ETV Bharat / entertainment

'ನಂದಿ ಫಿಲ್ಮ್​ ಅವಾರ್ಡ್ಸ್​ 2023'ಗೆ ಚಾಲನೆ: ಅರ್ಹರಿಗೆ ಪ್ರಶಸ್ತಿ ಸಿಗಲಿ ಎಂದ ಕಿಚ್ಚ ಸುದೀಪ್​

author img

By ETV Bharat Karnataka Team

Published : Nov 20, 2023, 12:59 PM IST

Nandi Awards 2023: ನಂದಿ ಚಲನಚಿತ್ರ ಪ್ರಶಸ್ತಿ 2023ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾಲನೆ ನೀಡಿದರು.

Kiccha Sudeep attend nandi awards 2023 curtain raiser event
'ನಂದಿ ಅವಾರ್ಡ್ಸ್​ 2023'ಗೆ ಚಾಲನೆ

ಕನ್ನಡ ಚಿತ್ರರಂಗದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ತಿಂಗಳಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಮೊದಲ ಹಂತವಾಗಿ ನಂದಿ ಚಲನಚಿತ್ರ ಪ್ರಶಸ್ತಿ 2023ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾಲನೆ ನೀಡಿ, ಹೊಸ ಪ್ರಶಸ್ತಿ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅವರು, "ಸಂಸ್ಥಾಪಕರಿಗೆ ಒಳ್ಳೆದಾಗಲಿ. ನಾನು 2003-2004ರಲ್ಲೇ ಅವಾರ್ಡ್ಸ್​ ಕಾರ್ಯಕ್ರಮಕ್ಕೆ ಹೋಗುವುದನ್ನೇ ಬಿಟ್ಟಿದ್ದೇನೆ. ಅದಕ್ಕೆ ಬೇರೆ ಕಾರಣವಿದೆ. ಆದರೆ, ಈ ಪ್ರಶಸ್ತಿ ಅರ್ಹ ಕಲಾವಿದರಿಗೆ ಸಿಗಲಿ ಎಂದು ಆಶಿಸುತ್ತೇನೆ. ಅವಾರ್ಡ್​ ಮತ್ತು ದುಡ್ಡು ಅಂತ ಬಂದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರೂ ಇದ್ದಾರೆ. ಹಾಗಾಗಿ ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಕಷ್ಟ ಪಡುವಂತಹ ಕಲಾವಿದರಿಗೆ ನೀಡಿ. ನಂದಿ ಬಹಳ ಶ್ರೇಷ್ಠ. ಅದರ ಹೆಸರಿನಲ್ಲಿ ನಡೆಸುತ್ತಿರುವ ಈ ಪ್ರಶಸ್ತಿ ಕಾರ್ಯಕ್ರಮ ಅಷ್ಟೇ ಶುದ್ಧವಾಗಿರಲಿ. ಕರ್ನಾಟಕದಲ್ಲಿ ಅವಾರ್ಡ್ಸ್​ ಪ್ರೋಗ್ರಾಂ ನಡೆಸಲು ಬಹಳ ಕೊರತೆ ಇದೆ. ತಲೆ ಎತ್ತಿ ನೋಡುವಂತಹ ಪ್ರಶಸ್ತಿ ಕಾರ್ಯಕ್ರಮಗಳು ಇಲ್ಲ. ಅಂತಹದ್ದೊಂದು ವಿಭಿನ್ನ ಕಾರ್ಯಕ್ರಮ ನಂದಿ ಪ್ರಶಸ್ತಿ ಆಗಲಿ" ಎಂದು ಹಾರೈಸಿದರು.

Kiccha Sudeep attend nandi awards 2023 curtain raiser event
'ನಂದಿ ಅವಾರ್ಡ್ಸ್​ 2023'ಗೆ ಚಾಲನೆ

ನೆರೆಯ ಆಂಧ್ರಪ್ರದೇಶದಲ್ಲಿ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಂಬಂಧವಿಲ್ಲ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ 'ನಂದಿ' ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ 'ನಂದಿ ಫಿಲ್ಮ್​ ಅವಾರ್ಡ್' ಸಂಸ್ಥಾಪರಾಗಿದ್ದಾರೆ. ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಅಶೋಕ್ ಡೈರೆಕ್ಟರ್ಸ್​ ಗಳಾಗಿದ್ದಾರೆ.

