ETV Bharat / entertainment

Kausalya Supraja Rama: 'ಕೌಸಲ್ಯ ಸುಪ್ರಜಾ ರಾಮ' ಚಿತ್ರದ ಟ್ರೇಲರ್​ನಲ್ಲಿ‌ ನಂಬಿಕೆ, ಸಂಬಂಧಗಳ ಸಂಘರ್ಷವಿದೆ- ಕಿಚ್ಚ ಸುದೀಪ್‌

author img

By

Published : Jul 17, 2023, 11:30 AM IST

ಡಾರ್ಲಿಂಗ್ ಕೃಷ್ಣ ಅಭಿನಯದ 'ಕೌಸಲ್ಯ ಸುಪ್ರಜಾ ರಾಮ' ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ಸುದೀಪ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Kausalya Supraja Rama team
ಕಿಚ್ಚ ಸುದೀಪ್​ ಜೊತೆ ಕೌಸಲ್ಯ ಸುಪ್ರಜಾ ರಾಮ ಚಿತ್ರ ತಂಡ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಟ್ರೇಲರ್​ನಿಂದಲೇ ಭರವಸೆ ಹುಟ್ಟಿಸಿರುವ ಹೊಸ ಚಿತ್ರ 'ಕೌಸಲ್ಯ ಸುಪ್ರಜಾ ರಾಮ'. ಲವ್ ಬರ್ಡ್ಸ್ ಹಾಗು ದಿಲ್ ಪಸಂದ್ ಚಿತ್ರಗಳ ನಂತರ ಡಾರ್ಲಿಂಗ್ ಕೃಷ್ಣ ನಟನೆಯ ಕೌಸಲ್ಯ ಸುಪ್ರಜಾ ರಾಮ ಚಿತ್ರಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ಸಿಕ್ಕಿದೆ. ಶಶಾಂಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದ ಟ್ರೇಲರ್ ಅನ್ನು ಸುದೀಪ್ ಅನಾವರಣಗೊಳಿಸಿದ್ದಾರೆ. ‌

ಬಳಿಕ ಮಾತನಾಡಿದ ಸುದೀಪ್, ಟ್ರೇಲರ್​ನಲ್ಲಿ ಬಹಳ ಒಳ್ಳೆಯ ಕಥೆ ಕಂಡೆ. ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷವಿದೆ. ಶಶಾಂಕ್ ಎಮೋಷನ್​ಗಳನ್ನು ಹಿಡಿದಿಡುವ ರೀತಿ ನನಗಿಷ್ಟ. ಹಾಡುಗಳು ಚೆನ್ನಾಗಿವೆ. ಚಿತ್ರವೂ ಸಹ ಚೆನ್ನಾಗಿ ಮೂಡಿ ಬಂದಿರುತ್ತದೆ. ಯಶಸ್ವಿಯಾಗಲಿ ಎಂದು ಹಾರೈಸಿದರು.

ನಟ ಕೃಷ್ಣ ಮಾತನಾಡಿ, ನಾನು ಇಷ್ಟು ವರ್ಷಗಳಲ್ಲಿ ಕೇಳಿರುವ ದಿ ಬೆಸ್ಟ್ ಕಥೆ ಇದು. ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ. ಶಶಾಂಕ್ ಅವರು ಬಂದಾಗ ಕಥೆ ಇರಲಿಲ್ಲ. ನಿಮಗೆ ಯಾವ ತರಹದ ಸಿನಿಮಾ ಬೇಕು ಎಂದು ಅವರು ನನ್ನನ್ನು ಕೇಳಿದರು. ನೀವು ನಿಮ್ಮ ಸ್ಟೈಲ್​ನಲ್ಲೇ ಮಾಡಿ ಎಂದು ಹೇಳಿದೆ. ಒಂದು ತಿಂಗಳ ನಂತರ ಈ ಕಥೆ ತಂದರು. ಬಹಳ ಸುಲಭವಾಗಿ ಚಿತ್ರದ ಕೆಲಸ ಮುಗಿದಿದೆ. ನಟನೆ ಮಾಡಿದ್ದೇ ಗೊತ್ತಾಗಲಿಲ್ಲ. ಈ ಸಿನಿಮಾ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು.

