ETV Bharat / entertainment

Upendra: ಉಪೇಂದ್ರ ವಿರುದ್ಧದ ಮತ್ತೊಂದು FIRಗೆ ಹೈಕೋರ್ಟ್‌ ಮಧ್ಯಂತರ ತಡೆ

Actor Upendra case: ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್​ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್​ಗೆ ಇಂದು ಹೈಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿದೆ.

author img

By

Published : Aug 17, 2023, 3:58 PM IST

Updated : Aug 17, 2023, 6:03 PM IST

ನಟ ಉಪೇಂದ್ರ
ನಟ ಉಪೇಂದ್ರ

ಬೆಂಗಳೂರು: ನಟ ಉಪೇಂದ್ರ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಥಮ ವರ್ತಮಾನ ವರದಿಗೆ (ಎಫ್ಐಆರ್) ಇಂದು (ಗುರುವಾರ) ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿತು.

ಉಪೇಂದ್ರ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, "ಹಲಸೂರು ಪೊಲೀಸ್ ಠಾಣೆ ಮುಂದೆ ದೂರುದಾರರು ಕೇಕ್ ಕತ್ತರಿಸಿದ್ದಾರೆ. ಪ್ರಚಾರಕ್ಕಾಗಿ ಉಪೇಂದ್ರ ವಿರುದ್ಧ ದುರುದ್ದೇಶಪೂರಿತ ದೂರು ನೀಡಿದ್ದಾರೆ. ಸಚಿವರೊಬ್ಬರು ಕೂಡಾ ಇದೇ ಹೇಳಿಕೆ ನೀಡಿದ್ದಾರೆ. ಆದರೆ ಎಫ್ಐಆರ್ ದಾಖಲಿಸಿಲ್ಲ. ಪೊಲೀಸರು ಕೇವಲ ಎನ್​ಸಿಆರ್ ಮಾತ್ರ ಹಾಕಿದ್ದಾರೆ. ಉಪೇಂದ್ರ ಚಿತ್ರನಟ ಎಂಬ ಕಾರಣಕ್ಕೆ ಎಫ್ಐಆರ್ ದಾಖಲಿಸಲಾಗಿದೆ. ಒಂದೇ ಆರೋಪಕ್ಕೆ ಎರಡೆರಡು ಎಫ್ಐಆರ್ ದಾಖಲಿಸುವಂತಿಲ್ಲ" ಎಂದರು.

ಎಸ್​ಪಿಪಿ ಬಿ.ಎ.ಬೆಳ್ಳಿಯಪ್ಪ ವಾದ ಮಂಡಿಸಿ, "ಉಪೇಂದ್ರ ಹೇಳಿಕೆಯಿಂದ ಸಮುದಾಯಗಳ ನಡುವೆ ವೈಷಮ್ಯ ಮೂಡಿದೆ. ಹೀಗಾಗಿ ತಡೆಯಾಜ್ಞೆ ನೀಡದಂತೆ ಮನವಿ ಮಾಡಿಕೊಂಡರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್, ಯಾವುದೇ ಜಾತಿಯ ಅಥವಾ ವ್ಯಕ್ತಿ ಉದ್ದೇಶಿಸಿ ಹೇಳಿಕೆ ನೀಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್​ಗೆ ತಡೆಯಾಜ್ಞೆ ನೀಡಿದರು.

ಇದನ್ನೂ ಓದಿ: 'ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ'.. FIR ತಡೆಗೆ ಉಪೇಂದ್ರ ಟ್ವೀಟ್​

ಪ್ರಕರಣವೇನು?: ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಎಫ್​ಐಆರ್ ರದ್ದು ಕೋರಿ ನಟ ಉಪೇಂದ್ರ ನಿನ್ನೆಯಷ್ಟೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡುವ ಸಂದರ್ಭದಲ್ಲಿ ಗಾದೆ ಮಾತೊಂದು ಬಳಸಿದ್ದು, ಇದು ಪರಿಶಿಷ್ಟ ಜಾತಿಯ ಒಂದು ಸಮುದಾಯವನ್ನು ಕೆಟ್ಟವರು ಎಂಬುದಾಗಿ ಬಿಂಬಿಸುವಂತೆ ಬಳಸಲಾಗಿದೆ ಎನ್ನುವ ಆರೋಪದಲ್ಲಿ, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್​ಗೆ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್​ ಚಂದನಗೌಡರ್​ ಅವರಿದ್ದ ನ್ಯಾಯಪೀಠ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಇದನ್ನೂ ಓದಿ: Upendra: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪ; ಉಪೇಂದ್ರ ವಿರುದ್ಧ FIR

ಇದರ ಬೆನ್ನಲ್ಲೇ ಎರಡನೇ ಎಫ್ಐಆರ್ ರದ್ದು ಕೋರಿ ಮತ್ತೊಮ್ಮೆ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ರಣಧೀರ ಪಡೆಯ ಹರೀಶ್ ಎನ್ನುವವರು ಕೊಟ್ಟ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇದನ್ನೂ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಅದರಂತೆ ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.