ಕನ್ನಡ ಇಂಡಸ್ಟ್ರಿಗೆ ಪ್ರತ್ಯಕ್ಷವಾಗಿ ನಂದಿ ಅವಾರ್ಡ್ಸ್ ನೀಡಲಾಗುವುದು. ಕನ್ನಡ ಸಿನಿಮಾಗಳು, ಪ್ರಾದೇಶಿಕ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಭಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ ಎಂದು ನಂದಿ ಪ್ರಶಸ್ತಿ ಸಂಸ್ಥಾಪಕ ಭಾ.ಮಾ ಹರೀಶ್ ತಿಳಿಸಿದ್ದಾರೆ.

ನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಅವಾರ್ಡ್ ಕೊಡುವ ನಿರ್ಧಾರ ಮಾಡಿದೆ. ಬೆಂಗಳೂರಿನ ಒರಿಯನ್ ಮಾಲ್​ನಲ್ಲಿ ಡಿಸೆಂಬರ್ ತಿಂಗಳ 6ರಂದು ಸಮಾರಂಭ ನಡೆಯಲಿದ್ದು, 50 ವಿಭಾಗಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಚಿತ್ರರಂಗ, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಡಿಸೆಂಬರ್​ 6ಕ್ಕೆ 'ನಂದಿ ಫಿಲ್ಮ್ ಅವಾರ್ಡ್'​: ಏನಿದರ ಉದ್ದೇಶ? ಯಾರ ಮುಡಿಗೇರಲಿದೆ ಪ್ರಶಸ್ತಿ?

ಕನ್ನಡ ಚಿತ್ರರಂಗದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ಡಿಸೆಂಬರ್ ತಿಂಗಳಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿದ್ದು, ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಮೊದಲ ಹಂತವಾಗಿ ನಂದಿ ಚಲನಚಿತ್ರ ಪ್ರಶಸ್ತಿ 2023ಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾಲನೆ ನೀಡಿ, ಹೊಸ ಪ್ರಶಸ್ತಿ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅವರು, "ಸಂಸ್ಥಾಪಕರಿಗೆ ಒಳ್ಳೆದಾಗಲಿ. ನಾನು 2003-2004ರಲ್ಲೇ ಅವಾರ್ಡ್ಸ್​ ಕಾರ್ಯಕ್ರಮಕ್ಕೆ ಹೋಗುವುದನ್ನೇ ಬಿಟ್ಟಿದ್ದೇನೆ. ಅದಕ್ಕೆ ಬೇರೆ ಕಾರಣವಿದೆ. ಆದರೆ, ಈ ಪ್ರಶಸ್ತಿ ಅರ್ಹ ಕಲಾವಿದರಿಗೆ ಸಿಗಲಿ ಎಂದು ಆಶಿಸುತ್ತೇನೆ. ಅವಾರ್ಡ್​ ಮತ್ತು ದುಡ್ಡು ಅಂತ ಬಂದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರೂ ಇದ್ದಾರೆ. ಹಾಗಾಗಿ ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಕಷ್ಟ ಪಡುವಂತಹ ಕಲಾವಿದರಿಗೆ ನೀಡಿ. ನಂದಿ ಬಹಳ ಶ್ರೇಷ್ಠ. ಅದರ ಹೆಸರಿನಲ್ಲಿ ನಡೆಸುತ್ತಿರುವ ಈ ಪ್ರಶಸ್ತಿ ಕಾರ್ಯಕ್ರಮ ಅಷ್ಟೇ ಶುದ್ಧವಾಗಿರಲಿ. ಕರ್ನಾಟಕದಲ್ಲಿ ಅವಾರ್ಡ್ಸ್​ ಪ್ರೋಗ್ರಾಂ ನಡೆಸಲು ಬಹಳ ಕೊರತೆ ಇದೆ. ತಲೆ ಎತ್ತಿ ನೋಡುವಂತಹ ಪ್ರಶಸ್ತಿ ಕಾರ್ಯಕ್ರಮಗಳು ಇಲ್ಲ. ಅಂತಹದ್ದೊಂದು ವಿಭಿನ್ನ ಕಾರ್ಯಕ್ರಮ ನಂದಿ ಪ್ರಶಸ್ತಿ ಆಗಲಿ" ಎಂದು ಹಾರೈಸಿದರು.