ನಿರ್ದೇಶಕ ಶಶಾಂಕ್ ಮಾತನಾಡಿ, ಕಥೆಗೆ ಹಲವು ಆಯಾಮಗಳಿವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ರಿಲೇಟ್ ಆಗಲಿದೆ ಎಂದು ತಿಳಿಸಿದರು. ಮುಂದುವರೆದು ಮಾತನಾಡಿ, ಈ ತರಹದ ಕಥೆ ಸಿಗೋದು ಕಷ್ಟ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಬಹುದು ಎಂಬ ನಿರೀಕ್ಷೆ ಇದೆ. ಕೃಷ್ಣ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನ ಮಾಡಿದ್ದೇನೆ. ಮಿಲನ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿದ್ದು ಬೇರೆ ಕಾರಣಕ್ಕಲ್ಲ, ಪ್ರತಿಭೆಗಾಗಿ. ಆ ಪಾತ್ರ ನಿಭಾಯಿಸುವುದು ಬಹಳ ಕಷ್ಟ. ಬಹಳ ನೈಜವಾಗಿ ಮತ್ತು ಸೆನ್ಸಿಬಲ್ ಆಗಿ ನಟಿಸಬೇಕಿತ್ತು. ನಿರೀಕ್ಷೆಗೂ ಮೀರಿ ಅವರು ನಟಿಸಿದ್ದಾರೆ. ಬೃಂದಾ ಅವರ ಅಭಿನಯ ಕೂಡ ಅದ್ಭುತವಾಗಿದೆ. ಜುಲೈ 28ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.

ಚಿತ್ರ ನಿರ್ಮಾಪಕ ಬಿ.ಸಿ. ಪಾಟೀಲ್ ಮಾತನಾಡಿ, ಶಶಾಂಕ್ ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಮ್ಮ ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಚಿತ್ರ‌ ನಿರ್ಮಾಣ ಮಾಡಿದ್ದೇವೆ.‌ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದವೆಂದರು.

ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿವೆ.

ಇದನ್ನೂ ಓದಿ: Darling Krishna: ಬಹುನಿರೀಕ್ಷಿತ 'ಕೌಸಲ್ಯಾ ಸುಪ್ರಜಾ ರಾಮ' ಚಿತ್ರದ ಟ್ರೇಲರ್​ ರಿಲೀಸ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಟ್ರೇಲರ್​ನಿಂದಲೇ ಭರವಸೆ ಹುಟ್ಟಿಸಿರುವ ಹೊಸ ಚಿತ್ರ 'ಕೌಸಲ್ಯ ಸುಪ್ರಜಾ ರಾಮ'. ಲವ್ ಬರ್ಡ್ಸ್ ಹಾಗು ದಿಲ್ ಪಸಂದ್ ಚಿತ್ರಗಳ ನಂತರ ಡಾರ್ಲಿಂಗ್ ಕೃಷ್ಣ ನಟನೆಯ ಕೌಸಲ್ಯ ಸುಪ್ರಜಾ ರಾಮ ಚಿತ್ರಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ಸಿಕ್ಕಿದೆ. ಶಶಾಂಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರದ ಟ್ರೇಲರ್ ಅನ್ನು ಸುದೀಪ್ ಅನಾವರಣಗೊಳಿಸಿದ್ದಾರೆ. ‌

ಬಳಿಕ ಮಾತನಾಡಿದ ಸುದೀಪ್, ಟ್ರೇಲರ್​ನಲ್ಲಿ ಬಹಳ ಒಳ್ಳೆಯ ಕಥೆ ಕಂಡೆ. ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷವಿದೆ. ಶಶಾಂಕ್ ಎಮೋಷನ್​ಗಳನ್ನು ಹಿಡಿದಿಡುವ ರೀತಿ ನನಗಿಷ್ಟ. ಹಾಡುಗಳು ಚೆನ್ನಾಗಿವೆ. ಚಿತ್ರವೂ ಸಹ ಚೆನ್ನಾಗಿ ಮೂಡಿ ಬಂದಿರುತ್ತದೆ. ಯಶಸ್ವಿಯಾಗಲಿ ಎಂದು ಹಾರೈಸಿದರು.

