ETV Bharat / entertainment

'ಸುದೀಪ್​ಗೆ ಬೆದರಿಕೆ ವಿಚಾರದಲ್ಲಿ ಸರ್ಕಾರ ಸುಮ್ಮನೆ ಕೂರಲ್ಲ': ಡಾ. ಸುಧಾಕರ್

author img

By

Published : Apr 5, 2023, 12:59 PM IST

ಸುದೀಪ್ ಅವರಿಗೆ ಬೆದರಿಕೆ ಹಾಕಿರುವ ವಿಚಾರದ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

minister Sudhakar reacts on Sudeep threat case
ಸುದೀಪ್ ಬೆದರಿಕೆ ಪ್ರಕರಣದ ಬಗ್ಗೆ ಸಚಿವ ಡಾ. ಸುಧಾಕರ್ ಹೇಳಿಕೆ
ಸುದೀಪ್ ಬೆದರಿಕೆ ಪ್ರಕರಣದ ಬಗ್ಗೆ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ

ಬೆಂಗಳೂರು: ಸುದೀಪ್ ಕನ್ನಡ ಚಿತ್ರರಂಗದ ಸುಪ್ರಸಿದ್ಧ ನಟ. ಅವರಿಗೆ ಯಾರೋ ಕಿಡಿಗೇಡಿಗಳು ಬೆದರಿಕೆ ಹಾಕಿದರೆ ಸರ್ಕಾರ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ನಗರದ ಹೊರವಲಯದಲ್ಲಿರುವ ಗೋಲ್ಡನ್ ಪಾಮ್ಸ್ ರೆಸಾರ್ಟ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ಬಿಜೆಪಿ ಸೇರ್ಪಡೆ ವಿಷಯ ನನಗೆ ಗೊತ್ತಿಲ್ಲ. ಮಧ್ಯಾಹ್ನ 1.30ಕ್ಕೆ ಮಾಧ್ಯಮಗೋಷ್ಟಿ ಇದೆ, ಬನ್ನಿ ಎಂದು ಸಿಎಂ ಕರೆದಿದ್ದಾರೆ. ಹಾಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು.

ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುದೀಪ್ ಓರ್ವ ಸುಪ್ರಸಿದ್ಧ ನಾಯಕ ನಟ. ಅವರಿಗೆ ಬೆದರಿಕೆ ಹಾಕಿದರೆ ಸರ್ಕಾರ ನೋಡಿಕೊಂಡು ಸುಮ್ಮನೆ ಕೂರಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ರೀತಿ ಮಾಡುವುದು ಹತಾಶ ಮನೋಭಾವ. ಇಷ್ಟು ವರ್ಷ ಇಲ್ಲದ ಆಪಾದನೆ ಈಗ ಮಾಡುತ್ತಿದ್ದಾರೆ ಅಂದರೆ ಏನು ಅರ್ಥ. ಸರ್ಕಾರ ಹಾಗೂ ರಾಜ್ಯದ ಜನ ಇದನ್ನೆಲ್ಲಾ ಗಮನಿಸುತ್ತಿದ್ದಾರೆ. ಬೆದರಿಕೆ ಹಾಕುವವರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂದು ಹೇಳಿದರು.

ಬಿಜೆಪಿಯು ಸಿನಿಮಾ ನಟರನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಸುಧಾಕರ್, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಕ್ಕೆ ಸಿನಿಮಾ ತಾರೆಯರ ಬಳಕೆ ಮಾಡುತ್ತಿರುವುದು ಹೊಸದೇನು ಅಲ್ಲ. ಚಲನಚಿತ್ರ ನಟರು, ಕ್ರೀಡಾಪಟುಗಳು ಒಂದು ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳುವುದು ಅಥವಾ ಒಂದು ಪಕ್ಷದ ಪರ ಪ್ರಚಾರ ಮಾಡುವುದು ಇದೇನು ಮೊದಲಲ್ಲ. ಅನೇಕ ವರ್ಷಗಳಿಂದ ಈ ರೀತಿ ನಡೆದುಕೊಂಡು ಬಂದಿದೆ. ಅದರಂತೆ ಈಗ ಸುದೀಪ್ ಬಂದು ನಮ್ಮ ಪಕ್ಷದ ಪರ ಪ್ರಚಾರ ಮಾಡಿದರೆ ಸ್ವಾಗತ ಮಾಡುತ್ತೇನೆ, ಅದಕ್ಕಿಂತ ಸಂತೋಷ ಏನಿದೆ ಎಂದರು.