Kiccha Sudeep attend nandi awards 2023 curtain raiser event
'ನಂದಿ ಅವಾರ್ಡ್ಸ್​ 2023'ಗೆ ಚಾಲನೆ

ನೆರೆಯ ಆಂಧ್ರಪ್ರದೇಶದಲ್ಲಿ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಂಬಂಧವಿಲ್ಲ. ಆಂಧ್ರಪ್ರದೇಶದಂತೆ ಕನ್ನಡದ ಪ್ರಶಸ್ತಿಗೂ ನಂದಿ ಅವಾರ್ಡ್ ಎಂದೇ ಕರೆಯಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ನಂದಿ ಎನ್ನುವುದು ಕನ್ನಡದ ಪಾಲಿಗೂ ಒಂದು ಪವರ್‌ಫುಲ್ ಇಮೇಜ್ ಎನಿಸುವ ಲಾಂಛನ. ಆ ಕಾರಣದಿಂದಲೇ 'ನಂದಿ' ಎಂಬ ಹೆಸರನ್ನೇ ಕನ್ನಡದ ಪ್ರಶಸ್ತಿಗೂ ಇಡಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ 'ನಂದಿ ಫಿಲ್ಮ್​ ಅವಾರ್ಡ್' ಸಂಸ್ಥಾಪರಾಗಿದ್ದಾರೆ. ಭಾ.ಮಾ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಅಶೋಕ್ ಡೈರೆಕ್ಟರ್ಸ್​ ಗಳಾಗಿದ್ದಾರೆ.

ಕನ್ನಡ ಇಂಡಸ್ಟ್ರಿಗೆ ಪ್ರತ್ಯಕ್ಷವಾಗಿ ನಂದಿ ಅವಾರ್ಡ್ಸ್ ನೀಡಲಾಗುವುದು. ಕನ್ನಡ ಸಿನಿಮಾಗಳು, ಪ್ರಾದೇಶಿಕ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಭಂಜಾರ ಈ ಭಾಷೆಗಳಿಗೆ ಪ್ರಾಮುಖ್ಯತೆ ಕೊಡಲಾಗುತ್ತದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ ಎಂದು ನಂದಿ ಪ್ರಶಸ್ತಿ ಸಂಸ್ಥಾಪಕ ಭಾ.ಮಾ ಹರೀಶ್ ತಿಳಿಸಿದ್ದಾರೆ.

ನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಅವಾರ್ಡ್ ಕೊಡುವ ನಿರ್ಧಾರ ಮಾಡಿದೆ. ಬೆಂಗಳೂರಿನ ಒರಿಯನ್ ಮಾಲ್​ನಲ್ಲಿ ಡಿಸೆಂಬರ್ ತಿಂಗಳ 6ರಂದು ಸಮಾರಂಭ ನಡೆಯಲಿದ್ದು, 50 ವಿಭಾಗಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಚಿತ್ರರಂಗ, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಡಿಸೆಂಬರ್​ 6ಕ್ಕೆ 'ನಂದಿ ಫಿಲ್ಮ್ ಅವಾರ್ಡ್'​: ಏನಿದರ ಉದ್ದೇಶ? ಯಾರ ಮುಡಿಗೇರಲಿದೆ ಪ್ರಶಸ್ತಿ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.