ನಟ ಕೃಷ್ಣ ಮಾತನಾಡಿ, ನಾನು ಇಷ್ಟು ವರ್ಷಗಳಲ್ಲಿ ಕೇಳಿರುವ ದಿ ಬೆಸ್ಟ್ ಕಥೆ ಇದು. ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ. ಶಶಾಂಕ್ ಅವರು ಬಂದಾಗ ಕಥೆ ಇರಲಿಲ್ಲ. ನಿಮಗೆ ಯಾವ ತರಹದ ಸಿನಿಮಾ ಬೇಕು ಎಂದು ಅವರು ನನ್ನನ್ನು ಕೇಳಿದರು. ನೀವು ನಿಮ್ಮ ಸ್ಟೈಲ್​ನಲ್ಲೇ ಮಾಡಿ ಎಂದು ಹೇಳಿದೆ. ಒಂದು ತಿಂಗಳ ನಂತರ ಈ ಕಥೆ ತಂದರು. ಬಹಳ ಸುಲಭವಾಗಿ ಚಿತ್ರದ ಕೆಲಸ ಮುಗಿದಿದೆ. ನಟನೆ ಮಾಡಿದ್ದೇ ಗೊತ್ತಾಗಲಿಲ್ಲ. ಈ ಸಿನಿಮಾ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು.

ನಿರ್ದೇಶಕ ಶಶಾಂಕ್ ಮಾತನಾಡಿ, ಕಥೆಗೆ ಹಲವು ಆಯಾಮಗಳಿವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ರಿಲೇಟ್ ಆಗಲಿದೆ ಎಂದು ತಿಳಿಸಿದರು. ಮುಂದುವರೆದು ಮಾತನಾಡಿ, ಈ ತರಹದ ಕಥೆ ಸಿಗೋದು ಕಷ್ಟ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಬಹುದು ಎಂಬ ನಿರೀಕ್ಷೆ ಇದೆ. ಕೃಷ್ಣ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನ ಮಾಡಿದ್ದೇನೆ. ಮಿಲನ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿದ್ದು ಬೇರೆ ಕಾರಣಕ್ಕಲ್ಲ, ಪ್ರತಿಭೆಗಾಗಿ. ಆ ಪಾತ್ರ ನಿಭಾಯಿಸುವುದು ಬಹಳ ಕಷ್ಟ. ಬಹಳ ನೈಜವಾಗಿ ಮತ್ತು ಸೆನ್ಸಿಬಲ್ ಆಗಿ ನಟಿಸಬೇಕಿತ್ತು. ನಿರೀಕ್ಷೆಗೂ ಮೀರಿ ಅವರು ನಟಿಸಿದ್ದಾರೆ. ಬೃಂದಾ ಅವರ ಅಭಿನಯ ಕೂಡ ಅದ್ಭುತವಾಗಿದೆ. ಜುಲೈ 28ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.

ಚಿತ್ರ ನಿರ್ಮಾಪಕ ಬಿ.ಸಿ. ಪಾಟೀಲ್ ಮಾತನಾಡಿ, ಶಶಾಂಕ್ ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಮ್ಮ ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಚಿತ್ರ‌ ನಿರ್ಮಾಣ ಮಾಡಿದ್ದೇವೆ.‌ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದವೆಂದರು.

ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿವೆ.

ಇದನ್ನೂ ಓದಿ: Darling Krishna: ಬಹುನಿರೀಕ್ಷಿತ 'ಕೌಸಲ್ಯಾ ಸುಪ್ರಜಾ ರಾಮ' ಚಿತ್ರದ ಟ್ರೇಲರ್​ ರಿಲೀಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.