ETV Bharat / entertainment

ಗಂಟುಮೂಟೆ ತಂಡದ ಹೊಸ ಚಿತ್ರ 'ಕೆಂಡ'; ವಿಭಿನ್ನ ಕಥೆಯೊಂದಿಗೆ ಬರ್ತಿದ್ದಾರೆ ರೂಪಾ ರಾವ್

author img

By ETV Bharat Karnataka Team

Published : Oct 25, 2023, 3:53 PM IST

ಸಹದೇವ್ ಕೆಲವಡಿ ನಿರ್ದೇಶಿಸಿರುವ 'ಕೆಂಡ' ಸಿನಿಮಾದ ಪಾತ್ರಗಳನ್ನು ಚಿತ್ರತಂಡ ಪರಿಚಯಿಸಿತು.

film-team-has-introduced-the-characters-of-the-movie-kenda
ವಿಭಿನ್ನ ಕಥೆಯೊಂದಿಗೆ ಗಂಟುಮೂಟೆ ಸಿನಿಮಾದ ಸಹದೇವ್-ರೂಪಾ ರಾವ್ ಜೋಡಿ: ಹೊಸ ಸಿನಿಮಾದ ತಾರಾಬಳಗದಲ್ಲಿ ಯಾರಿದ್ದಾರೆ ಗೊತ್ತಾ?

'ಗಂಟುಮೂಟೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿದ ನಿರ್ದೇಶಕಿ ರೂಪಾ ರಾವ್ ಅವರೀಗ ವಿಭಿನ್ನ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಸಿನಿಮಾವೇ 'ಕೆಂಡ'. ಗಂಟುಮೂಟೆ ಸಿನಿಮಾದಲ್ಲಿ ರೂಪ ರಾವ್ ಜೊತೆ ಛಾಯಾಗ್ರಾಹಕರಾಗಿದ್ದು, ನಿರ್ಮಾಣದಲ್ಲಿಯೂ ಭಾಗಿಯಾಗಿದ್ದ ಸಹದೇವ್ ಕೆಲವಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಛಾಯಾಗ್ರಾಹಕ ಸಹದೇವ್ ಕೆಲವಡಿ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

film-team-has-introduced-the-characters-of-the-movie-kenda
ನಿರ್ದೇಶಕಿ ರೂಪ ರಾವ್

ಇದೀಗ ಚಿತ್ರತಂಡ ಕೆಂಡದ ಒಡಲಲ್ಲಿರುವ ವಿಭಿನ್ನವಾದ ಒಂದಷ್ಟು ಪಾತ್ರಗಳನ್ನು ಪರಿಚಯಿಸಿದೆ. ವಿಡಿಯೋ ಬಿಡುಗಡೆ ಮಾಡುವ ಮೂಲಕ ಕೆಂಡದ ಪಾತ್ರಗಳನ್ನು ಅನಾವರಣಗೊಳಿಸಿದೆ. ಸಚ್ಚಾ ನಿರ್ವಹಿಸಿರುವ ಲೋಕೇಶ್ ಎಂಬ ಪಾತ್ರ, ಜಯರಾಮ್ ಆಗಿ ನಟಿಸಿರುವ ಶರತ್ ಗೌಡ, ಪ್ರಣವ್ ಶ್ರೀಧರ್ ಅವರ ವಿನಾಯಕ ಎಂಬ ಪಾತ್ರ, ಕೇಶವನಾಗಿರುವ ಬಿ.ವಿ.ಭರತ್ ಒಂದೇ ಸಲಕ್ಕೆ ಸೆಳೆಯುವಂಥ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ. ಈ ಹಿಂದೆ ಒಂದಷ್ಟು ಸಿನಿಮಾಗಳಲ್ಲಿ ಕೆಲವು ಪಾತ್ರಗಳೇ ಅಗಾಧವಾದ ಕ್ರೇಜ್ ಸೃಷ್ಟಿಸಿದ್ದವು.

film-team-has-introduced-the-characters-of-the-movie-kenda
ಲೋಕೇಶ್ ಪಾತ್ರದಲ್ಲಿ ಸಚ್ಚಾ

