ್ ಶಂಕರ್​ಗೆ ಹೊಸ ಮೋಷನ್ ಪೋಸ್ಟರ್ ಅನ್ನ ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ಆಗಿ ನೀಡಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.

ಕ್ಷೇತ್ರಪತಿ
ಕ್ಷೇತ್ರಪತಿ

ಪೊಲಿಟಿಕಲ್ ಡ್ರಾಮ ಕಥಾಹಂದರ: ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಶ್ರೀಕಾಂತ್ ಕಟಗಿ ನಿರ್ದೇಶಿಸಿದ್ದಾರೆ. "ಕ್ಷೇತ್ರಪತಿ" ಸೋಷಿಯಲ್ ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ ಎನ್ನುತ್ತಾರೆ ನಿರ್ದೇಶಕರು. ಶ್ರೀಕಾಂತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಇದನ್ನೂ ಓದಿ: ಕೊರಗಜ್ಜ ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಹಾಲಿವುಡ್ ಮತ್ತು ಬಾಲಿವುಡ್ ನಟ

ಉತ್ತರ ಕರ್ನಾಟಕದಲ್ಲೇ ನಡೆದಿರುವ ಚಿತ್ರೀಕರಣ: ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದ್ದು, ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌. ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ವಾಮಾಚಾರದ ಸುತ್ತ 'ಗದಾಯುದ್ಧ' ಮಾಡಲು ರೆಡಿಯಾದ ಯುವ ನಟ ಸುಮಿತ್

ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವಾದ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ನಾಯಕ - ನಾಯಕಿಯಾಗಿ ನಟಿಸಿದ್ದ ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: 'ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ' ಚಿತ್ರದ ಮೂಲಕ ನಾಯಕ ನಟರಾದ ಹೊನ್ನರಾಜ್

ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ: ಕ್ಷೇತ್ರಪತಿ ಸಿನಿಮಾದಲ್ಲಿ ನವೀನ್ ಶಂಕರ್ ಅವರು ಇಂಜಿನಿಯರ್, ರೈತನ ಮಗ. ಇವರಿಬ್ಬರ ಹೋರಾಟದ ಕಥೆಯೇ ‘ಕ್ಷೇತ್ರಪತಿ’ ಸಿನಿಮಾವಾಗಿದೆ. ರೈತನ ಸಮಸ್ಯೆ ಕುರಿತಾದ ಸಿನಿಮಾ. ಹೀಗಾಗಿ ಸ್ಯಾಂಡಲ್‌ವುಡ್‌ನಲ್ಲಿ ರೈತರ ಸಮಸ್ಯೆಯ ಕುರಿತಾದ ಕಮರ್ಷಿಯಲ್ ಸಿನಿಮಾ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಭಾವನೆಗಳ ಸುತ್ತ ಸುಂದರ ಪ್ರೀತಿಯ ಪಯಣ: ಇದು ಮೆಲೋಡಿ ಡ್ರಾಮಾ..

ಗುಳ್ಟು ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವವರು ನಟ ನವೀನ್ ಶಂಕರ್. ಇತ್ತೀಚೆಗೆ ಹೊಯ್ಸಳ ಸಿನಿಮಾದಲ್ಲಿ ಧನಂಜಯ್ ಎದುರು ಖಡಕ್ ವಿಲನ್ ಆಗಿ ಅಬ್ಬರಿಸಿ ಗಮನ ಸೆಳೆದಿರೋ ನವೀನ್ ಶಂಕರ್​ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳ ಜೊತೆ ನವೀನ್ ಶಂಕರ್ ಕೇಕ್ ಕಟ್ ಮಾಡುವ ಮೂಲಕ ತಮ್ಮ ಬರ್ತಡೇ ಆಚರಿಸಿಕೊಂಡಿದ್ದಾರೆ.

ಕ್ಷೇತ್ರಪತಿ ಸಿನಿಮಾ ತಂಡ
ಕ್ಷೇತ್ರಪತಿ ಸಿನಿಮಾ ತಂಡ

ಈ ಮಧ್ಯೆ ಕ್ಷೇತ್ರಪತಿ ಚಿತ್ರತಂಡ ನವೀನ್ ಶಂಕರ್​ಗೆ ಹೊಸ ಮೋಷನ್ ಪೋಸ್ಟರ್ ಅನ್ನ ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ಆಗಿ ನೀಡಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.

ಕ್ಷೇತ್ರಪತಿ
ಕ್ಷೇತ್ರಪತಿ

ಪೊಲಿಟಿಕಲ್ ಡ್ರಾಮ ಕಥಾಹಂದರ: ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಶ್ರೀಕಾಂತ್ ಕಟಗಿ ನಿರ್ದೇಶಿಸಿದ್ದಾರೆ. "ಕ್ಷೇತ್ರಪತಿ" ಸೋಷಿಯಲ್ ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ ಎನ್ನುತ್ತಾರೆ ನಿರ್ದೇಶಕರು. ಶ್ರೀಕಾಂತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಇದನ್ನೂ ಓದಿ: ಕೊರಗಜ್ಜ ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಹಾಲಿವುಡ್ ಮತ್ತು ಬಾಲಿವುಡ್ ನಟ

ಉತ್ತರ ಕರ್ನಾಟಕದಲ್ಲೇ ನಡೆದಿರುವ ಚಿತ್ರೀಕರಣ: ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯಾಗಿದ್ದು, ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌. ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ವಾಮಾಚಾರದ ಸುತ್ತ 'ಗದಾಯುದ್ಧ' ಮಾಡಲು ರೆಡಿಯಾದ ಯುವ ನಟ ಸುಮಿತ್

ಇತ್ತೀಚೆಗೆ ಬಿಡುಗಡೆಯಾಗಿ ಜನಪ್ರಿಯವಾದ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ನಾಯಕ - ನಾಯಕಿಯಾಗಿ ನಟಿಸಿದ್ದ ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: 'ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ' ಚಿತ್ರದ ಮೂಲಕ ನಾಯಕ ನಟರಾದ ಹೊನ್ನರಾಜ್

ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ: ಕ್ಷೇತ್ರಪತಿ ಸಿನಿಮಾದಲ್ಲಿ ನವೀನ್ ಶಂಕರ್ ಅವರು ಇಂಜಿನಿಯರ್, ರೈತನ ಮಗ. ಇವರಿಬ್ಬರ ಹೋರಾಟದ ಕಥೆಯೇ ‘ಕ್ಷೇತ್ರಪತಿ’ ಸಿನಿಮಾವಾಗಿದೆ. ರೈತನ ಸಮಸ್ಯೆ ಕುರಿತಾದ ಸಿನಿಮಾ. ಹೀಗಾಗಿ ಸ್ಯಾಂಡಲ್‌ವುಡ್‌ನಲ್ಲಿ ರೈತರ ಸಮಸ್ಯೆಯ ಕುರಿತಾದ ಕಮರ್ಷಿಯಲ್ ಸಿನಿಮಾ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಅಂತಿಮ ಹಂತದಲ್ಲಿದೆ. ಜುಲೈನಲ್ಲಿ ಚಿತ್ರ ತೆರೆಗೆ ಬರಲಿದೆ. KRG ಸ್ಟುಡಿಯೋಸ್ ಮೂಲಕ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಭಾವನೆಗಳ ಸುತ್ತ ಸುಂದರ ಪ್ರೀತಿಯ ಪಯಣ: ಇದು ಮೆಲೋಡಿ ಡ್ರಾಮಾ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.