ಇದನ್ನೂ ಓದಿ: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ.. ಸಿಸಿಬಿ ಹೆಗಲಿಗೆ ಪ್ರಕರಣದ ತನಿಖಾ ಜವಾಬ್ದಾರಿ

ನಟ ಸುದೀಪ್​ಗೆ ಬೆದರಿಕೆ: ಕನ್ನಡದ ಹೆಸರಾಂತ ನಟನಿಗೆ ಬೆದರಿಕೆ ಪತ್ರ ಬಂದಿದ್ದು, ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅನಾಮಧೇಯ ಪತ್ರಗಳ ಮೂಲಕ ಅವಾಚ್ಯವಾಗಿ ನಿಂದಿಸಲಾಗಿದೆ. ಮಾನಸಿಕ ಕಿರುಕುಳ ನೀಡಲಾಗಿದೆ. ಬೆದರಿಕೆ ಪತ್ರಗಳನ್ನು ಕಳುಹಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಟನ ಆಪ್ತ​ ಜಾಕ್​ ಮಂಜು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸುದೀಪ್​ ಪಕ್ಷ ಸೇರ್ಪಡೆ ಬಗ್ಗೆ ಬಿಜೆಪಿ ಹರಡುತ್ತಿರುವುದು ಸುಳ್ಳು ಸುದ್ದಿ.. ಪ್ರಕಾಶ್​ ರಾಜ್ ಟ್ವೀಟ್​​

ಮಾರ್ಚ್ 10 ರಂದು ಬಂದ ಅನಾಮಧೇಯ ಪತ್ರ ಇದಾಗಿದ್ದು, ಅಂದೇ ದೂರು ದಾಖಲಾಗಿದೆ. ಆದ್ರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುದೀಪ್ ಕುಟುಂಬ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿ ಬೆದರಿಕೆ ಹಾಕಲಾಗಿದೆ. ಖಾಸಗಿ ವಿಡಿಯೋ ರಿಲೀಸ್ ಮಾಡೋದಾಗಿ ಬೆದರಿಕೆ ಹಾಕಲಾಗಿದೆ ಎನ್ನುವ ಮಾಹಿತಿ ಇದೆ.

ಸುದೀಪ್ ಬೆದರಿಕೆ ಪ್ರಕರಣದ ಬಗ್ಗೆ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ

ಬೆಂಗಳೂರು: ಸುದೀಪ್ ಕನ್ನಡ ಚಿತ್ರರಂಗದ ಸುಪ್ರಸಿದ್ಧ ನಟ. ಅವರಿಗೆ ಯಾರೋ ಕಿಡಿಗೇಡಿಗಳು ಬೆದರಿಕೆ ಹಾಕಿದರೆ ಸರ್ಕಾರ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ನಗರದ ಹೊರವಲಯದಲ್ಲಿರುವ ಗೋಲ್ಡನ್ ಪಾಮ್ಸ್ ರೆಸಾರ್ಟ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ಬಿಜೆಪಿ ಸೇರ್ಪಡೆ ವಿಷಯ ನನಗೆ ಗೊತ್ತಿಲ್ಲ. ಮಧ್ಯಾಹ್ನ 1.30ಕ್ಕೆ ಮಾಧ್ಯಮಗೋಷ್ಟಿ ಇದೆ, ಬನ್ನಿ ಎಂದು ಸಿಎಂ ಕರೆದಿದ್ದಾರೆ. ಹಾಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು.