ಕೆಂಡದ ತಾರಾಗಣವೆಲ್ಲ ಹೊಸಬರಿಂದಲೇ ತುಂಬಿದೆ. ರಂಗಭೂಮಿ ಪ್ರತಿಭೆಗಳಿಲ್ಲಿ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬಿ.ವಿ.ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಮುಂತಾದವರ ತಾರಾಗಣ ಚಿತ್ರಕ್ಕಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಚಿತ್ರ ನಿರ್ಮಾಣಗೊಂಡಿದೆ. ಪ್ರಸಕ್ತ ಸನ್ನಿವೇಷಗಳಿಗೆ ತಕ್ಕುದಾಗಿರುವ ಈ ಕಥನ ರಗಡ್ ಶೈಲಿಯಲ್ಲಿದೆ ಎಂಬುದನ್ನು ಶೀರ್ಷಿಕೆಯೇ ಹೇಳಿತ್ತು.

ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂಥ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ.

film-team-has-introduced-the-characters-of-the-movie-kenda
ಜಯರಾಮ್ ಆಗಿ ನಟಿಸಿರುವ ಶರತ್ ಗೌಡ

ಗಂಟುಮೂಟೆಯಂಥ ಚೆಂದದ ಸಿನಿಮಾ ಕೊಟ್ಟಿದ್ದ ತಂಡವೇ ಕೆಂಡದ ಸಾರಥ್ಯ ವಹಿಸಿರುವುದರಿಂದಾಗಿ, ಚಿತ್ರ ಒಂದಷ್ಟು ಕುತೂಹಲ ಮೂಡಿಸಿದೆ. ಯುವ ಸಮೂಹದ ಕನಸು, ನಿರಾಸೆ, ತವಕ ತಲ್ಲಣಗಳನ್ನು ಹೊಂದಿರುವ ಸಿನಿಮಾ ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಅಂತಿಮ ಘಟ್ಟದಲ್ಲಿದೆ. ಹೀಗೆ ಹಂತ ಹಂತವಾಗಿ ಕೆಂಡ ಪ್ರೇಕ್ಷಕರೊಳಗೆ ಕುತೂಹಲ ಮೂಡಿಸುತ್ತಿದೆ. ಕೆಂಡ ಸಿನಿಮಾದ ಪಾತ್ರಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ: ಹೆಸರಿಡದ ಸಿನಿಮಾಗೆ ದೊಡ್ಮನೆ ಕುಡಿ ರೆಡಿ: ಧೀರೇನ್ ರಾಮ್‌ಕುಮಾರ್ ಕಟ್ಟುಮಸ್ತ್‌ ದೇಹ ನೋಡಿ

'ಗಂಟುಮೂಟೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿದ ನಿರ್ದೇಶಕಿ ರೂಪಾ ರಾವ್ ಅವರೀಗ ವಿಭಿನ್ನ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಸಿನಿಮಾವೇ 'ಕೆಂಡ'. ಗಂಟುಮೂಟೆ ಸಿನಿಮಾದಲ್ಲಿ ರೂಪ ರಾವ್ ಜೊತೆ ಛಾಯಾಗ್ರಾಹಕರಾಗಿದ್ದು, ನಿರ್ಮಾಣದಲ್ಲಿಯೂ ಭಾಗಿಯಾಗಿದ್ದ ಸಹದೇವ್ ಕೆಲವಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಛಾಯಾಗ್ರಾಹಕ ಸಹದೇವ್ ಕೆಲವಡಿ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

