'ಗಂಟುಮೂಟೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಹುಟ್ಟಿಸಿದ ನಿರ್ದೇಶಕಿ ರೂಪಾ ರಾವ್ ಅವರೀಗ ವಿಭಿನ್ನ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಮೋಷನ್ ಪೋಸ್ಟರ್ ಮೂಲಕ ಒಂದಷ್ಟು ಬಗೆಯ ಚರ್ಚೆ ಮತ್ತು ಕುತೂಹಲ ಹುಟ್ಟುಹಾಕಿದ್ದ ಸಿನಿಮಾವೇ 'ಕೆಂಡ'. ಗಂಟುಮೂಟೆ ಸಿನಿಮಾದಲ್ಲಿ ರೂಪ ರಾವ್ ಜೊತೆ ಛಾಯಾಗ್ರಾಹಕರಾಗಿದ್ದು, ನಿರ್ಮಾಣದಲ್ಲಿಯೂ ಭಾಗಿಯಾಗಿದ್ದ ಸಹದೇವ್ ಕೆಲವಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಛಾಯಾಗ್ರಾಹಕ ಸಹದೇವ್ ಕೆಲವಡಿ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.
![film-team-has-introduced-the-characters-of-the-movie-kenda](https://etvbharatimages.akamaized.net/etvbharat/prod-images/25-10-2023/kn-bng-01-mathondhu-vibinna-storyyendige-banda-gantmoote-rooparao-7204735_25102023134236_2510f_1698221556_824.jpg)
ಇದೀಗ ಚಿತ್ರತಂಡ ಕೆಂಡದ ಒಡಲಲ್ಲಿರುವ ವಿಭಿನ್ನವಾದ ಒಂದಷ್ಟು ಪಾತ್ರಗಳನ್ನು ಪರಿಚಯಿಸಿದೆ. ವಿಡಿಯೋ ಬಿಡುಗಡೆ ಮಾಡುವ ಮೂಲಕ ಕೆಂಡದ ಪಾತ್ರಗಳನ್ನು ಅನಾವರಣಗೊಳಿಸಿದೆ. ಸಚ್ಚಾ ನಿರ್ವಹಿಸಿರುವ ಲೋಕೇಶ್ ಎಂಬ ಪಾತ್ರ, ಜಯರಾಮ್ ಆಗಿ ನಟಿಸಿರುವ ಶರತ್ ಗೌಡ, ಪ್ರಣವ್ ಶ್ರೀಧರ್ ಅವರ ವಿನಾಯಕ ಎಂಬ ಪಾತ್ರ, ಕೇಶವನಾಗಿರುವ ಬಿ.ವಿ.ಭರತ್ ಒಂದೇ ಸಲಕ್ಕೆ ಸೆಳೆಯುವಂಥ ಲುಕ್ಕಿನಲ್ಲಿ ಕಂಗೊಳಿಸಿದ್ದಾರೆ. ಈ ಹಿಂದೆ ಒಂದಷ್ಟು ಸಿನಿಮಾಗಳಲ್ಲಿ ಕೆಲವು ಪಾತ್ರಗಳೇ ಅಗಾಧವಾದ ಕ್ರೇಜ್ ಸೃಷ್ಟಿಸಿದ್ದವು.
![film-team-has-introduced-the-characters-of-the-movie-kenda](https://etvbharatimages.akamaized.net/etvbharat/prod-images/25-10-2023/kn-bng-01-mathondhu-vibinna-storyyendige-banda-gantmoote-rooparao-7204735_25102023134236_2510f_1698221556_368.jpg)
ಕೆಂಡದ ತಾರಾಗಣವೆಲ್ಲ ಹೊಸಬರಿಂದಲೇ ತುಂಬಿದೆ. ರಂಗಭೂಮಿ ಪ್ರತಿಭೆಗಳಿಲ್ಲಿ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬಿ.ವಿ.ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ ದೇಶಪಾಂಡೆ ಮುಂತಾದವರ ತಾರಾಗಣ ಚಿತ್ರಕ್ಕಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಚಿತ್ರ ನಿರ್ಮಾಣಗೊಂಡಿದೆ. ಪ್ರಸಕ್ತ ಸನ್ನಿವೇಷಗಳಿಗೆ ತಕ್ಕುದಾಗಿರುವ ಈ ಕಥನ ರಗಡ್ ಶೈಲಿಯಲ್ಲಿದೆ ಎಂಬುದನ್ನು ಶೀರ್ಷಿಕೆಯೇ ಹೇಳಿತ್ತು.