ಉಪೇಂದ್ರ ವಿರುದ್ಧ ಸಮತಾ ಸೈನಿಕ ದಳದ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು, ಈ ದೂರಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: Upendra: 'ನನ್ನ ಕ್ಷಮೆ ಸ್ವೀಕರಿಸುವ ದೊಡ್ಡತನವೂ ಇಲ್ಲವಾಯಿತೇ? ಯಾಕೆ ಇಷ್ಟೊಂದು ದ್ವೇಷ?': ಉಪೇಂದ್ರ

ಬೆಂಗಳೂರು: ನಟ ಉಪೇಂದ್ರ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಥಮ ವರ್ತಮಾನ ವರದಿಗೆ (ಎಫ್ಐಆರ್) ಇಂದು (ಗುರುವಾರ) ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿತು.

ಉಪೇಂದ್ರ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, "ಹಲಸೂರು ಪೊಲೀಸ್ ಠಾಣೆ ಮುಂದೆ ದೂರುದಾರರು ಕೇಕ್ ಕತ್ತರಿಸಿದ್ದಾರೆ. ಪ್ರಚಾರಕ್ಕಾಗಿ ಉಪೇಂದ್ರ ವಿರುದ್ಧ ದುರುದ್ದೇಶಪೂರಿತ ದೂರು ನೀಡಿದ್ದಾರೆ. ಸಚಿವರೊಬ್ಬರು ಕೂಡಾ ಇದೇ ಹೇಳಿಕೆ ನೀಡಿದ್ದಾರೆ. ಆದರೆ ಎಫ್ಐಆರ್ ದಾಖಲಿಸಿಲ್ಲ. ಪೊಲೀಸರು ಕೇವಲ ಎನ್​ಸಿಆರ್ ಮಾತ್ರ ಹಾಕಿದ್ದಾರೆ. ಉಪೇಂದ್ರ ಚಿತ್ರನಟ ಎಂಬ ಕಾರಣಕ್ಕೆ ಎಫ್ಐಆರ್ ದಾಖಲಿಸಲಾಗಿದೆ. ಒಂದೇ ಆರೋಪಕ್ಕೆ ಎರಡೆರಡು ಎಫ್ಐಆರ್ ದಾಖಲಿಸುವಂತಿಲ್ಲ" ಎಂದರು.

ಎಸ್​ಪಿಪಿ ಬಿ.ಎ.ಬೆಳ್ಳಿಯಪ್ಪ ವಾದ ಮಂಡಿಸಿ, "ಉಪೇಂದ್ರ ಹೇಳಿಕೆಯಿಂದ ಸಮುದಾಯಗಳ ನಡುವೆ ವೈಷಮ್ಯ ಮೂಡಿದೆ. ಹೀಗಾಗಿ ತಡೆಯಾಜ್ಞೆ ನೀಡದಂತೆ ಮನವಿ ಮಾಡಿಕೊಂಡರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್, ಯಾವುದೇ ಜಾತಿಯ ಅಥವಾ ವ್ಯಕ್ತಿ ಉದ್ದೇಶಿಸಿ ಹೇಳಿಕೆ ನೀಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್​ಗೆ ತಡೆಯಾಜ್ಞೆ ನೀಡಿದರು.

ಇದನ್ನೂ ಓದಿ: 'ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ'.. FIR ತಡೆಗೆ ಉಪೇಂದ್ರ ಟ್ವೀಟ್​

ಪ್ರಕರಣವೇನು?: ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಎಫ್​ಐಆರ್ ರದ್ದು ಕೋರಿ ನಟ ಉಪೇಂದ್ರ ನಿನ್ನೆಯಷ್ಟೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡುವ ಸಂದರ್ಭದಲ್ಲಿ ಗಾದೆ ಮಾತೊಂದು ಬಳಸಿದ್ದು, ಇದು ಪರಿಶಿಷ್ಟ ಜಾತಿಯ ಒಂದು ಸಮುದಾಯವನ್ನು ಕೆಟ್ಟವರು ಎಂಬುದಾಗಿ ಬಿಂಬಿಸುವಂತೆ ಬಳಸಲಾಗಿದೆ ಎನ್ನುವ ಆರೋಪದಲ್ಲಿ, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್​ಗೆ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್​ ಚಂದನಗೌಡರ್​ ಅವರಿದ್ದ ನ್ಯಾಯಪೀಠ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಇದನ್ನೂ ಓದಿ: Upendra: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪ; ಉಪೇಂದ್ರ ವಿರುದ್ಧ FIR

ಇದರ ಬೆನ್ನಲ್ಲೇ ಎರಡನೇ ಎಫ್ಐಆರ್ ರದ್ದು ಕೋರಿ ಮತ್ತೊಮ್ಮೆ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ರಣಧೀರ ಪಡೆಯ ಹರೀಶ್ ಎನ್ನುವವರು ಕೊಟ್ಟ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇದನ್ನೂ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಅದರಂತೆ ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.

ಉಪೇಂದ್ರ ವಿರುದ್ಧ ಸಮತಾ ಸೈನಿಕ ದಳದ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು, ಈ ದೂರಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: Upendra: 'ನನ್ನ ಕ್ಷಮೆ ಸ್ವೀಕರಿಸುವ ದೊಡ್ಡತನವೂ ಇಲ್ಲವಾಯಿತೇ? ಯಾಕೆ ಇಷ್ಟೊಂದು ದ್ವೇಷ?': ಉಪೇಂದ್ರ

Last Updated : Aug 17, 2023, 6:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.