film-team-has-introduced-the-characters-of-the-movie-kenda
ನಿರ್ದೇಶಕಿ ರೂಪ ರಾವ್

ಇದೀಗ ಚಿತ್ರತಂಡ ಕೆಂಡದ ಒಡಲಲ್ಲಿರುವ ವಿಭಿನ್ನವಾದ ಒಂದಷ್ಟು ಪಾತ್ರಗಳನ್ನು ಪರಿಚಯಿಸಿದೆ. ವಿಡಿಯೋ ಬಿಡುಗಡೆ ಮಾಡುವ ಮೂಲಕ ಕೆಂಡದ ಪಾತ್ರಗಳನ್ನು ಅನಾವರಣಗೊಳಿಸಿದೆ. ಸಚ್ಚಾ ನಿರ್ವಹಿಸಿರುವ ಲೋಕೇಶ್ ಎಂಬ ಪಾತ್ರ, ಜಯರಾಮ್ ಆಗಿ ನಟಿಸಿರುವ ಶರತ್ ಗೌಡ, ಪ್ರಣವ್ ಶ್ರೀಧರ್ ಅವರ ವಿನಾಯಕ ಎಂಬ ಪಾತ್ರ, ಕೇಶವನಾಗಿರುವ ಬಿ.ವಿ.ಭರತ್ ಒಂದೇ ಸಲಕ್ಕೆ ಸೆಳೆಯುವಂಥ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ. ಈ ಹಿಂದೆ ಒಂದಷ್ಟು ಸಿನಿಮಾಗಳಲ್ಲಿ ಕೆಲವು ಪಾತ್ರಗಳೇ ಅಗಾಧವಾದ ಕ್ರೇಜ್ ಸೃಷ್ಟಿಸಿದ್ದವು.

film-team-has-introduced-the-characters-of-the-movie-kenda
ಲೋಕೇಶ್ ಪಾತ್ರದಲ್ಲಿ ಸಚ್ಚಾ

ಕೆಂಡದ ತಾರಾಗಣವೆಲ್ಲ ಹೊಸಬರಿಂದಲೇ ತುಂಬಿದೆ. ರಂಗಭೂಮಿ ಪ್ರತಿಭೆಗಳಿಲ್ಲಿ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬಿ.ವಿ.ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಮುಂತಾದವರ ತಾರಾಗಣ ಚಿತ್ರಕ್ಕಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಚಿತ್ರ ನಿರ್ಮಾಣಗೊಂಡಿದೆ. ಪ್ರಸಕ್ತ ಸನ್ನಿವೇಷಗಳಿಗೆ ತಕ್ಕುದಾಗಿರುವ ಈ ಕಥನ ರಗಡ್ ಶೈಲಿಯಲ್ಲಿದೆ ಎಂಬುದನ್ನು ಶೀರ್ಷಿಕೆಯೇ ಹೇಳಿತ್ತು.

ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂಥ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ.

film-team-has-introduced-the-characters-of-the-movie-kenda
ಜಯರಾಮ್ ಆಗಿ ನಟಿಸಿರುವ ಶರತ್ ಗೌಡ

ಗಂಟುಮೂಟೆಯಂಥ ಚೆಂದದ ಸಿನಿಮಾ ಕೊಟ್ಟಿದ್ದ ತಂಡವೇ ಕೆಂಡದ ಸಾರಥ್ಯ ವಹಿಸಿರುವುದರಿಂದಾಗಿ, ಚಿತ್ರ ಒಂದಷ್ಟು ಕುತೂಹಲ ಮೂಡಿಸಿದೆ. ಯುವ ಸಮೂಹದ ಕನಸು, ನಿರಾಸೆ, ತವಕ ತಲ್ಲಣಗಳನ್ನು ಹೊಂದಿರುವ ಸಿನಿಮಾ ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಅಂತಿಮ ಘಟ್ಟದಲ್ಲಿದೆ. ಹೀಗೆ ಹಂತ ಹಂತವಾಗಿ ಕೆಂಡ ಪ್ರೇಕ್ಷಕರೊಳಗೆ ಕುತೂಹಲ ಮೂಡಿಸುತ್ತಿದೆ. ಕೆಂಡ ಸಿನಿಮಾದ ಪಾತ್ರಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ: ಹೆಸರಿಡದ ಸಿನಿಮಾಗೆ ದೊಡ್ಮನೆ ಕುಡಿ ರೆಡಿ: ಧೀರೇನ್ ರಾಮ್‌ಕುಮಾರ್ ಕಟ್ಟುಮಸ್ತ್‌ ದೇಹ ನೋಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.