ಬಿಚ್ಚುಗತ್ತಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿರುವ ನಟ ರಾಜವರ್ಧನ್. ಸದ್ಯ ಹಿರಣ್ಯ ಸಿನಿಮಾ ಮೂಲಕ ಮಾಸ್ ಲುಕ್ನಲ್ಲಿ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಇತ್ತೀಚೆಗೆ 'ಹಿರಣ್ಯ' ಸಿನಿಮಾದ ಮಾಸ್ ಟೀಸರ್ ರಿಲೀಸ್ ಆಗಿದ್ದು, ಭರ್ಜರಿ ಆ್ಯಕ್ಷನ್ ಮೂಲಕ ರಾಜವರ್ಧನ್ ಅಬ್ಬರಿಸಿದ್ದಾರೆ.
ಹೌದು, ಇತ್ತೀಚೆಗೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಹಿರಣ್ಯ ಟೀಸರ್ ಬಿಡುಗಡೆ ಮಾಡಲಾಯಿತು. ಲಹರಿ ಸಂಸ್ಥೆಯ ವೇಲು ರಾಜವರ್ಧನ್ ಸಿನಿಮಾಗೆ ಸಾಥ್ ಕೊಟ್ಟರು. ಟೀಸರ್ ರಿಲೀಸ್ ವೇಳೆ ಹಿರಣ್ಯ ಚಿತ್ರತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ನಿರ್ದೇಶಕ ಪ್ರವೀಣ್ ಅವ್ಯುಕ್ತ ಮಾತನಾಡಿ, ಮುಹೂರ್ತ ಸಮಾರಂಭದಲ್ಲಿ ಕೆಲಸ ಆದ್ಮೇಲೆ ನಿಮ್ಮ ಮುಂದೆ ಬರ್ತೀವಿ ಎಂದಿದ್ದೆ. ಕೆಲಸ ಆಗಿದೆ, ಬಂದಿದ್ದೇವೆ. ರಾಜವರ್ಧನ್ ಅವರು ರಾಣಾ ಡೆಡ್ಲಿ ಕ್ಯಾರೆಕ್ಟರ್ ನಿರ್ವಹಿಸಿದ್ದಾರೆ. ಲುಕ್ ಟೆಸ್ಟ್ ಮಾಡಿದ ಸಂದರ್ಭ ಇಷ್ಟವಾಯ್ತು. ಅವರು ಅದ್ಭುತವಾಗಿ ಫರ್ಪಾಮ್ ಮಾಡಿದ್ದಾರೆ. ಇಡೀ ತಂಡದ ಬೆಂಬಲದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.
- " class="align-text-top noRightClick twitterSection" data="">
ನಟ ರಾಜವರ್ಧನ್ ಮಾತನಾಡಿ, ಎರಡು ವರ್ಷಗಳ ಹಿಂದೆ ಪ್ರವೀಣ್ ಬಂದು ಕಥೆ ಹೇಳಿದ್ದರು. ಬಿಚ್ಚುಗತ್ತಿಯಂತಹ ದೊಡ್ಡ ಸಿನಿಮಾ ಮಾಡಿದ್ದೆ. ಆ ಸಮಯದಲ್ಲಿ ಕಥೆ ಆಯ್ಕೆ ಮಾಡಿಕೊಳ್ಳುವುದು ದೊಡ್ಡ ಚಾಲೆಂಜ್ ಆಗಿತ್ತು. ಪ್ರವೀಣ್ ಕಥೆ ಹೇಳಿದಾಗ ಒಂದು ಪಾಯಿಂಟ್ ಇಷ್ಟವಾಯ್ತು. ಒಂದೊಳ್ಳೆ ಔಟ್ ಪುಟ್ ಬಂದಿದೆ. ಈ ಚಿತ್ರ ಪ್ರೇಕ್ಷಕರಿಗೆ ಹಿಡಿಸಲಿದೆ ಎಂದರು.