ನಟ ಸುದೀಪ್ ಅವರಿಗೆ ಬೆದರಿಕೆ ಪತ್ರ ಬಂದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುದೀಪ್ ಓರ್ವ ಸುಪ್ರಸಿದ್ಧ ನಾಯಕ ನಟ. ಅವರಿಗೆ ಬೆದರಿಕೆ ಹಾಕಿದರೆ ಸರ್ಕಾರ ನೋಡಿಕೊಂಡು ಸುಮ್ಮನೆ ಕೂರಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ರೀತಿ ಮಾಡುವುದು ಹತಾಶ ಮನೋಭಾವ. ಇಷ್ಟು ವರ್ಷ ಇಲ್ಲದ ಆಪಾದನೆ ಈಗ ಮಾಡುತ್ತಿದ್ದಾರೆ ಅಂದರೆ ಏನು ಅರ್ಥ. ಸರ್ಕಾರ ಹಾಗೂ ರಾಜ್ಯದ ಜನ ಇದನ್ನೆಲ್ಲಾ ಗಮನಿಸುತ್ತಿದ್ದಾರೆ. ಬೆದರಿಕೆ ಹಾಕುವವರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂದು ಹೇಳಿದರು.

ಬಿಜೆಪಿಯು ಸಿನಿಮಾ ನಟರನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ನಿರ್ಧರಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಸುಧಾಕರ್, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಕ್ಕೆ ಸಿನಿಮಾ ತಾರೆಯರ ಬಳಕೆ ಮಾಡುತ್ತಿರುವುದು ಹೊಸದೇನು ಅಲ್ಲ. ಚಲನಚಿತ್ರ ನಟರು, ಕ್ರೀಡಾಪಟುಗಳು ಒಂದು ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳುವುದು ಅಥವಾ ಒಂದು ಪಕ್ಷದ ಪರ ಪ್ರಚಾರ ಮಾಡುವುದು ಇದೇನು ಮೊದಲಲ್ಲ. ಅನೇಕ ವರ್ಷಗಳಿಂದ ಈ ರೀತಿ ನಡೆದುಕೊಂಡು ಬಂದಿದೆ. ಅದರಂತೆ ಈಗ ಸುದೀಪ್ ಬಂದು ನಮ್ಮ ಪಕ್ಷದ ಪರ ಪ್ರಚಾರ ಮಾಡಿದರೆ ಸ್ವಾಗತ ಮಾಡುತ್ತೇನೆ, ಅದಕ್ಕಿಂತ ಸಂತೋಷ ಏನಿದೆ ಎಂದರು.

ಇದನ್ನೂ ಓದಿ: ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ.. ಸಿಸಿಬಿ ಹೆಗಲಿಗೆ ಪ್ರಕರಣದ ತನಿಖಾ ಜವಾಬ್ದಾರಿ

ನಟ ಸುದೀಪ್​ಗೆ ಬೆದರಿಕೆ: ಕನ್ನಡದ ಹೆಸರಾಂತ ನಟನಿಗೆ ಬೆದರಿಕೆ ಪತ್ರ ಬಂದಿದ್ದು, ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅನಾಮಧೇಯ ಪತ್ರಗಳ ಮೂಲಕ ಅವಾಚ್ಯವಾಗಿ ನಿಂದಿಸಲಾಗಿದೆ. ಮಾನಸಿಕ ಕಿರುಕುಳ ನೀಡಲಾಗಿದೆ. ಬೆದರಿಕೆ ಪತ್ರಗಳನ್ನು ಕಳುಹಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಟನ ಆಪ್ತ​ ಜಾಕ್​ ಮಂಜು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸುದೀಪ್​ ಪಕ್ಷ ಸೇರ್ಪಡೆ ಬಗ್ಗೆ ಬಿಜೆಪಿ ಹರಡುತ್ತಿರುವುದು ಸುಳ್ಳು ಸುದ್ದಿ.. ಪ್ರಕಾಶ್​ ರಾಜ್ ಟ್ವೀಟ್​​

ಮಾರ್ಚ್ 10 ರಂದು ಬಂದ ಅನಾಮಧೇಯ ಪತ್ರ ಇದಾಗಿದ್ದು, ಅಂದೇ ದೂರು ದಾಖಲಾಗಿದೆ. ಆದ್ರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸುದೀಪ್ ಕುಟುಂಬ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿ ಬೆದರಿಕೆ ಹಾಕಲಾಗಿದೆ. ಖಾಸಗಿ ವಿಡಿಯೋ ರಿಲೀಸ್ ಮಾಡೋದಾಗಿ ಬೆದರಿಕೆ ಹಾಕಲಾಗಿದೆ ಎನ್ನುವ ಮಾಹಿತಿ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.